ಕನ್ನಡಪ್ರಭ ವಾರ್ತೆ ಬೆಳಗಾವಿ/ಗೋಕಾಕ
ಸೋಮವಾರ ಗೋಕಾಕ ನಗರದ ಪ್ರವಾಹ ಬಾಧಿತ ಪ್ರದೇಶಗಳು ಹಾಗೂ ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಿದ ಬಳಿಕ ಸಚಿವ ಸತೀಶ ಜಾರಕಿಹೊಳಿ ಅವರ ಹಿಲ್ ಗಾರ್ಡನ್ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಜೂನ್ನಿಂದ ಇದುವರೆಗೆ 565 ಮಿ.ಮೀ ಮಳೆಯಾಗಿದ್ದು, ವಾಡಿಕೆಗಿಂತ ಶೇ.62ರಷ್ಟು ಹೆಚ್ಚು ಮಳೆಯಾಗಿದೆ. ಅತಿವೃಷ್ಟಿಯಿಂದ 6 ಮಂದಿ ಸಾವಿಗೀಡಾಗಿದ್ದು, ಎಲ್ಲಾ ಪ್ರಕರಣಗಳಲ್ಲಿ ಪರಿಹಾರ ಒದಗಿಸಲಾಗಿದೆ. 12 ಜಾನುವಾರುಗಳು ಸಾವನ್ನಪ್ಪಿದ್ದು, ಪರಿಹಾರ ಒದಗಿಸಲಾಗಿದೆ. ಸಾವಿಗೀಡಾದ ಒಂದು ಜಾನುವಾರಿಗೆ ₹37,500 ಪರಿಹಾರ ನೀಡಲಾಗುತ್ತಿದೆ.
ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ 48 ಮನೆಗಳು ಪೂರ್ಣ ಹಾನಿಗೀಡಾಗಿದ್ದು, 950 ಮನೆಗಳಿಗೆ ಭಾಗಶಃ ಹಾನಿಯಾಗಿವೆ. ಈ ಹಿಂದೆ ಅತಿವೃಷ್ಟಿ ಸಂದರ್ಭದಲ್ಲಿ ಮನೆ ಹಾನಿಗೆ ನೀಡಲಾದ ಪರಿಹಾರ ದುರುಪಯೋಗವಾದ ಬಗ್ಗೆ ದೂರು ಬಂದಿದ್ದವು. ಈ ಹಿನ್ನೆಲೆಯಲ್ಲಿ ಈ ಬಾರಿ ದುರುಪಯೋಗ ತಪ್ಪಿಸಲು ಪೂರ್ಣ ಮನೆ ಹಾನಿಗೆ ₹ 1.20 ಲಕ್ಷ ಪರಿಹಾರ ನೀಡಲಾಗುತ್ತಿದ್ದು, ಇದರೊಂದಿಗೆ ಮನೆಯನ್ನು ಸಹ ನಿರ್ಮಿಸಿ ಕೊಡಲಾಗುತ್ತಿದೆ ಎಂದು ಹೇಳಿದರು.ಎನ್ಡಿಆರ್ಎಫ್ ಮಾರ್ಗಸೂಚಿ ಪ್ರಕಾರ ಭಾಗಶಃ ಹಾನಿಗೀಡಾದ ಮನೆಗಳಿಗೆ ₹ 6500 ಪರಿಹಾರ ನೀಡಬೇಕಿದೆ. ಆದರೆ, ಹಾನಿಯಾದವರಿಗೆ ತೊಂದರೆಯಾಗಬಾರದೆಂದು ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ₹43,500 ₹ 50 ಸಾವಿರ ಪರಿಹಾರ ನೀಡುತ್ತಿದೆ. ಈ ಹಿಂದೆ ಪರಿಹಾರದ ವಿಷಯದಲ್ಲಿ ವಿವಿಧ ಮಾನದಂಡ ಅನುಸರಿಸಲಾಗುತ್ತಿತ್ತು. ಈಗ ಏಕರೂಪದಲ್ಲಿ ಪರಿಹಾರ ನೀಡಲಾಗುತ್ತಿದೆ. ಈಗಾಗಲೇ 17 ಜನರಿಗೆ ಪರಿಹಾರ ಒದಗಿಸಲಾಗಿದ್ದು, ಮನೆ ಹಾನಿಯಾದ ಎಲ್ಲರಿಗೂ ಆದಷ್ಟು ಬೇಗ ಪರಿಹಾರ ಒದಗಿಸಲಿದ್ದೇವೆ ಎಂದರು.
ನೆರೆ ಪರಿಹಾರ ಕಾರ್ಯಗಳಿಗೆ ಅನುದಾನ ಕೊರತೆಯಿಲ್ಲ. ತುರ್ತು ಪರಿಹಾರ ಕಾರ್ಯಗಳಿಗೆ ಜಿಲ್ಲಾಧಿಕಾರಿ ಪಿಡಿ ಖಾತೆಯಲ್ಲಿ ₹ 48 ಕೋಟಿ ಅನುದಾನ ಲಭ್ಯವಿದ್ದು, ತಹಸೀಲ್ದಾರ್ ಖಾತೆಗಳಲ್ಲೂ ಅನುದಾನ ಲಭ್ಯವಿದೆ. ಅಗತ್ಯ ಬಿದ್ದರೆ ಇನ್ನಷ್ಟು ಪರಿಹಾರ ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿರುವ ಸಂತ್ರಸ್ತರಿಗೆ ಬಿಡುಗಡೆಯಾಗಿರುವ ಹಣವನ್ನು ಅಧಿಕಾರಿಗಳು ದುರ್ಬಳಕೆ ಮಾಡಿರುವುದು ಕಂಡುಬಂದರೆ ಅವರ ಮೇಲೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಸಿಎಂ ವಾಹನಕ್ಕೆ ಅಡ್ಡ ಬಂದ ಗೂಳಿ:
ಜಿಲ್ಲೆ ವಿಭಜನೆಗೆ ಹಣದ ಕೊರತೆ ಇಲ್ಲ:
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ, ಸಂಸದೆ ಪ್ರಿಯಾಂಕಾ ಜಾರಕಿಹೊಳಿ, ಸರಕಾರದ ಮುಖ್ಯ ಕಾರ್ಯದರ್ಶಿ ಶಾಲನಿ ರಜನೀಶ್ , ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಪಂ ಸಿಇಒ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ ಇದ್ದರು.