ಕನ್ನಡಪ್ರಭ ವಾರ್ತೆ ಮಂಡ್ಯ
ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ವಿದ್ಯಾರ್ಥಿನಿಲಯಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ವಿದ್ಯಾರ್ಥಿನಿಯರು ಕಿಷ್ಕಿಂಧ ಜಾಗದಲ್ಲಿರುವುದು ಗಮನಕ್ಕೆ ಬಂದು ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡಿದ್ದರು. ಅಲ್ಲಿನ ಸಮಸ್ಯೆಗಳಿಗೆ ತ್ವರಿತ ಕ್ರಮ ವಹಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸೋಮವಾರ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ತಮ್ಮ ವ್ಯಾಪ್ತಿಯಲ್ಲಿ ಬರುವ ವಿದ್ಯಾರ್ಥಿ ನಿಲಯಕ್ಕೆ ಕಾಲ ಕಾಲಕ್ಕೆ ಭೇಟಿ ನೀಡಿ ಅಲ್ಲಿ ಬೇಕಾಗಿರುವ ಮೂಲ ಸೌಕರ್ಯಗಳನ್ನು ಪರಿಶೀಲಿಸಬೇಕು. ಮಂಡ್ಯದ ಬಂದೀಗೌಡ ಬಡಾವಣೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯವನ್ನು ಒಂದು ವಾರದಲ್ಲಿ ಉತ್ತಮ ಕಟ್ಟಡಕ್ಕೆ ಸ್ಥಳಾಂತರಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಹಾಸ್ಟೆಲ್ನ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಇರಬೇಕು. ಅಡುಗೆ ಕೋಣೆಯಲ್ಲಿ ಬೇಕಾಗುವ ಪರಿಕರಗಳಿಗೆ ಯಾವುದೇ ಕೊರತೆ ಆಗಬಾರದು. ವಿದ್ಯಾರ್ಥಿನಿಯರಿಗೆ ಗುಣಮಟ್ಟದ ಆಹಾರ ನೀಡಲು ಅಗತ್ಯ ಕ್ರಮ ವಹಿಸಬೇಕು ಎಂದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶ್ರೀನಿವಾಸ್ ಹಾಗೂ ವಿದ್ಯಾರ್ಥಿ ನಿಲಯದ ವಾರ್ಡನ್ ಗಳು ಉಪಸ್ಥಿತರಿದ್ದರು.