ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ

KannadaprabhaNewsNetwork |  
Published : Feb 03, 2026, 03:00 AM IST
ನರೇಗಾ ಬಚಾವೋ | Kannada Prabha

ಸಾರಾಂಶ

ಕಾಂಗ್ರೆಸ್ ಪಕ್ಷ ವತಿಯಿಂದ ನರೇಗಾ ಬಚಾವೋ ಸಂಗ್ರಾಮ ಹಿನ್ನೆಲೆ ಇತ್ತೀಚೆಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಂಟ್ವಾಳದ ಮಣಿಹಳ್ಳದಿಂದ ಕೈಕಂಬದವರೆಗೆ ಪಕ್ಷದ ನಾಯಕರು, ಕಾರ್ಯಕರ್ತರ ಪಾದಯಾತ್ರೆ ನಡೆಯಿತು.

ಬಂಟ್ವಾಳ: ಮಹಾತ್ಮಾ ಗಾಂಧೀಜಿ ಹೆಸರಲ್ಲಿರುವ ನರೇಗಾವನ್ನು ಬದಲಾಯಿಸಿ ಗಾಂಧೀಜಿಯವರ ಹೆಸರನ್ನು ಅಳಿಸಲು ಮೋದಿ ನೇತೃತ್ವದ ಕೇಂದ್ರ ಸರಕಾರ ಹೊರಟಿದೆ. ಯುಪಿಎ ಸರಕಾರ ಜಾರಿಗೆ ತಂದ ನರೇಗಾ ಯೋಜನೆಯಿಂದ ಗ್ರಾಮಾಭಿವೃದ್ಧಿಯಾಗಿದ್ದರೆ, ಇದರ ಹೆಸರು ಬದಲಾಯಿಸಿ ಮಾರ್ಪಾಡು ಮಾಡುವುದರಿಂದ ಬಡವರಿಗೆ ಅನ್ಯಾಯವಾಗುವುದಲ್ಲದೆ, ಅಭಿವೃದ್ಧಿ ಸ್ಥಗಿತಗೊಳ್ಳುತ್ತದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಆತಂಕ ವ್ಯಕ್ತಪಡಿಸಿದ್ದಾರೆ.ಕಾಂಗ್ರೆಸ್ ಪಕ್ಷ ವತಿಯಿಂದ ನರೇಗಾ ಬಚಾವೋ ಸಂಗ್ರಾಮ ಹಿನ್ನೆಲೆ ಬುಧವಾರ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಂಟ್ವಾಳದ ಮಣಿಹಳ್ಳದಿಂದ ಕೈಕಂಬದವರೆಗೆ ಪಕ್ಷದ ನಾಯಕರು, ಕಾರ್ಯಕರ್ತರ ಪಾದಯಾತ್ರೆ ನಡೆದು, ಬಳಿಕ ಬಂಟ್ವಾಳ ಮಿನಿ ವಿಧಾನಸೌಧದ ಮುಂಭಾಗ ನಡೆದ ಸಭೆಯಲ್ಲಿ ರಮಾನಾಥ ರೈ ಮಾತನಾಡಿದರು.ಉದ್ಯೋಗ ಖಾತ್ರಿ ಯೋಜನೆ ಅನುಷ್ಟಾನಕ್ಕೆ ಬಂದಾಗ ಜಗತ್ತಿನಲ್ಲೇ ಉತ್ತಮ ಯೋಜನೆ ಎಂದು ಪ್ರಶಂಸೆ ದೊರಕಿತು. ಅದಕ್ಕೆಗ್ರಾಮ ಸ್ವರಾಜ್ಯ ಬಯಸಿದ ಮಹಾನ್ ವ್ಯಕ್ತಿ ಮಹಾತ್ಮಾ ಗಾಂಧಿಯವರ ಹೆಸರು ಇಡಲಾಗಿತ್ತು. ಆದರೆ ಈಗ ಗಾಂಧಿ ಅವರ ಹೆಸರು ಅಳಿಸುವ ಕೆಲಸ ನಡೆಯುತ್ತಿದೆ. ಇದರ ಮಾರ್ಪಾಡುಗಳಿಂದ ಬಡವರಿಗೆ ಸಾಕಷ್ಟು ಅನ್ಯಾಯ ಆಗುತ್ತಿದೆ. ಶೇ. ೬೦ : ೪೦ ಅನುಪಾತ ಮಾಡಿದ್ದು ಬಹಳಷ್ಟು ತೊಂದರೆ ಉಂಟಾಗುತ್ತಿದೆ. ಈಗಾಗಲೇ ಕೇಂದ್ರ ಕಾಂಗ್ರೆಸ್ ಇರುವ ರಾಜ್ಯ ಸರಕಾರಗಳಿಗೆ ಅನುದಾನ ನೀಡಿಕೆಯಲ್ಲಿ ತಾರತಮ್ಯ ಮಾಡುತ್ತಿದ್ದು, ಯೋಜನೆ ಅನುಷ್ಠಾನವಾದರೆ, ರಾಜ್ಯದ ಶೇ.40 ಪಾಲು ನೀಡಲು ತೊಂದರೆ ಆಗುವುದು ಖಚಿತ. ಇದರಿಂದ ಯೋಜನೆ ಸಂಪೂರ್ಣ ಸ್ಥಗಿತವಾಗುವ ಭೀತಿ ಇದೆ. ಅಲ್ಲದೆ, ಇನ್ನು ಬದಲಾದ ಯೋಜನೆಯಂತೆ ಯಾವುದೇ ನಿರ್ಧಾರವನ್ನು ಪಂಚಾಯಿತಿ ತೀರ್ಮಾನ ಮಾಡಲೂ ಸಾಧ್ಯವಿಲ್ಲ. ಇದರಿಂದ ಪಂಚಾಯಿತಿ ಹಾಗೂ ರಾಜ್ಯ ಸರಕಾರದ ಸ್ವಾಯತ್ತೆಗೆ ಧಕ್ಕೆ ಉಂಟಾಗುತ್ತಿದೆ. ಜಾಬ್ ಕಾರ್ಡ್ ಮಾಡಿ ಉದ್ಯೋಗ ಮಾಡುವವರಿಗೆ ಅನುದಾನ ಕೊರತೆಯಿಂದ ತೊಂದರೆ ಆಗುತ್ತದೆ. ಅಭಿವೃದ್ಧಿಗೆ ಕೊಡಲಿಯೇಟು ಬಿದ್ದಿದೆ ಎಂದರು.

