ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಮಂಗಳವಾರ ಜಿಲ್ಲಾ ಪಂಚಾಯತ್ ಕಚೇರಿಯ ಹೆಚ್. ನರಸಿಂಹಯ್ಯ ಸಭಾಂಗಣದಲ್ಲಿ ನಡೆದ ಮತದಾರರಿಗೆ ಮತದಾನ ಕುರಿತು ಶಿಕ್ಷಣ ನೀಡುವ ಸ್ವೀಪ್ ಚಟುವಟಿಕೆಗಳ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು
೨೦೨೪ರ ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ನೀತಿ ಸಂಹಿತೆ ಯಾವುದೇ ಕ್ಷಣದಲ್ಲಿ ಘೋಷಣೆ ಆಗಬಹುದು. ಆದ್ದರಿಂದ ನಿರಂತರವಾಗಿ ಕೈಗೊಳ್ಳುತ್ತಿರುವ ಚುನಾವಣಾ ಮತದಾನ ಜಾಗೃತಿಯ ಸ್ವೀಪ್ ಕಾರ್ಯಕ್ರಮಗಳನ್ನು ಮತ್ತಷ್ಟು ಚುರುಕುಗೊಳಿಸುವಂತೆ ಅವರು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.ಮತದಾನದ ಅರಿವು ಮೂಡಿಸಿ
ಪ್ರತಿ ಶಾಲಾ ಕಾಲೇಜುಗಳಲ್ಲಿ ಇ.ಎಲ್.ಸಿ ಕ್ಲಬ್ ಗಳನ್ನು ರಚಿಸಿ ಮಕ್ಕಳಿಂದ ಅವರ ಪೋಷಕರಿಗೆ ಮತದಾನದ ಅರಿವು ಮೂಡಿಸುವ ಕೆಲಸ ಆಗಬೇಕು. ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದ ವಸತಿ ಶಾಲೆಗಳ ಮಕ್ಕಳಿಂದ ಪೋಷಕರಿಗೆ ಚುನಾವಣೆಯ ಮಹತ್ವದ ಬಗ್ಗೆ ತಿಳಿಸಿ, ಮತ ಚಲಾಯಿಸುವಂತೆ ಪೋಷಕರಿಗೆ ಪತ್ರ ಬರೆಸಬೇಕು. ಪ್ರತಿ ಗ್ರಾಮಗಳಲ್ಲಿ, ವಾರ್ಡ್ ಗಳಲ್ಲಿ ಘನತ್ಯಾಜ್ಯ ಸಂಗ್ರಹಿಸುವ ವಾಹನಗಳಲ್ಲಿ ಜಾಗೃತಿ ಜಿಂಗಲ್ಸ್ ಗಳನ್ನು ಬಿತ್ತರಿಸಬೇಕು ಎಂದರು.
ಥೀಮ್ ಆಧಾರಿತ ಮತಗಟ್ಟೆ ಕಳೆದ ವಿಧಾನಸಭೆ, ಚುನಾವಣೆ ವೇಳೆ ಜಿಲ್ಲೆಯಾದ್ಯಂತ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ೯ ವಿಶೇಷ ಮತಗಟ್ಟೆಗಳನ್ನು ರಚಿಸಿ ಮತದಾರರ ಗಮನ ಸೆಳೆಯುವ ಮೂಲಕ ಶೇ. ೮೫ ರಷ್ಟು ಮತದಾನವನ್ನು ಜಿಲ್ಲೆಯಲ್ಲಿ ದಾಖಲಿಸಲಾಗಿತ್ತು. ಈ ವಿಶೇಷ ಮತಗಟ್ಟೆಗಳಲ್ಲಿ ಸಖಿ ಮತಗಟ್ಟೆ, ವಿಶೇಷ ಚೇತನರ ಮತಗಟ್ಟೆ, ಯುವ ಮತಗಟ್ಟೆ, ಸಾಂಪ್ರದಾಯಿಕ ಮಾದರಿ ಮತಗಟ್ಟೆ ಮತ್ತು ಜಿಲ್ಲೆಯ ವಿಶೇಷತೆಯನ್ನು ಬಿಂಬಿಸುವ ಥೀಮ್ ಆಧಾರಿತ ಮತಗಟ್ಟೆಗಳನ್ನು ರಚಿಸಲಾಗಿತ್ತು. ನಮ್ಮ ಜಿಲ್ಲೆಯ ಥೀಮ್ ಆಧಾರಿತ ಮತ್ತು ಸಖಿ ಮತಗಟ್ಟೆಗಳು ಆಕರ್ಷಕವಾಗಿ ಮೂಡಿ ಬಂದು ಜನರನ್ನು ಸೆಳೆದಿದ್ದವು, ಅದೇ ರೀತಿ ಈ ಬಾರಿಯು ಸಕಲ ಸಿದ್ದತೆಗಳನ್ನು ಮಾಡಿಕೊಂಡು ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಲು ತಿಳಿಸಿದರು.ಈ ಸಂದರ್ಭದಲ್ಲಿ ರಾಜ್ಯ ತರಬೇತಿದಾರರಾದ ಪಿ.ಎಲ್.ಸತೀಶ್ ಕುಮಾರ್, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.