ಕನ್ನಡಪ್ರಭ ವಾರ್ತೆ ದಾವಣಗೆರೆ
ನಗರದಲ್ಲಿ ಗುರುವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ದಾವಣಗೆರೆಯಲ್ಲಿ ನ.12ರಂದು ನಡೆಯಬೇಕಾಗಿದ್ದ ಐದು ಜಿಲ್ಲೆಗಳ ಅಹಿಂದ ವಕೀಲರ ಸಮಾವೇಶ, ಪರಿಶಿಷ್ಟ ಜಾತಿ-ಪಂಗಡಗಳ ವಕೀಲರ ಸಹಕಾರ ಸಂಘದ ಉದ್ಘಾಟನಾ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಲಹೆಯಂತೆ ಅನಿವಾರ್ಯ ಕಾರಣಕ್ಕೆ ಮುಂದೂಡಿದ್ದೇವೆ ಎಂದರು.
ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನರ ನೇತೃತ್ವದಲ್ಲಿ ನಾವು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿದ್ದ ವೇಳೆ ಸಮಾವೇಶ ಮುಂದೂಡುವಂತೆ ಸೂಚನೆ ನೀಡಿದ್ದಾರೆ. ನ.15ರ ನಂತರ ಮುಂದಿನ ದಿನಾಂಕವನ್ನು ನಿಗದಿ ಪಡಿಸಲು ತಮ್ಮ ಆಪ್ತ ಕಾರ್ಯದರ್ಶಿಗೂ ಸಿಎಂ ಸೂಚನೆ ನೀಡಿದ್ದಾರೆ ಎಂದು ಹೇಳಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಎಚ್.ಸಿ.ಮಹದೇವಪ್ಪ, ಸತೀಶ ಜಾರಕಿಹೊಳಿ, ಜಮೀರ್ ಅಹಮ್ಮದ್, ಕೆ.ಎಚ್.ಮುನಿಯಪ್ಪ, ಶಿವರಾಜ ತಂಗಡಗಿ, ಎಸ್.ಎಸ್.ಮಲ್ಲಿಕಾರ್ಜುನ್, ರುದ್ರಪ್ಪ ಲಮಾಣಿ ಅನೇಕ ನಾಯಕರು ಸಮಾವೇಶ, ಸಂಘದ ಉದ್ಘಾಟನೆಗೆ ಆಗಮಿಸಬೇಕಾಗಿತ್ತು ಎಂದು ತಿಳಿಸಿದರು.
ಸಮಾವೇಶಕ್ಕೆ ಈಗಾಗಲೇ ಎಲ್ಲಾ ಸಿದ್ಧತೆಗಳನ್ನೂ ಭರದಿಂದ ಮಾಡಿಕೊಂಡಿದ್ದೆವು. ಐದೂ ಜಿಲ್ಲೆಗಳಲ್ಲಿ ಪ್ರವಾಸ ಸಹ ಮಾಡಿದ್ದೆವು. ನ.15ರ ನಂತರ ಮುಂದಿನ ದಿನಾಂಕವು ನಿಗದಿಯಾಗಲಿದೆ. ಮುಖ್ಯಮಂತ್ರಿ ಕುರ್ಚಿ ವಿಚಾರವಾಗಿ ತಮಗೆ ಯಾವುದೇ ಮಾಹಿತಿ ಇಲ್ಲ. ನಾವು ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮ ಸಮಾವೇಶ ಹಾಗೂ ಸಂಘವನ್ನು ಉದ್ಘಾಟಿಸಬೇಕೆಂಬು ಬಯಸಿದ್ದೇವೆ. ಸಿದ್ದರಾಮಯ್ಯನವರೇ ಸಮಾವೇಶವನ್ನು ಉದ್ಘಾಟಿಸುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಎಸ್ಸಿ-ಎಸ್ಟಿ ವಕೀಲರ ಸಹಕಾರ ಸಂಘದ ಪದಾಧಿಕಾರಿಗಳು, ಹಿರಿಯ ವಕೀಲರಾದ ಎನ್.ಎಂ.ಆಂಜನೇಯ ಗುರೂಜಿ, ವಿ.ಗೋಪಾಲ, ಎಸ್.ರಾಜಪ್ಪ, ಎಲ್.ಶಾಮ್, ಮಹೇಶ ನಾಯ್ಕ, ಕಂಚಿಕೇರಿ ಮಂಜಪ್ಪ ಇತರರು ಇದ್ದರು.