ರಸ್ತೆ ಗುಂಡಿ ಮುಚ್ಚಿದ ಹಬ್ಬಕ್ಕೆಂದು ವಿದೇಶದಿಂದ ಗ್ರಾಮಕ್ಕೆ ಬಂದಿದ್ದ ಅನಿವಾಸಿ ಭಾರತೀಯರು

KannadaprabhaNewsNetwork |  
Published : Apr 07, 2025, 12:36 AM ISTUpdated : Apr 07, 2025, 12:58 PM IST
೫ಶಿರಾ೪: ಶಿರಾ ತಾಲೂಕು, ಬುಕ್ಕಾಪಟ್ಟಣ ಹೋಬಳಿಯ ರಸ್ತೆಗಳು ಗುಂಡಿ ಬಿದ್ದು ಪ್ರತಿನಿತ್ಯ ಅಪಘಾತ ವಾಗುತ್ತಿರುವುದು ಬಗ್ಗೆ ಪತ್ರಿಕೆಗಳಲ್ಲಿ ಮಾಧ್ಯಮಗಳಲ್ಲಿ ಹಲವಾರು ಬಾರಿ ವರದಿಗಳು ಪ್ರಕಟವಾದರೂ ಸಹ ಎಚ್ಚೆತ್ತುಕೊಳ್ಳದ ಅಕಾರಿಗಳು ಹಾಗೂ ಜನಪ್ರತಿನಿಗಳನ್ನು ಎಚ್ಚರಿಸಲು ಹಬ್ಬಕ್ಕೆಂದು ವಿದೇಶದಿಂದ ಭಾರತಕ್ಕೆ ಬಂದಿದ್ದ ಅನಿವಾಸಿ ಭಾರತೀಯರು ರಸ್ತೆಗಳಲ್ಲಿನ ಗುಂಡಿಗಳಿಗೆ ಮಣ್ಣು ಹಾಕುವ ಮೂಲಕ ಗಾಢ ನಿದ್ರೆಯಲ್ಲಿದ್ದ ಅಕಾರಿಗಳನ್ನು ಎಚ್ಚರಿಸುವ ಕೆಲಸ ಮಾಡಿದ್ದಾರೆ. | Kannada Prabha

ಸಾರಾಂಶ

ಹಬ್ಬಕ್ಕೆಂದು ವಿದೇಶದಿಂದ ಗ್ರಾಮಕ್ಕೆ ಬಂದಿದ್ದ ಅನಿವಾಸಿ ಭಾರತೀಯರು ರಸ್ತೆಗಳಲ್ಲಿನ ಗುಂಡಿಗಳಿಗೆ ಮಣ್ಣು ಹಾಕುವ ಮೂಲಕ ಗಾಢ ನಿದ್ರೆಯಲ್ಲಿದ್ದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳನ್ನು ಎಚ್ಚರಿಸುವ ಕೆಲಸ ಮಾಡಿದ್ದಾರೆ.

  ಶಿರಾ :  ಹಬ್ಬಕ್ಕೆಂದು ವಿದೇಶದಿಂದ ಗ್ರಾಮಕ್ಕೆ ಬಂದಿದ್ದ ಅನಿವಾಸಿ ಭಾರತೀಯರು ರಸ್ತೆಗಳಲ್ಲಿನ ಗುಂಡಿಗಳಿಗೆ ಮಣ್ಣು ಹಾಕುವ ಮೂಲಕ ಗಾಢ ನಿದ್ರೆಯಲ್ಲಿದ್ದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳನ್ನು ಎಚ್ಚರಿಸುವ ಕೆಲಸ ಮಾಡಿದ್ದಾರೆ.

ಶಿರಾ ತಾಲೂಕು ಬುಕ್ಕಾಪಟ್ಟಣ ಹೋಬಳಿಯ ಹೊಸಪಾಳ್ಯ ಕೆರೆ ಏರಿಯ ಬಳಿ ಮಾದೇನಹಳ್ಳಿ ಗ್ರಾಮದ ಚೇರ್ಮನ್ ರಂಗಪ್ಪನವರ ಪುತ್ರ ಶ್ರೀನಿವಾಸ್ ಅಮೆರಿಕದಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆ.

ಅವರಂತೆಯೇ ಯೋಗೇಶ್ ರವರು ಡೆನ್ಮಾರ್ಕ್ ನಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್ ಆಗಿ ಕೆಲಸದಲ್ಲಿದ್ದು, ಯುಗಾದಿ ಹಬ್ಬಕ್ಕಾಗಿ ಊರಿಗೆ ಬಂದ ಈ ಎಂಜಿನಿಯರ್ ಗಳು ತಮ್ಮೂರಿಗೆ ಹೋಗಬೇಕಾದ ರಸ್ತೆಯ ಗುಂಡಿಗಳನ್ನು ನೋಡಿ ತಮ್ಮ ಸ್ವಂತ ಖರ್ಚಿನಲ್ಲಿ ರಸ್ತೆ ಇಕ್ಕೆಲಗಳಲ್ಲಿ ಗುಂಡಿ ಬಿದ್ದ ರಸ್ತೆಗಳಿಗೆ ಮಣ್ಣು ಹಾಕುವ ಮೂಲಕ ಅಧಿಕಾರಿಗಳಿಗೆ ನಾಚಿಕೆ ಬರುವಂತೆ ಮಾಡಿದ್ದಾರೆ. 

ಮಾದೇನಹಳ್ಳಿ ಗ್ರಾಮದ ವೇಣು ಇವರ ಕಾರ್ಯಕ್ಕೆ ಕೈಜೋಡಿಸಿದ್ದು ಉಚಿತ ಟ್ರ್ಯಾಕ್ಟರ್ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ಯಾವುದೇ ಫಲಾಪೇಕ್ಷೆಗಳನ್ನು ಹೊಂದಿರದ ಎಂಜಿನಿಯರ್ ಗಳ ಈ ಕಾರ್ಯಕ್ಕೆ ಗ್ರಾಮಸ್ಥರು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದು ಕೊನೆಗೂ ನಮ್ಮೂರಿನ ರಸ್ತೆಗಳ ಗುಂಡಿಗಳಿಗೆ ಮುಕ್ತಿ ಕಾಣಿಸಲು ವಿದೇಶದಿಂದ ಬರಬೇಕಾಯಿತು ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''