31ರೊಳಗಾಗಿ ಇ ಕೆವೈಸಿ ಮಾಡಿಸದಿದ್ದರೆ ನರೇಗಾ ಜಾಬ್‌ ಕಾರ್ಡ್ ರದ್ದು: ಬಸವರಾಜ ಬಡಿಗೇರ

KannadaprabhaNewsNetwork |  
Published : Oct 28, 2025, 12:16 AM IST
ಗಜೇಂದ್ರಗಡ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಇ- ಕೆವೈಸಿ ಜಾಗೃತಿ ಮೂಡಿಸಲಾಯಿತು. | Kannada Prabha

ಸಾರಾಂಶ

ಹಾಲಕೆರೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಇ- ಕೆವೈಸಿ ಕಾರ್ಯ ಪರಿಶೀಲಿಸಿದ ಎಡಿ ಬಡಿಗೇರ ಅವರು, ಖುದ್ದು ಗ್ರಾಮದಲ್ಲಿ ಸಂಚರಿಸಿ ಕೂಲಿಕಾರರ ಮನೆಗಳಿಗೆ ಭೇಟಿ ನೀಡಿ ಇ- ಕೆವೈಸಿ ಕಾರ್ಯ ಮಾಡಿದರು.

ಗಜೇಂದ್ರಗಡ: ಕೇಂದ್ರ ಸರ್ಕಾರ ನರೇಗಾ ಯೋಜನೆಯ ಕೂಲಿಕಾರರಿಗೆ ಇ- ಕೆವೈಸಿ ಕಡ್ಡಾಯಗೊಳಿಸಿದೆ. ತಾಲೂಕಿನ 13 ಗ್ರಾಪಂ ವ್ಯಾಪ್ತಿಯಲ್ಲಿ ನರೇಗಾ ಕೂಲಿಕಾರರಿಗೆ ಇ- ಕೆವೈಸಿ ಕಾರ್ಯ ಪ್ರಗತಿಯಲ್ಲಿದ್ದು, 4 ದಿನಗಳಲ್ಲಿ ತಾಲೂಕಿನ ಎಲ್ಲ ನರೇಗಾ ಕೂಲಿಕಾರರು ಕಡ್ಡಾಯವಾಗಿ ಇ- ಕೆವೈಸಿ ಮಾಡಿಸಿಕೊಳ್ಳಬೇಕು. ಇಲ್ಲವಾದಲ್ಲಿ ಉದ್ಯೋಗ ಚೀಟಿ ರದ್ದುಗೊಳಿಸಲಾಗುವುದೆಂದು ತಾಪಂ ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕ ಬಸವರಾಜ ಬಡಿಗೇರ ತಿಳಿಸಿದರು.ತಾಲೂಕಿನಲ್ಲಿ ಅತಿ ಕಡಿಮೆ ಇ- ಕೆವೈಸಿ ಪ್ರಗತಿ ಸಾಧಿಸಿರುವ ಗ್ರಾಮ ಪಂಚಾಯಿತಿಗಳಾದ ಹಾಲಕೆರೆ ಮತ್ತು ಮಾರನಬಸರಿ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ನರೇಗಾ ಕೂಲಿಕಾರರ ಮನೆ- ಮನೆಗಳಿಗೆ ತೆರಳಿ ಈ ಬಗ್ಗೆ ಜಾಗೃತಿ ಮೂಡಿಸಿ ಮಾತನಾಡಿದರು.

ಹಾಲಕೆರೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಇ- ಕೆವೈಸಿ ಕಾರ್ಯ ಪರಿಶೀಲಿಸಿದ ಎಡಿ ಬಡಿಗೇರ ಅವರು, ಖುದ್ದು ಗ್ರಾಮದಲ್ಲಿ ಸಂಚರಿಸಿ ಕೂಲಿಕಾರರ ಮನೆಗಳಿಗೆ ಭೇಟಿ ನೀಡಿ ಇ- ಕೆವೈಸಿ ಕಾರ್ಯ ಮಾಡಿದರು.

ಈ ವೇಳೆ ಗ್ರಾಮಸ್ಥರ ಜತೆ ಸಮಾಲೋಚನೆ ನಡೆಸಿದ ಅವರು, ಅ. 31ರೊಳಗಾಗಿ ಇ- ಕೆವೈಸಿ ಮಾಡಿಸಿಕೊಳ್ಳಬೇಕು. ಇಲ್ಲವೇ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡಲು ಆಗುವುದಿಲ್ಲ ಎಂದರು.ಮಾರನಬಸರಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಸಿಬ್ಬಂದಿ ಜತೆ ಮಾತನಾಡಿ, ಬೆಳಗ್ಗೆ ಮತ್ತು ಸಂಜೆ ಸಂದರ್ಭದಲ್ಲಿ ನೆಟ್ವರ್ಕ್‌ ಸಮಸ್ಯೆ ಇರುವುದಿಲ್ಲ. ಆ ವೇಳೆ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಒಂದೆಡೆ ಕೂಲಿಕಾರರನ್ನು ಸೇರಿಸಿಕೊಂಡು ಇ- ಕೆವೈಸಿ ಕಾರ್ಯ ಮಾಡಿ ಎಂದು ಸಲಹೆ ನೀಡಿದರು.

ಗಜೇಂದ್ರಗಡ ತಾಲೂಕಿನಲ್ಲಿ ಒಟ್ಟು 37307 ನರೇಗಾ ಕೂಲಿಕಾರರು ಇದ್ದಾರೆ. ಈವರೆಗೂ 18198 ನರೇಗಾ ಕೂಲಿಕಾರರ ಇ- ಕೆವೈಸಿ ಕಾರ್ಯ ಪೂರ್ಣಗೊಂಡಿದೆ. ಬಾಕಿ 19109 ನರೇಗಾ ಕೂಲಿಕಾರರ ಇ- ಕೆವೈಸಿ ಕಾರ್ಯ ಉಳಿದಿದ್ದು, ಮುಂದಿನ ನಾಲ್ಕು ದಿನಗಳಲ್ಲಿ ಮುಕ್ತಾಯಗೊಳಿಸುವಂತೆ ಸಂಬಂಧಿಸಿದ ಸಿಬ್ಬಂದಿಗೆ ವರ್ಚುವಲ್ ಸಭೆ ಮೂಲಕ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ. ಕಂದಕೂರ ತಾಕೀತು ಮಾಡಿದ್ದಾರೆ.

ಈ ವೇಳೆ ತಾಲೂಕಿನ ಎಲ್ಲ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಗಣಕಯಂತ್ರ ನಿರ್ವಾಹಕರು, ನರೇಗಾ ಯೋಜನೆಯ ತಾಂತ್ರಿಕ ಸಂಯೋಜಕರು, ತಾಂತ್ರಿಕ ಸಹಾಯಕರು, ಎಂಐಎಸ್ ಸಂಯೋಜಕರು, ಬಿಎಫ್‌ಟಿ, ಗ್ರಾಮ ಕಾಯಕ ಮಿತ್ರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು