ಭಾಲ್ಕಿ: ತಾಲೂಕಿನಲ್ಲಿ ಪುತ್ರ ಸಾಗರ ಖಂಡ್ರೆ ಪರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅಬ್ಬರದ ಪ್ರಚಾರ ನಡೆಸಿದರು.
ಗ್ರಾಮದ ಭವಾನಿ ಮಂದಿರದಿಂದ ಸಾವಿರಾರೂ ಕಾರ್ಯಕರ್ತರೊಂದಿಗೆ ಪ್ರಚಾರ ಆರಂಭಿಸಿದ ಸಚಿವರು ಮತದಾರರನ್ನು ಭೇಟಿಯಾಗಿ, ಕಾಂಗ್ರೆಸ್ ಅಭ್ಯರ್ಥಿ, ಉತ್ಸಾಹಿ ಯುವಕ ಸಾಗರ ಖಂಡ್ರೆ ಅವರಿಗೆ ಮತ ನೀಡುವಂತೆ ಕೋರಿದರು.ನಂತರ ಮಾತನಾಡಿದ ಸಚಿವರು, ನನ್ನ ಪುತ್ರ ಎನ್ನುವ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ ಸಾಗರ ಖಂಡ್ರೆ ಅವರಿಗೆ ಟಿಕೆಟ್ ನೀಡಿಲ್ಲ. ರಾಜ್ಯದಲ್ಲಿ ಯುವಶಕ್ತಿಗೆ ಪ್ರಾತಿನಿಧ್ಯ ನೀಡುವ ಉದ್ದೇಶ ಮತ್ತು ಸಾಗರ ಖಂಡ್ರೆ ಅವರ ಪಕ್ಷ ಸಂಘಟನಾ ಶಕ್ತಿ ಗುರುತಿಸಿ ಟಿಕೆಟ್ ನೀಡಿದೆ. ಖೂಬಾ ಅವರ 10 ವರ್ಷದ ವೈಫಲ್ಯಯನ್ನು ಜನರಿಗೆ ತಿಳಿಸುವುದರ ಜತೆಗೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಡ ಜನರ ಕಲ್ಯಾಣಕ್ಕಾಗಿ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆ ಜನರಿಗೆ ಪರಿಚಯಿಸಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಲು ಮುಖಂಡರು, ಕಾರ್ಯಕರ್ತರು ಶ್ರಮಿಸಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಪ್ರಮುಖರು, ಕಾರ್ಯಕರ್ತರು ಹಾಜರಿದ್ದರು.
---------ಭಾಲ್ಕಿ ತಾಲೂಕಿನ ಭಾತಂಬ್ರಾ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಪ್ರಚಾರಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರನ್ನು ಮುಖಂಡರು, ಕಾರ್ಯಕರ್ತರು ಸನ್ಮಾನಿಸಿದರು.