ಕನ್ನಡಪ್ರಭ ವಾರ್ತೆ ಮಂಗಳೂರು
ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಎಂಆರ್ಪಿಎಲ್ ಮುಖ್ಯ ಜನರಲ್ ಮ್ಯಾನೇಜರ್ (ಎಚ್.ಆರ್) ಸಂದೇಶ್ ಜೆ. ಕುಟಿನ್ಹೋ ಪ್ರಭು, ಮುಂದಿನ ದಶಕದಲ್ಲಿ (5.0) ಮತ್ತು ಅದರ ನಂತರದ ದಶಕದಲ್ಲಿ (6.0) ಸಂಭವಿಸಬಹುದಾದ ಬದಲಾವಣೆಗಳು ಮತ್ತು ಈ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಮಾನವ ಶಕ್ತಿಯನ್ನು ಸಜ್ಜುಗೊಳಿಸುವ ಪ್ರಾಮುಖ್ಯತೆಯ ಬಗ್ಗೆ ವಿವರಿಸಿದರು.
ನ್ಯೂಯಾರ್ಕ್ನ ಸ್ಟೇಟ್ ಯೂನಿವರ್ಸಿಟಿ ಆಫ್ ಆಲ್ಬನಿಯ ಪ್ರೊಫೆಸರ್ ಡೇವಿಡ್ ಎಂ. ಸ್ಮಿತ್, ಮಾರಿಷಸ್ ಸರ್ಕಾರದ ಹಣಕಾಸು ಸಚಿವಾಲಯದ ಡಾ. ಯತಿನ್ ಮತ್ತು ಲೊಯೊಲಾ ಕಾಲೇಜ್ ಆಫ್ ಸೋಷಿಯಲ್ ಸೈನ್ಸಸ್ (ಸ್ವಾಯತ್ತ), ತಿರುವನಂತಪುರಂನ ಪ್ರಾಧ್ಯಾಪಕ ಡಾ.ಫಾ. ರಂಜಿತ್ ಜಾರ್ಜ್ ಎಸ್.ಜೆ. ಸಮ್ಮೇಳನದ ಪ್ರಮುಖ ಭಾಷಣಕಾರರಾಗಿ ಭಾಗವಹಿಸಿದ್ದರು.ಸೈಂಟ್ ಅಲೋಶಿಯಸ್ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಡಾ. ರೋನಾಲ್ಡ್ ನಜರೆತ್ ಅಧ್ಯಕ್ಷತೆ ವಹಿಸಿದ್ದರು. ಏಮಿಟ್ ನಿರ್ದೇಶಕ ಡಾ.ಫಾ. ಕಿರಣ್ ಕೋತ್ ಎಸ್.ಜೆ. ಪ್ರಾಸ್ತಾವಿಕವಾಗಿ ಮಾತನಾಡಿದರು. ಸ್ಕೂಲ್ ಆಫ್ ಬಿಸಿನೆಸ್ ಆಂಡ್ ಮ್ಯಾನೇಜ್ಮೆಂಟ್ ಡೀನ್ ಡಾ. ರಜನಿ ಸುರೇಶ್ ಸ್ವಾಗತಿಸಿದರು.
60ಕ್ಕೂ ಹೆಚ್ಚು ಸಂಶೋಧನಾ ಪತ್ರಗಳನ್ನು ಶಿಕ್ಷಕರು, ಸಂಶೋಧಕರು ಮತ್ತು ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಪ್ರಸ್ತುತಪಡಿಸಿದರು.