10ಕ್ಕೂ ಹೆಚ್ಚು ಸಿಬ್ಬಂದಿಗೆ 3 ವರ್ಷದಿಂದ ವೇತನ, ಸಾರಿಗೆ ಭತ್ಯೆ ಸಿಗದೆ ಪರದಾಟ
ಅಂಬಳೆ ವೀರಭದ್ರನಾಯಕ
ಕನ್ನಡಪ್ರಭ ವಾರ್ತೆ ಯಳಂದೂರುಪಟ್ಟಣ ಪಂಚಾಯ್ತಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ 10ಕ್ಕೂ ಹೆಚ್ಚು ಸಿಬ್ಬಂದಿಗಳ ಟೆಂಡರ್ ಪ್ರಕ್ರಿಯೆ ಕಳೆದ 3 ವರ್ಷಗಳಿಂದ ವಿಳಂಬವಾಗಿದ್ದು, ಸಿಬ್ಬಂದಿ ಅನಿಶ್ಚಿತತೆಯಲ್ಲಿ ಕೆಲಸ ಮಾಡುವಂತಾಗಿದೆ.
ನಿಯಮದ ಪ್ರಕಾರ ಪ್ರತಿ ವರ್ಷ ಟೆಂಡರ್ ಪ್ರಕ್ರಿಯೆ ಮೂಲಕ ಏಜೆನ್ಸಿಯನ್ನು ಆಯ್ಕೆ ಮಾಡಬೇಕಾಗುತ್ತದೆ. ಆದರೆ ಕಳೆದ 3 ವರ್ಷಗಳಿಂದ ಟೆಂಡರ್ ಕರೆಯದೆ ಕೆಲಸ ಮಾಡಿಸಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಉಡುಪಿ ಮೂಲದ ಶ್ರೀಸಾಯಿ ಟೆಂಡರ್ ನವೀಕರಣವಾಗದ ಕಾರಣ ಸಿಬ್ಬಂದಿಗೆ ಪ್ರತಿ ತಿಂಗಳು ಸಕಾಲಕ್ಕೆ ವೇತನ ಸಿಗುತ್ತಿಲ್ಲ. ಇಎಸ್ಐ, ಇಪಿಎಫ್ ಸೌಲಭ್ಯಗಳೂ ಸರಿಯಾಗಿ ದೊರೆಯುತ್ತಿಲ್ಲ ಎಂದು ಸಿಬ್ಬಂದಿ ಅಳಲು ತೋಡಿಕೊಂಡಿದ್ದಾರೆ. ಪುರಸಭೆಯ ಶುದ್ಧ ಕುಡಿಯುವ ನೀರು ಪೂರೈಕೆ, ಕಸ ವಿಲೇವಾರಿ, ಕಚೇರಿ ಕೆಲಸಗಳೆಲ್ಲಾ ಇವರ ಮೇಲೆ ಅವಲಂಬಿತವಾಗಿದೆ.
2024-25, 2025-26, 2026-27ನೇ ಸಾಲಿನಿಂದ ಕಾಲ ಕಾಲಕ್ಕೆ ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುವ ಕೆಲಸಗಾರರನ್ನು ಪ್ರತಿಯೊಂದು ವರ್ಷಕ್ಕೆ ಇಎಸ್ಐ, ಪಿಎಫ್ ಜಮಾ ಮಾಡಬೇಕು. ಜತೆಗೆ ಪ್ರತಿ ವರ್ಷ ಹೊರಗುತ್ತಿಗೆ ಕೆಲಸಗಾರರಿಗೆ ಆದೇಶ ಪತ್ರವನ್ನು ನೀಡಬೇಕು. ಈ ಬಗ್ಗೆ ಹಲವು ಬಾರಿ ಮೌಖಿಕವಾಗಿ ಮನವಿ ಮಾಡಿದರೂ ಪಟ್ಟಣ ಪಂಚಾಯ್ತಿ ಆಡಳಿತ ಮಂಡಳಿ ಮತ್ತು ಮುಖ್ಯಾಧಿಕಾರಿಗಳು ಟೆಂಡರ್ ಪ್ರಕ್ರಿಯೆ ಬಗ್ಗೆ ಗಮನ ಹರಿಸುತ್ತಿಲ್ಲ. ಇದರಿಂದ ಸರ್ಕಾರಕ್ಕೆ ಕಂದಾಯ ನಷ್ಟವಾಗುವ ಜೊತೆಗೆ ಸಿಬ್ಬಂದಿ ಬದುಕು ಪ್ರಶ್ನಾರ್ಹವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಪಟ್ಟಣ 11 ವಾರ್ಡ್ಗಳಲ್ಲಿ ಜನರಿಗೆ ಸಕಾಲಕ್ಕೆ ಕುಡಿಯುವ ನೀರು ಸರಬರಾಜು, ಘನ ತ್ಯಾಜ್ಯ ತೆರವು ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸುವಲ್ಲಿ ಪಟ್ಟಣ ಪಂಚಾಯ್ತಿ ವಿಫಲವಾಗಿದೆ.
--ಯಳಂದೂರು ಪಟ್ಟಣ ಪಂಚಾಯ್ತಿ ಕಚೇರಿಯಲ್ಲಿ ಹೊರಗುತ್ತಿಗೆ ಟೆಂಡರ್ ಕರೆಯದೇ ಇರುವ ಬಗ್ಗೆ ಮುಖ್ಯಾಧಿಕಾರಿಗಳಗೆ ಸೂಚಿಸಿ ಮೇಲಧಿಕಾರಿಗಳಿಗೆ ಮರು ಟೆಂಡರ್ ನಡೆಯುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು.
---
20 ವೈಎಲ್ಡಿ ಚಿತ್ರ 01 ನಯನಾ, ವಿಶೇಷಾಧಿಕಾರಿ, ಪಟ್ಟಣ ಪಂಚಾಯಿತಿ--
22ಸಿಎಚ್ಎನ್13 ಯಳಂದೂರು ಪಟ್ಟಣ ಪಂಚಾಯಿತಿ ಕಚೇರಿ