ಗುಣಮಟ್ಟದ ವಿದ್ಯುತ್ ಪೂರೈಕೆಗೆ ಆದ್ಯತೆ ನೀಡಲು ಶಾಸಕ ಮಾನೆ ಸೂಚನೆ

KannadaprabhaNewsNetwork |  
Published : Jul 14, 2024, 01:35 AM IST
ಫೋಟೊ: ೧೧ಎಚ್‌ಎನ್‌ಎಲ್೪ | Kannada Prabha

ಸಾರಾಂಶ

ಗುಣಮಟ್ಟದ ವಿದ್ಯುತ್ ಪೂರೈಕೆಯ ಹಿತದೃಷ್ಟಿಯಿಂದ ಅಗತ್ಯವಿದ್ದಲ್ಲಿ ಹೆಚ್ಚುವರಿ ವಿದ್ಯುತ್ ಪರಿವರ್ತಕಗಳ ಅಳವಡಿಕೆಗೆ ಪ್ರಸ್ತಾವನೆ ಸಲ್ಲಿಸಿ, ಮಂಜೂರಿ ಪಡೆಯುವಂತೆ ಶಾಸಕ ಶ್ರೀನಿವಾಸ ಮಾನೆ ಅವರು ಹೆಸ್ಕಾಂ ಎಇಇ ಆನಂದ ಅವರಿಗೆ ಸೂಚಿಸಿದರು.

ಹಾನಗಲ್ಲ: ಗುಣಮಟ್ಟದ ವಿದ್ಯುತ್ ಪೂರೈಕೆಯ ಹಿತದೃಷ್ಟಿಯಿಂದ ಅಗತ್ಯವಿದ್ದಲ್ಲಿ ಹೆಚ್ಚುವರಿ ವಿದ್ಯುತ್ ಪರಿವರ್ತಕಗಳ ಅಳವಡಿಕೆಗೆ ಪ್ರಸ್ತಾವನೆ ಸಲ್ಲಿಸಿ, ಮಂಜೂರಿ ಪಡೆಯುವಂತೆ ಶಾಸಕ ಶ್ರೀನಿವಾಸ ಮಾನೆ ಅವರು ಹೆಸ್ಕಾಂ ಎಇಇ ಆನಂದ ಅವರಿಗೆ ಸೂಚಿಸಿದರು.ಇಲ್ಲಿನ ಹೆಸ್ಕಾಂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕೆಲವೆಡೆ ವಿದ್ಯುತ್ ಪರಿವರ್ತಕಗಳ ಮೇಲೆ ಲೋಡ್ ಹೆಚ್ಚಿರುವ ಕಾರಣ ಪದೇ ಪದೆ ಟ್ರಿಪ್ ಆಗುತ್ತಿದೆ. ಗುಣಮಟ್ಟದ ವಿದ್ಯುತ್ ಪೂರೈಕೆ ಸಾಧ್ಯವಾಗುತ್ತಿಲ್ಲ. ಈ ನಿಟ್ಟಿನಲ್ಲಿ ಗಮನ ಹರಿಸಿ ಪರಿವರ್ತಕಗಳ ಹೆಚ್ಚಳ ಹಾಗೂ ಉನ್ನತೀಕರಣಕ್ಕೆ ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು. ಬೀದಿ ದೀಪಗಳ ಸಮರ್ಪಕ ನಿರ್ವಹಣೆಗೆ ಅನುದಾನ ದೊರಕಿದ್ದು, ಅನುದಾನ ಸದ್ಬಳಕೆ ಮಾಡಿಕೊಂಡು ಹಗಲು ಹೊತ್ತಿನಲ್ಲಿ ಬೀದಿ ದೀಪಗಳು ಉರಿಯದಂತೆ ನೋಡಿಕೊಳ್ಳಬೇಕು. ಇದರಿಂದ ವಿದ್ಯುತ್ ಉಳಿತಾಯವಾಗಲಿದ್ದು, ಗ್ರಾಪಂಗಳಿಗೂ ಆರ್ಥಿಕ ಹೊರೆ ತಪ್ಪಲಿದೆ ಎಂದರು.ಅವಘಡ ಆಹ್ವಾನಿಸುವಂಥ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸಿ, ಲೈನ್ ಎತ್ತರಿಸಲು ಗಮನ ನೀಡಬೇಕು. ಗಿಡ, ಗಂಟಿ, ಜಂಗಲ್ ಕಟಾವಿಗೆ ಕಾಳಜಿ ವಹಿಸಿ ಎಂದು ಶ್ರೀನಿವಾಸ ಮಾನೆ ಸೂಚಿಸಿದರು. ಸಾರ್ವಜನಿಕರು, ರೈತರು ದೂರು, ಅಹವಾಲುಗಳಿಗೆ ಸ್ಪಂದಿಸಲು ಸಹಾಯವಾಣಿ ಆರಂಭಿಸಿ. ದೂರು, ಅಹವಾಲುಗಳಿಗೆ ಸ್ಪಂದಿಸಿ, ಸೌಜನ್ಯದಿಂದ ವರ್ತಿಸಿ. ಕೆಲ ಶಾಖಾಧಿಕಾರಿಗಳು, ಸಿಬ್ಬಂದಿ ಸೂಕ್ತ ರೀತಿಯಲ್ಲಿ ಸಾರ್ವಜನಿಕರಿಗೆ ಸ್ಪಂದಿಸುತ್ತಿಲ್ಲ ಎನ್ನುವ ದೂರುಗಳಿದ್ದು, ಸಮರ್ಪಕ ಕರ್ತವ್ಯ ನಿರ್ವಹಣೆಗೆ ಗಮನ ಹರಿಸಿ. ಲೈನ್‌ಮನ್ ಗಳು ತಮ್ಮ ಕೇಂದ್ರ ಸ್ಥಾನದಲ್ಲಿಯೇ ವಾಸವಿರಲು ನಿರ್ದೇಶಿಸಿ ಎಂದರು. ಕೆಪಿಟಿಸಿಎಲ್ ಎಇಇ ಸತೀಶ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಪಾಲಿನ ಶ್ರೀರಾಮ : ಶಾಸಕ ಪ್ರದೀಪ್‌ ಈಶ್ವರ್‌
ಜಿ ರಾಮ್‌ ಜಿ ವಿರುದ್ಧ ಸಿಡಿದೆದ್ದ ಕಾಂಗ್ರೆಸ್‌ ಪಡೆ - ದುಡಿವ ಕೈಗಳ ಅನ್ನ ಕಸಿವ ಕಾಯ್ದೆ