ಕನ್ನಡಪ್ರಭ ವಾರ್ತೆ ದಾಬಸ್ಪೇಟೆ
56 ಪ್ರಕರಣದ ಆರೋಪಿ: ರೌಡಿಶೀಟರ್ ಜಯಂತ್ ರಾಜ್ಯದ ಐದು ಜಿಲ್ಲೆಯ ವಿವಿಧ ಠಾಣೆಯ ಪ್ರಕರಣಗಳಲ್ಲಿ ಭಾಗಿಯಾಗಿದ್ದು ಈತನ ಮೇಲೆ ದಾಬಸ್ಪೇಟೆ ಪೊಲೀಸ್ ಠಾಣೆಯಲ್ಲಿ 14 ಪ್ರಕರಣ, ಗ್ರಾಮಾಂತರ ಠಾಣೆಯ 8 ಪ್ರಕರಣ, ಟೌನ್ ಠಾಣೆ 5 ಪ್ರಕರಣ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯ 3 ಪ್ರಕರಣ, ತ್ಯಾಮಗೊಂಡ್ಲು ಪೊಲೀಸ್ ಠಾಣೆಯ 2 ಪ್ರಕರಣ, ಮಾದನಾಯ್ಕನಹಳ್ಳಿಯಲ್ಲಿ 3 ಪ್ರಕರಣ, ತುಮಕೂರು ಜಿಲ್ಲೆಯ ಕ್ಯಾತ್ಸಂದ್ರ ಪೊಲೀಸ್ ಠಾಣೆಯ 2 ಪ್ರಕರಣ, ಕೋರಾ ಪೊಲೀಸ್ ಠಾಣೆ, ಯಲ್ಲಿ 1 ಪ್ರಕರಣ, ತಿಲಕ್ ಪಾರ್ಕ್ ಠಾಣೆ ಗುಬ್ಬಿ ಠಾಣೆ, ಹೆಬ್ಬೂರು ಠಾಣೆ, ಕೊರಟಗೆರೆ ಠಾಣೆ ಯಲ್ಲಿ ತಲಾ ಒಂದು ಪ್ರಕರಣ ರಾಮನಗರ ಜಿಲ್ಲೆಯ ಕುದೂರು ಠಾಣೆಯಲ್ಲಿ 2 ಪ್ರಕರಣ, ಬಿಡದಿ ಠಾಣೆಯಲ್ಲಿ ಒಂದು ಪ್ರಕರಣ, ತಾವರಕೆರೆ ಠಾಣೆಯಲ್ಲಿ 2 ಪ್ರಕರಣ ಮಂದ್ಯ ಜಿಲ್ಲೆಯ ಮದ್ದೂರು ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ, ಬೆಂಗಳೂರು ನಗರ ಜಿಲ್ಲೆಯ ಸೋಲದೇವನಹಳ್ಳಿ, ಜ್ಞಾನಭಾರತಿ, ಪೀಣ್ಯ ಪೊಲೀಸ್ ಠಾಣೆಯಲ್ಲಿ ತಲಾ ಒಂದೊಂದು ಪ್ರಕರಣ ಸೇರಿ ಒಟ್ಟು 56 ಪ್ರಕರಣಗಳು ದಾಖಲಾಗಿವೆ.ಎರಡನೇ ಬಾರಿಗೆ ಗುಂಡಿನ ದಾಳಿ : ಈಗಾಗಲೇ ರೌಡಿ ಶೀಟರ್ ಜಯಂತ್ ಮೇಲೆ 22 ಮಾಚ್ 2019ರಲ್ಲಿ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯ ವೀರನಂಜಿಪುರ ಗ್ರಾಮದ ಸಮೀಪ ಅಂದಿನ ದಾಬಸ್ಪೇಟೆ ಪೊಲೀಸ್ ಠಾಣೆಯ ಪಿಎಸೈ ಆಗಿದ್ದ ಶಂಕರ್ ನಾಯಕ್ ಗುಂಡಿನ ದಾಳಿ ನಡೆಸಿದ್ದರೂ ಮತ್ತೆ ತನ್ನ ಹಳೆ ಚಾಳಿ ಮುಂದುವರೆಸಿ ಮತ್ತೆ ಗುಂಡಿನ ದಾಳಿಗೆ ಒಳಗಾಗಿದ್ದಾನೆ.
ಎಎಸ್ಪಿ ಭೇಟಿ: ಪೊಲೀಸರ ಗುಂಡಿನ ದಾಳಿ ನಡೆದ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಅಡಿಷನಲ್ ಎಸ್ಪಿ ನಾಗೇಶ್ ಡಿವೈಎಸ್ ಪಿ ಜಗದೀಶ್ ಕೆ.ಎಸ್, ತ್ಯಾಮಗೊಂಡ್ಲು ಪೊಲೀಸ್ ಠಾಣೆಯ ಪಿಐ ರಂಜನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಆಸ್ಪತ್ರೆಯಲ್ಲಿ ಚಿಕಿತ್ಸೆ : ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದ ಆರೋಪಿ ಜಯಂತ್ ನನ್ನು ದಾಬಸ್ಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಗಾಯಗೊಂಡಿದ್ದ ಸಿಬ್ಬಂದಿ ಇಮ್ರಾನ್ ಅವರನ್ನು ಪಟ್ಟಣದ ವಿಕೇರ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಘಟನಾ ಸ್ಥಳಕ್ಕೆ ಎಫ್ ಎಸ್ ಎಲ್ ತಂಡ, ವಿದ್ವಂಸಕ ಕೃತ್ಯ ತಪಾಸಣಾ ತಂಡ, ಸೋಕೋ ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.