ಈ ಸಂದರ್ಭ ಉಭಯ ಬ್ಲಾಕ್ ಅಧ್ಯಕ್ಷರಾದ ಚಂದ್ರಶೇಖರ ಭಂಡಾರಿ, ಬಾಲಕೃಷ್ಣ ಅಂಚನ್, ಪಕ್ಷ ಪ್ರಮುಖರಾದ ಪದ್ಮಶೇಖರ ಜೈನ್, ಪಿಯೂಸ್ ಎಲ್. ರೋಡ್ರಿಗಸ್, ಚಂದ್ರಪ್ರಕಾಶ್‌ ಶೆಟ್ಟಿ, ಎಂ.ಎಸ್.ಮಹಮ್ಮದ್, ಬೇಬಿ ಕುಂದರ್,ಸುದೀಪ್ ಕುಮಾರ್ ಶೆಟ್ಟಿ, ಸಂಜೀವ ಪೂಜಾರಿ ಬಿರ್ವ, ಅಶ್ವನಿ ಕುಮಾರ್ ರೈ , ಪದ್ಮನಾಭ ರೈ, ಶಬೀರ್ ಸಿದ್ದಕಟ್ಟೆ, ಬಿ.ಎಂ. ಅಬ್ಬಾಸ್ ಆಲಿ, ಇಬ್ರಾಹಿಂ ನವಾಝ್ ಬಡಕಬೈಲ್, ಸುದರ್ಶನ ಜೈನ್, ಗಣೇಶ್ ಪೂಜಾರಿ, ಲವೀನಾ ಮೊರಾಸ್, ಮಮತಾ ಗಟ್ಟಿ, ಜಯಂತಿ ಪೂಜಾರಿ, ಜೋಸ್ಪಿನ್ ಡಿಸೋಜ, ಮಹಮ್ಮದ್ ನಂದಾವರ, ವೆಂಕಪ್ಪ ಪೂಜಾರಿ, ಮಲ್ಲಿಕಾ ಶೆಟ್ಟಿ, ಸದಾಶಿವ ಬಂಗೇರ, ಸಿದ್ದೀಕ್ ಗುಡ್ಡೆಯಂಗಡಿ, ಲೋಲಾಕ್ಷ ಶೆಟ್ಟಿ, ಇಬ್ರಾಹಿಂ ಕೈಲಾರ್ ಸಹಿತ ಮಹಿಳಾ, ಯುವ ಕಾಂಗ್ರೆಸ್ ಪದಾಧಿಕಾರಿಗಳು, ಪಕ್ಷದ ಹಲವು ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜನಮನ ಸೆಳೆದ ಸಿತಾರ್-ವೇಣು ಜುಗಲ್‌ಬಂದಿ
ಮಾದಕ ವಸ್ತು ಸೇವನೆ ದುಷ್ಪರಿಣಾಮ ಅರಿವು ಮೂಡಿಸಿ: ಜಿಲ್ಲಾಧಿಕಾರಿ