ಬೀದರ್‌ ಉತ್ಸವ ಸಭೆ ನಡೆಸಲು ಡಿಸಿಗೆ ಸೂಚನೆ:ಖಂಡ್ರೆ

KannadaprabhaNewsNetwork |  
Published : Dec 02, 2024, 01:19 AM IST

ಸಾರಾಂಶ

Notice to DC to hold Bidar festival meeting: Khandre

ಬೀದರ್‌ ಉತ್ಸವ ಆಯೋಜನೆ ಕುರಿತಂತೆ ಶೀಘ್ರದಲ್ಲಿ ಸಭೆ ನಡೆಸಿ ಸಾರ್ವಜನಿಕ ಮುಖಂಡರ ಅಭಿಪ್ರಾಯ ಸಂಗ್ರಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಅವರು ಈ ಕುರಿತು ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿ, ಬೀದರ್ ಉತ್ಸವ ಕುರಿತಾಗಿ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲಾಗುವದು ಎಂದರು. ಬೀದರ್‌ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಭ್ರಷ್ಟಾಚಾರ ನಡೆದಿರುವ ಕುರಿತ ಪ್ರಶ್ನೆಗೆ ಉತ್ತರಿಸಿ, ಈ ಹಿಂದೆಯೇ ನಾನು ಭ್ರಷ್ಟ ಅಧಿಕಾರಿಗಳನ್ನು ತೆಗೆದು ಹಾಕುವಂತೆ ಸೂಚಿಸಿದ್ದೆ, ಈಗ ಅವರೇ ಸಿಕ್ಕು ಹಾಕಿಕೊಂಡಿದ್ದಾರೆ, ಭ್ರಷ್ಟಾಚಾರ ಕ್ಯಾನ್ಸರ್‌ ಇದ್ದಂತಿದೆ. ಇದಕ್ಕೆ ಕಡಿವಾಣ ಹಾಕಲು ಸರ್ಕಾರ ಎಲ್ಲ ಶಿಸ್ತು ಕ್ರಮಗಳನ್ನು ಕೈಗೊಳ್ಳುತ್ತದೆ ಎಂದು ತಿಳಿಸಿದರು.

----

ಫೈಲ್‌ 1ಬಿಡಿ5

---

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!