ನೀರುಮಾರ್ಗ ಗ್ರಾಮ ಪಂಚಾಯಿತಿಗೆ ನರೇಗಾ ಪ್ರಥಮ ಪ್ರಶಸ್ತಿ

KannadaprabhaNewsNetwork |  
Published : Nov 30, 2024, 12:46 AM IST
ನರೇಗಾ ಪ್ರಥಮ ಪ್ರಶಸ್ತಿ ಸ್ವೀಕರಿಸುತ್ತಿರುವ ನೀರುಮಾರ್ಗ ಗ್ರಾ.ಪಂ. ಅಧಿಕಾರಿಗಳು | Kannada Prabha

ಸಾರಾಂಶ

ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಕುಮಾರ್ ಹೊಳ್ಳ ಅವರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಬೂಬಕ್ಕರ್ ಅವರಿಗೆ ಪ್ರಶಂಸಾ ಪತ್ರವನ್ನು ವಿತರಿಸಿ, ಅಭಿನಂದಿಸಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಸೆಪ್ಟೆಂಬರ್ ೨೦೨೪ರಲ್ಲಿ ಅತೀ ಹೆಚ್ಚು ಮಾನವ ದಿನಗಳನ್ನು ಸೃಜಿಸಿದ ವಿಭಾಗದಲ್ಲಿ ನೀರುಮಾರ್ಗ ಗ್ರಾಮ ಪಂಚಾಯಿತಿಗೆ ಪ್ರಥಮ ಬಹುಮಾನ ಲಭಿಸಿದೆ.

ಮಂಗಳೂರು ತಾಲೂಕಿನಲ್ಲಿಯೇ ನೀರುಮಾರ್ಗ ಗ್ರಾಮವು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಉತ್ತಮ ಪ್ರಗತಿ ಕಂಡಿದೆ. ಈ ಹಿನ್ನಲೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಕುಮಾರ್ ಹೊಳ್ಳ ಅವರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಬೂಬಕ್ಕರ್ ಅವರಿಗೆ ಪ್ರಶಂಸಾ ಪತ್ರವನ್ನು ವಿತರಿಸಿ, ಅಭಿನಂದಿಸಿದರು.

ಈ ಸಂದರ್ಭ ಉದ್ಯೋಗ ಖಾತರಿಯ ಮಂಗಳೂರು ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಮಹೇಶ್ ಅಂಬೆಕಲ್ಲು, ಪಂಚಾಯಿತಿ ಲೆಕ್ಕ ಸಹಾಯಕರಾದ ಉಮಾನಾಥ ಕೋನಿಮಾರ್ ಇದ್ದರು.

----------------

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಮತಗಿಯಲ್ಲಿ ನಿವೃತ್ತ ಯೋಧ ಲಕ್ಷ್ಮಣಗೆ ಭವ್ಯ ಸ್ವಾಗತ
ಉತ್ತರದ ಅಭಿವೃದ್ಧಿಗೆ ಪ್ರತ್ಯೇಕ ರಾಜ್ಯ ಅಗತ್ಯ: ಉ.ಕ.ಹೋರಾಟ ಸಮಿತಿ