56432 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿ

KannadaprabhaNewsNetwork |  
Published : May 09, 2026, 02:00 AM IST
ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯಿಂದ ಶುಕ್ರವಾರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. | Kannada Prabha

ಸಾರಾಂಶ

ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ 56,432 ಹುದ್ದೆ ಭರ್ತಿ ಮಾಡುವುದಾಗಿ ರಾಜ್ಯ ಸರ್ಕಾರ ಘೋಷಿಸಿತ್ತು. ನಂತರವೂ ವಿವಿಧ ಇಲಾಖೆಗಳ ಸಚಿವರು ಅತೀ ಶೀಘ್ರದಲ್ಲಿ ನೇಮಕಾತಿ ಮಾಡುತ್ತೇವೆ ಎಂದು ದಿನಕ್ಕೊಂದು ಹೇಳಿಕೆ ನೀಡುತ್ತಿರುವುದು ಭ್ರಮನಿರಸನ ಉಂಟು ಮಾಡಿದೆ.

ಧಾರವಾಡ:

56,432 ಹುದ್ದೆ ಭರ್ತಿಗೆ ಕೂಡಲೇ ಅಧಿಸೂಚನೆ ಹೊರಡಿಸಿ ಹಾಗೂ ಕೆಪಿಎಸ್ಸಿ ಸ್ವಚ್ಛಗೊಳಿಸಲು ಪಿ.ಸಿ. ಹೋಟಾ ಸಮಿತಿ ವರದಿ ಜಾರಿಗೊಳಿಸಲು ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯಿಂದ ಶುಕ್ರವಾರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ 56,432 ಹುದ್ದೆ ಭರ್ತಿ ಮಾಡುವುದಾಗಿ ರಾಜ್ಯ ಸರ್ಕಾರ ಘೋಷಿಸಿತ್ತು. ನಂತರವೂ ವಿವಿಧ ಇಲಾಖೆಗಳ ಸಚಿವರು ಅತೀ ಶೀಘ್ರದಲ್ಲಿ ನೇಮಕಾತಿ ಮಾಡುತ್ತೇವೆ ಎಂದು ದಿನಕ್ಕೊಂದು ಹೇಳಿಕೆ ನೀಡುತ್ತಿರುವುದು ಭ್ರಮನಿರಸನ ಉಂಟು ಮಾಡಿದೆ. ಈ ಘೋಷಣೆ ಮಾಡಿ ಐದು ತಿಂಗಳಾದರೂ ಅಧಿಸೂಚನೆ ಹೊರಡಿಸಿಲ್ಲ. ಇದರಿಂದ ಆಕಾಂಕ್ಷಿಗಳ ವಯೋಮಿತಿ ಮೀರುತ್ತಿದ್ದು, ಸರ್ಕಾರದ ನೀಡಿರುವ 5 ವರ್ಷದ ವಯೋಮಿತಿ ಸಡಿಲಿಕೆ ಪ್ರಯೋಜನಕ್ಕೆ ಬರುವುದಿಲ್ಲ. ಹೀಗಾಗಿ ಉದ್ಯೋಗಾಕಾಂಕ್ಷಿಗಳು ಸರ್ಕಾರದ ಘೋಷಣೆ ನಂಬಲಾಗದೆ ವಿಶ್ವಾಸ ಕಳೆದುಕೊಂಡು ಮತ್ತೆ ಹೋರಾಡಲು ಬೀದಿಗಿಳಿದಿದ್ದಾರೆ. ಈ ಮಧ್ಯೆ ಕೆಪಿಎಸ್‌ಸಿ ನಡೆಸಿದ ಕೆಎಎಸ್ ಪರೀಕ್ಷೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿರುವ ಬಗ್ಗೆಯೂ ವರದಿ ಬಂದಿದ್ದು ಇದರ ಬಗ್ಗೆ ಸಮಗ್ರ ತನಿಖೆಯಾಗಬೇಕೆಂದು ಆಗ್ರಹಿಸಲಾಯಿತು.

ಹೋರಾಟ ಸಮಿತಿಯ ರಾಜ್ಯ ಸಹ ಸಂಚಾಲಕರಾದ ಭವಾನಿ ಶಂಕರ್ ಗೌಡ, ಜಿಲ್ಲಾ ಸಂಚಾಲಕ ವೀರೇಶ್ ನರೇಗಲ್, ಹನುಮಗೌಡ ದಾಸಿಗೌಡರ್, ಅಮೃತ್ ಜಿ ಕೊಂಡಿಕೊಪ್ಪ, ಯಲ್ಲಪ್ಪ ದೊರೆ, ಹನುಮಂತ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾಹಿತಿ ನೀಡದ 18 ಅಧಿಕಾರಿಗಳಿಗೆ ದಂಡ: ಬಿ. ವೆಂಕಟಸಿಂಗ್
ಯಾವ ಪುರುಷಾರ್ಥಕ್ಕೆ ಯಡಿಯೂರಪ್ಪ ಅಭಿಮಾನೋತ್ಸವ?