ಜಾತಿ ಸಮಾವೇಶ ಅಲ್ಲ, ಬಸವ ತತ್ವ ಸಮಾವೇಶ: ಇಮ್ಮಡಿ ಸಿದ್ದರಾಮ ಶ್ರೀ

KannadaprabhaNewsNetwork |  
Published : Sep 09, 2025, 01:01 AM IST
ಸೆ.10 ರಂದು ಬಸವ ಸಂಸ್ಕೃತಿ ಅಭಿಯಾನ ಕಾರ್ಯಕ್ರಮ -ಭೋವಿ ಪೀಠದ ಶ್ರೀ ಇಮ್ಮಡಿ ಸಿದ್ದರಾಮ ಸ್ವಾಮೀಜಿ | Kannada Prabha

ಸಾರಾಂಶ

ಶ್ರೇಣಿಕೃತ ವ್ಯವಸ್ಥೆ ಹೋಗಲಾಡಿಸಿ ಇನ್ನಷ್ಟು ಸಮರ್ಥವಾಗಿ ಸಮಸಮಾಜ ನಿರ್ಮಾಣದ ಉದ್ದೇಶದಿಂದ ಸೆ.10ರಂದು ಬಸವ ಸಂಸ್ಕೃತಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ನಗರದ ಭೋವಿ ಪೀಠದ ಶ್ರೀ ಇಮ್ಮಡಿ ಸಿದ್ದರಾಮ ಸ್ವಾಮೀಜಿ ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಶ್ರೇಣಿಕೃತ ವ್ಯವಸ್ಥೆ ಹೋಗಲಾಡಿಸಿ ಇನ್ನಷ್ಟು ಸಮರ್ಥವಾಗಿ ಸಮಸಮಾಜ ನಿರ್ಮಾಣದ ಉದ್ದೇಶದಿಂದ ಸೆ.10ರಂದು ಬಸವ ಸಂಸ್ಕೃತಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ನಗರದ ಭೋವಿ ಪೀಠದ ಶ್ರೀ ಇಮ್ಮಡಿ ಸಿದ್ದರಾಮ ಸ್ವಾಮೀಜಿ ಹೇಳಿದರು.

ನವನಗರದ ಭೋವಿ ಪೀಠದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವಣ್ಣನವರನ್ನು ಒಪ್ಪಿಕೊಂಡವರು ಸೇರಿದಂತೆ ನಾಡಿನ ನಾನಾ ಮಠಾಧೀಶರು ಈ ಅಭಿಯಾನದಲ್ಲಿ ಭಾಗವಹಿಸಲಿದ್ದಾರೆ. ಇದು ಜಾತಿ ಸಮಾವೇಶ ಅಲ್ಲ. ಬಸವ ತತ್ವ ಸಮಾಜವೇಶ, ಜಾತ್ಯತೀತ ಸಮಾವೇಶ ಎಂದು ಹೇಳಿದರು.

ಚರಂತಿಮಠದ ಪ್ರಭು ಸ್ವಾಮೀಜಿ, ಕೂಡಲಸಂಗಮದ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ, ಗುಳೇದಗುಡ್ಡ ಗುರುಸಿದ್ದೇಶ್ವರ ಬ್ರಹ್ಮನಮಠದ ಬಸವರಾಜ ಪಟ್ಟದಾರ್ಯ ಶ್ರೀಗಳು ಮಾತನಾಡಿ, ಸಮಾಜದಲ್ಲಿನ ಎಲ್ಲರೂ ಒಗ್ಗಟ್ಟಾಗಿ ಬಾಳುವ ನಿಟ್ಟಿನಲ್ಲಿ ಈ ಸಮಾವೇಶ ಆಯೋಜನೆ ಮಾಡಲಾಗಿದೆ. ಆ ಹಿನ್ನೆಲೆಯಲ್ಲಿ ಈಗ ರಾಜ್ಯದಲ್ಲಿ ಶರಣ ಸಂಸ್ಕೃತಿ ಅಭಿಯಾನ ಆರಂಭಿಸಲಾಗಿದೆ. ಅದರ ನಿಮಿತ್ತ ಬಾಗಲಕೋಟೆ ನವನಗರದ ಕಲಾಭವನದಲ್ಲಿ ಬಸವ ಸಂಸ್ಕೃತಿ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ ಎಂದರು.ನಾಳೆ ಅಭಿಯಾನ ಉದ್ಘಾಟನೆ:

ಲಿಂಗಾಯತ ಮಠಾಧಿ ಪತಿಗಳ ಒಕ್ಕೂಟ ಹಾಗೂ ಸಮಸ್ತ ಬಸವಪರ ಸಂಘಟನೆಗಳ ಆಶ್ರಯದಲ್ಲಿ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಸೆ.10ರಂದು ಸಂಜೆ 6 ಗಂಟೆಗೆ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದ್ದು, ಗದಗ-ಡಂಬಳದ ಎಡೆಯೂರ ತೋಟಂದಾರ್ಯ ಮಠದ ಡಾ.ತೋಂಟದ ಸಿದ್ದರಾಮ ಸ್ವಾಮೀಜಿ, ಸಾಣೆಹಳ್ಳಿ ತರಳುಬಾಳು ಶಾಖಾಮಠದ ಪಂಡಿತಾರಾರ್ಧ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.

ಇಳಕಲ್-ಚಿತ್ತರಗಿ ಸಂಸ್ಥಾನಮಠದ ಗುರು ಮಹಾಂತ ಶಿವಯೋಗಿಗಳು ಅಧ್ಯಕ್ಷತೆ ವಹಿಸುವರು. ಬೇಲೂರು ಗುರುಬಸವೇಶ್ವರ ಮಠದ ಡಾ.ಮಹಾಂತ ಬಸವಲಿಂಗ ಸ್ವಾಮೀಜಿ, ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ಡಾ.ಪ್ರಶಾಂತ ನಾಯಕ ಅವರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಬಳಿಕ ಸಾಣೆಹಳ್ಳಿ ಶಿವಸಂಚಾರ ತಂಡದಿಂದ ಜಂಗಮದೆಡೆಗೆ ನಾಟಕ ಪ್ರದರ್ಶನ ಗೊಳ್ಳಲಿದೆ ಎಂದು ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಬಸವರಾಜ ಕಡಪಟ್ಟಿ, ಬಸವರಾಜ ಅನಗವಾಡಿ, ಲುಕ್, ಜಿ.ಎಂ.ಸಿಂಧೂರ, ಮುತ್ತು ಜೋಳದ, ಬರಗುಂಡಿ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಠ್ಯೇತರ ಚಟುವಟಿಕೆಗಳಿಗೆ ವಿಟಿಯು ಆದ್ಯತೆ
ಮಸ್ಟ್ 3ನೇ ಪುಟಕ್ಕೆ.... ನೀರಿನ ಹೊಂಡಕ್ಕೆ ಬಿದ್ದು ಯುವಕ ಸಾವು