ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಅವಧಿ ಮುಗಿದ ಮಳಿಗೆ ಹರಾಜು
ಚಿಂತಾಮಣಿ ನಗರದ ಝಾನ್ಸಿರಾಣಿ ಲಕ್ಷಿಬಾಯಿ ಕ್ರೀಡಾಂಗಣದ ಕೆಲವು ಮಳಿಗೆಗಳಿಂದ ಸುಮಾರು 1.35 ಕೋಟಿ ಬಾಡಿಗೆಯನ್ನು ವಸೂಲಿ ಮಾಡುವುದು ಜೊತೆಗೆ ಈ ಹಣವನ್ನು ಕ್ರೀಡಾಂಗಣದ ಅಭಿವೃದ್ಧಿಗೆ ಬಳಸಿ ಕೊಳ್ಳುವುದು ನಮ್ಮ ಆದ್ಯತೆಯಾಗಿದೆ. ಈ ಕಾರ್ಯ ಕಡ್ಡಾಯವಾಗಿ ಆಗಲೇಬೇಕು. ಜೊತೆಗೆ 193 ಮಳಿಗೆಗಳ ಪೈಕಿ ಹರಾಜು ಅವಧಿ ಮುಗಿದಿರುವ ಮಳಿಗೆಗಳನ್ನು ಮರು ಹರಾಜು ಮಾಡಲು ಸೂಚನೆ ನೀಡಿರುವುದಾಗಿ ತಿಳಿಸಿದರು.ಜಿಲ್ಲಾ ಕೇಂದ್ರದ ಕ್ರೀಡಾಂಗಣ ಸೇರಿದಂತೆ ತಾಲೂಕು ಕೇಂದ್ರಗಳ ಕ್ರೀಡಾಂಗಣಗಳನ್ನು ಅಭಿವೃದ್ಧಿ ಮಾಡಲು ಕ್ರಮವಹಿಸಲಾಗುತ್ತಿದೆ. ಜಿಲ್ಲಾ ಕೇಂದ್ರದಲ್ಲಿನ ಸರ್ ಎಂ.ವಿ ಕ್ರೀಡಾಂಗಣವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ 69 ಕೋಟಿ ವೆಚ್ಚದಲ್ಲಿ ನಿರ್ಮಿಸಲಿದ್ದು, ಮೊದಲ ಹಂತದ ಪೆವಿಲಿಯನ್ ಬ್ಲಾಕ್ ನಿರ್ಮಿಸಲು 10 ಕೋಟಿ ಹಣ ಮಂಜೂರಾಗಿದೆ ಎಂದರು.
ಚಿಂತಾಮಣಿಯ ಝಾನ್ಸಿ ರಾಣಿ ಲಕ್ಷ್ಮೀಬಾಯಿ ಕ್ರೀಡಾಂಗಣದಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ ಮಾಡಲು 9 ಕೋಟಿ ಮಂಜೂರಾಗಿದೆ. ಚಿಂತಾಮಣಿ ನಗರದ ಲೋಕೋಪಯೋಗಿ ಇಲಾಖೆಯ ಬಳಿ 9 ಎಕರೆ ಜಾಗದಲ್ಲಿ ನೈಜ ಹುಲ್ಲು ಹಾಸಿನ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಲು 7 ಕೋಟಿ ಅನುದಾನ ಮಂಜೂರಾಗಿದೆ. ಈ ಎಲ್ಲಾ ಕಾರ್ಯಗಳ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದರು.ಸೀಟ್ ಬ್ಲಾಕ್ ದಂಧೆ: ದೂರು
ಈ ಸಂದರ್ಭದಲ್ಲಿ ಶಿಡ್ಲಘಟ್ಟ ಶಾಸಕ ಬಿ.ಎನ್. ರವಿಕುಮಾರ್, ಡೀಸಿ ಪಿ.ಎನ್ ರವೀಂದ್ರ, ಎಸ್ಪಿ ಕುಶಾಲ್ ಚೌಕ್ಸೆ, ಅಪರ ಡೀಸಿ ಡಾ. ಎನ್.ಭಾಸ್ಕರ್, ಎಸಿ ಡಿ.ಹೆಚ್.ಅಶ್ವಿನ್ ಹಾಗೂ ಇತರ ಅಧಿಕಾರಿಗಳು ಇದ್ದರು..