ಚಿಪ್ಪಿಗರ ಕೆರೆ ಅಭಿವೃದ್ಧಿ ಕಾಮಗಾರಿ ತನಿಖೆಗೆ ಸೂಚನೆ

KannadaprabhaNewsNetwork |  
Published : Dec 14, 2024, 12:51 AM IST
ದಿ.13 ಆರ್‌ಪಿಟಿ 2ಪಿ ರಿಪ್ಪನ್‍ಪೇಟೆ ಪಟ್ಟಣದ ಚಿಪ್ಪಿಗರಕೆರೆಯನ್ನು ಜಿಲ್ಲಾ ಪಂಚಾಯತ್‍ನ ಯೋಜನಾ ನಿರ್ದೇಶಕರಾದ ಆರ್.ಬಿ.ನಂದಿನಿ ರವರು ಪರಿಶೀಲಿಸಿದರು. | Kannada Prabha

ಸಾರಾಂಶ

ಪಟ್ಟಣದ ಹೊಸನಗರ ರಸ್ತೆಯ ಚಿಪ್ಪಿಗರ ಕೆರೆಯನ್ನು ಗ್ರಾಮಾಡಳಿತವು 15ನೇ ಹಣಕಾಸು ಅನುದಾನದಲ್ಲಿ ಅಭಿವೃದ್ಧಿಪಡಿಸಿದ ಕಾಮಗಾರಿಯ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಜಿಪಂ ಯೋಜನಾ ನಿರ್ದೇಶಕ ನಂದಿನಿ ಆರ್.ಬಿ. ಅಭಿಯಂತರರಿಗೆ ಗುರುವಾರ ಸೂಚಿಸಿದರು.

ರಿಪ್ಪನ್‍ಪೇಟೆ: ಪಟ್ಟಣದ ಹೊಸನಗರ ರಸ್ತೆಯ ಚಿಪ್ಪಿಗರ ಕೆರೆಯನ್ನು ಗ್ರಾಮಾಡಳಿತವು 15ನೇ ಹಣಕಾಸು ಅನುದಾನದಲ್ಲಿ ಅಭಿವೃದ್ಧಿಪಡಿಸಿದ ಕಾಮಗಾರಿಯ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಜಿಪಂ ಯೋಜನಾ ನಿರ್ದೇಶಕ ನಂದಿನಿ ಆರ್.ಬಿ., ಅಭಿಯಂತರರಿಗೆ ಗುರುವಾರ ಸೂಚಿಸಿದರು.

ಪಟ್ಟಣದ ಗ್ರಾಪಂ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ 2023-24 ನೇ ಸಾಲಿನ ಗ್ರಾಪಂ ವಾರ್ಷಿಕ ಜಮಾಬಂಧಿ ಕಾರ್ಯಕ್ರಮದಲ್ಲಿ ಚಿಕ್ಕಬೀರನ ಕೆರೆಯನ್ನು ಕಳೆದೊಂದು ವರ್ಷದ ಹಿಂದೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ನಮ್ಮೂರು-ನಮ್ಮಕೆರೆ ಯೋಜನೆ ಮತ್ತು ಗ್ರಾಮಸ್ಥರ ನೆರವಿನಿಂದ ₹13 ಲಕ್ಷ ವೆಚ್ಚದಲ್ಲಿ ಹೂಳು ತೆಗೆದು ದಂಡೆ ನಿರ್ಮಿಸುವ ಕಾಮಗಾರಿಯನ್ನು ಅನುಷ್ಠಾನಗೊಳಿಸಲಾಗಿತ್ತು.

ಗ್ರಾಮಾಡಳಿತವು ಇದೇ ಕೆರೆ ಕಾಮಗಾರಿಗೆಂದು ₹7 ಲಕ್ಷ ಮೊತ್ತವನ್ನು ಇರಿಸಿಕೊಂಡು, ಕಾಮಗಾರಿಗೆ ಒಟ್ಟು ₹4 ಲಕ್ಷದ 98 ಸಾವಿರ ವೆಚ್ಚ ಮಾಡಿರುವುದಾಗಿ ಜಮಾಬಂಧಿಯಲ್ಲಿ ಪ್ರಸ್ತಾಪಿಸಿದಾಗ ಆಕ್ಷೇಪವೆತ್ತಿದ ಗ್ರಾಮಸ್ಥರು ಕಾಮಗಾರಿ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿದ ಹಿನ್ನೆಲೆಯಲ್ಲಿ ಯೋಜನಾ ನಿರ್ದೇಶಕರು ಸಭೆಯಲ್ಲಿದ್ದ ಜಿ.ಪಂ.ಅಭಿಯಂತರ ಓಂಕಾರಪ್ಪರವರಿಗೆ ಸಮಗ್ರ ವರದಿ ನೀಡಲು ಸೂಚನೆ ನೀಡಿದರು. ಗ್ರಾಪಂ ವ್ಯಾಪ್ತಿಯಲ್ಲಾದ ವಿವಿಧ ಕಾಮಗಾರಿಗಳ ಬಗ್ಗೆ ಗ್ರಾಮಾಡಳಿತವು ಲೆಕ್ಕಪತ್ರವನ್ನು ಮಂಡಿಸಿತು. ನಂತರ ಚಿಪ್ಪಿಗರಕೆರೆಗೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ, ಸದಸ್ಯರಾದ ಗಣಪತಿ, ಮಲ್ಲಿಕಾರ್ಜುನ, ಮಂಜುಳ ಪಿಡಿಓ ನಾಗರಾಜ್, ಇನ್ನಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ : ಡಿಕೆಶಿ
ದರ ಏರಿಕೆಯಿಂದ ರಾಜ್ಯಕ್ಕೆ ಲಾಭ : ಅಶೋಕ್‌