ಮೂಡುಬಿದಿರೆ: ಇಲ್ಲಿನ ಮೂಡುಬಿದಿರೆ ಕೋ-ಆಪರೇಟಿವ್ ಸರ್ವೀಸ್ ಸೊಸೈಟಿ ಲಿಮಿಟೆಡ್ ವತಿಯಿಂದ ನವೆಂಬರ್ 14 ರಿಂದ20 ರವರೆಗೆ `ಸಹಕಾರ ಸಪ್ತಾಹ ಸಂಭ್ರಮ'''''''' ಹಮ್ಮಿಕೊಳ್ಳಲಾಗಿದ್ದು, ಸೊಸೈಟಿಯ ಕಲ್ಪವೃಕ್ಷ ಸಭಾಭವನದಲ್ಲಿ `ಸಪ್ತ ಸಂಧ್ಯಾ - ಸಹಕಾರಿ ಚಿಂತನ ಸರಣಿ ಮತ್ತು ಸಾಂಸ್ಕೃತಿಕ ವೈಭವ'''''''' ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸೊಸೈಟಿಯ ಅಧ್ಯಕ್ಷ ಎಂ. ಬಾಹುಬಲಿ ಪ್ರಸಾದ್ ಹೇಳಿದರು.
ಸಪ್ತಾಹದ ಪ್ರತಿದಿನ ಸಂಜೆ 6 ಗಂಟೆಗೆ ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ, ಆ ಬಳಿಕ ವಿವಿಧ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ನ.15ರಂದು ಸಹಕಾರ-ಪರಿಸರ, ಕೃಷಿ, ಪಶುಸಂಗೋಪನೆ ಉಪನ್ಯಾಸ ಹಾಗೂ ಗ್ರಾಮೀಣ ಅಭಿವೃದ್ಧಿ ದಿನಾಚರಣೆ, ನ 16ರಂದು ಸಮಗ್ರ ಸಾಧಕ ಪ್ರಶಸ್ತಿ'''''''' ಪ್ರದಾನ ನಡೆಯಲಿದೆ. ನ.17ರಂದು ಸಹಕಾರ ಮತ್ತು ಮಾನವೀಯ ಮೌಲ್ಯಗಳು ವಿಚಾರದ ಕುರಿತು ಉಪನ್ಯಾಸ, ನ.18ರಂದು ಸಹಕಾರ-ಉಚಿತ ಕಾನೂನು ಸೇವೆ ಉಪನ್ಯಾಸ, ನ.19ರಂದು ಸಹಕಾರ ಮತ್ತು ರಾಷ್ಟ್ರೀಯ ಚಿಂತನೆ ಹಾಗೂ ನ.20ರಂದು ಸಹಕಾರ-ಯುವಜನ ಸೇವೆ ಕುರಿತು ಉಪನ್ಯಾಸ ನಡೆಯಲಿದೆ. ನ16ರಂದು ಬೆಳಗ್ಗೆ 10ಗಂಟೆಯಿಂದ ಉಚಿತ ವೈದ್ಯಕೀಯ ತಪಾಸಣೆ ನಡೆಯಲಿದೆ ಎಂದರು.ವಿಶೇಷ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಎಂ. ಮಾತನಾಡಿ, ಸಪ್ತಾಹದ ಪ್ರತಿದಿನ ವಿವಿಧ ಕ್ಷೇತ್ರಗಳ ಸಾಧಕರು, ಸಂಘ ಸಂಸ್ಥೆಗಳನ್ನು ಗೌರವಿಸಲಾಗುವುದು. ಈ ಬಾರಿ ಸಹಕಾರ ಸಪ್ತಾಹದಲ್ಲಿ 30 ಕ್ಕೂ ಅಧಿಕ ಮಂದಿ ಸಾಧಕರು ಹಾಗೂ ಸಂಘ ಸಂಸ್ಥೆಗಳನ್ನು ಗೌರವಿಸಲಾಗುವುದು. ವಿಶೇಷವಾಗಿ ಮೂಡುಬಿದಿರೆಯ ಹುಲಿವೇಷ ತಂಡಗಳಿಗೆ ಗೌರವ, ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ದೇಣಿಗೆ , ನಿವೃತ್ತರಾಗಲಿರುವ ಸಿಇಒ ಕೆ.ರಘುವೀರ್ ಕಾಮತ್ ಹಾಗೂ ಸಿಬ್ಬಂದಿ ಶೇಖರ್ ಅವರನ್ನು ಸನ್ಮಾನಿಸಲಾಗುವುದು ಎಂದರು.
ಸೊಸೈಟಿಯ ಉಪಾಧ್ಯಕ್ಷ ಎಂ.ಗಣೇಶ್ ನಾಯಕ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ರಘುವೀರ್ ಕಾಮತ್, ನಿರ್ದೇಶಕರಾದ ಕೆ.ಅಭಯಚಂದ್ರ ಜೈನ್, ಎಂ.ಜಾರ್ಜ್ ಮೋನಿಸ್, ಮನೋಜ್ ಕುಮಾರ್ ಶೆಟ್ಟಿ, ಎಂ.ಪದ್ಮನಾಭ, ಸಿ.ಎಚ್.ಗಫೂರ್, ಎಂ.ಪಿ ಅಶೋಕ್ ಕಾಮತ್, ಜ್ಞಾನೇಶ್ವರ ಕಾಳಿಂಗ ಪೈ, ದಯಾನಂದ ನಾಯ್ಕ್, ಪ್ರೇಮಾ ಎಸ್.ಸಾಲ್ಯಾನ್, ಅನಿತಾ ಶೆಟ್ಟಿ ಸುದ್ದಿಗೋಷ್ಠಿಯಲ್ಲಿದ್ದರು.