ಗ್ರಾಮೀಣಾಭಿವೃದ್ಧಿಗೆ ನರೇಗಾ ಯೋಜನೆ ದಾರಿದೀಪ: ಶರಣಪ್ಪ ಕೆಳಗಿನಮನಿ

KannadaprabhaNewsNetwork |  
Published : Nov 25, 2024, 01:02 AM IST
24ಕೆಕೆಆರ್3:ಕುಕನೂರು ತಾಲೂಕಿನ ಇಟಗಿ ಗ್ರಾಮ ಪಂಚಾಯತಿಯಲ್ಲಿ ಗ್ರಾಪಂ ಅಧ್ಯೆಕ್ಷೆ ನಿರ್ಮಲಾ ಮಹೇಶ ಹಿರೇಮನಿ ರವರ ಅಧ್ಯಕ್ಷತೆಯಲ್ಲಿ  2025 -26 ನೇ ಸಾಲಿನ ಕ್ರಿಯಾ ಯೋಜನೆ ತಯಾರಿಕೆ ಗ್ರಾಮ ಸಭೆ ಜರುಗಿತು. | Kannada Prabha

ಸಾರಾಂಶ

ನರೇಗಾ ಯೋಜನೆ ಗ್ರಾಮೀಣಾಭಿವೃದ್ಧಿಗೆ ಸಹಕಾರಿಯಾಗಿದೆ.

2025-26ನೇ ಸಾಲಿನ ಕ್ರಿಯಾ ಯೋಜನೆ ತಯಾರಿಕೆಯ ಗ್ರಾಮ ಸಭೆ

ಕನ್ನಡಪ್ರಭ ವಾರ್ತೆ ಕುಕನೂರು

ನರೇಗಾ ಯೋಜನೆ ಗ್ರಾಮೀಣಾಭಿವೃದ್ಧಿಗೆ ಸಹಕಾರಿಯಾಗಿದೆ ಎಂದು ತಾಪಂ ಸಹಾಯಕ ನಿರ್ದೇಶಕ ಶರಣಪ್ಪ ಕೆಳಗಿನಮನಿ ಹೇಳಿದರು.

ತಾಲೂಕಿನ ಇಟಗಿ ಗ್ರಾಮ ಪಂಚಾಯಿತಿಯಲ್ಲಿ ಗ್ರಾಪಂ ಅಧ್ಯಕ್ಷೆ ನಿರ್ಮಲಾ ಮಹೇಶ ಹಿರೇಮನಿ ಅಧ್ಯಕ್ಷತೆಯಲ್ಲಿ ಜರುಗಿದ 2025 -26ನೇ ಸಾಲಿನ ಕ್ರಿಯಾ ಯೋಜನೆ ತಯಾರಿಕೆಯ ಗ್ರಾಮ ಸಭೆಯಲ್ಲಿ ಮಾತನಾಡಿದರು.ನರೇಗಾದಡಿ ಗ್ರಾಮೀಣ ಪ್ರದೇಶದಲ್ಲಿ ನೂರಾರು ಕಾಮಗಾರಿಗಳನ್ನು ಅನುಷ್ಠಾನ ಮಾಡುವ ಮೂಲಕ ಗ್ರಾಮೀಣಾಭಿವೃದ್ಧಿ ಕನಸನ್ನು ನನಸಾಗಿಸಬಹುದು. ಮುಖ್ಯವಾಗಿ‌ ಸಕಲ ಜೀವವರಾಶಿಗಳು ಆಹಾರ ನೀಡುವ ಮಣ್ಣನ್ನು ಸಂರಕ್ಷಣೆ ಮಾಡಲು ಬದು ನಿರ್ಮಾಣ, ಕೃಷಿ ಹೊಂಡ, ನಾಲಾ ಸುಧಾರಣೆ, ಚೆಕ್ ಡ್ಯಾಮ್ ಹೂಳೆತ್ತುವುದು, ಅರಣ್ಯೀಕರಣ, ತೋಟಗಾರಿಕೆ, ಅರಣ್ಯ, ರೇಷ್ಮೆ ಸೇರಿದಂತೆ ವಿವಿಧ ಇಲಾಖೆಗಳು ಸಹ ನರೇಗಾ ಯೋಜನೆಯ ಮೂಲಕ ಕಾಮಗಾರಿ ಅನುಷ್ಠಾನ ಮಾಡುತ್ತಿವೆ. ಕಳೆದ ವರ್ಷದಲ್ಲಿ ಸಾಮೂಹಿಕ ಬದು ನಿರ್ಮಾಣದಂತಹ ಕಾಮಗಾರಿಗಳನ್ನು ಜಲಾಮೃತ ಮಾದರಿಯಲ್ಲಿ ಅನುಷ್ಠಾನ ಮಾಡಿದ್ದು, ಇದು ತಾಲೂಕಿನಲ್ಲಿಯೇ ಮಾದರಿ ಗ್ರಾಮ ಪಂಚಾಯಿತಿಯಾಗಿದೆ ಎಂದರು.

ಈ ವರ್ಷವೂ ಸಹ ರೈತರು ನರೇಗಾ ಯೋಜನೆಯಡಿ ಅನುಮೋದಿಸಿರುವ 266 ಕಾಮಗಾರಿಗಳಲ್ಲಿ ಯಾವುದಾದರೂ ಕಾಮಗಾರಿಯನ್ನು ಅನುಷ್ಠಾನ ಮಾಡಿಕೊಳ್ಳಬಹುದು ಎಂದರು.

ನೋಡಲ್ ಅಧಿಕಾರಿ ಪ್ರೇಮಾ ರೇಷ್ಮೆ, ತೋಟಗಾರಿಗೆ ಅಧಿಕಾರಿ ನಿತೀಶ್ ಕುಮಾರ, ಕೃಷಿ ಅಧಿಕಾರಿ ಜೆ.ಡಿ. ಕೋಳಜಿ, ವಲಯ ಅರಣ್ಯಾಧಿಕಾರಿ ಚಿದಾನಂದ ಓಲೇಕಾರ, ರೇಷ್ಮೆ ಇಲಾಖೆ ಅಧಿಕಾರಿ ಆರ್.ಬಿ. ಕಮತರ್, ಮಾಜಿ ಅಧ್ಯಕ್ಷ ಗವಿಸಿದ್ದನಗೌಡ ಮುದ್ದಾಬಳ್ಳಿ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ದೇವಪ್ಪ ಗಾಳೆಪ್ಪ ಹರಿಜನ್, ರೇಣುಕಾ ಉಮೇಶ ಹೋಸ ಉಪ್ಪಾರ, ಲಕ್ಷ್ಮವ್ವ ಚಂದ್ರಪ್ಪ ತಳವಾರ, ಕಲಾವತಿ ಅಂದಪ್ಪ ಕಳ್ಳಿ, ಬಸವರಾಜೇಶ್ವರಿ ಶಾಂತಯ್ಯ ಕಂತಿ, ಸ್ವ ಸಹಾಯ ಸಂಘದ ಒಕ್ಕೂಟದ ಅಧ್ಯಕ್ಷ ಪುಷ್ಪಾ ಬಸನಗೌಡ ಮುದ್ದಾಬಳ್ಳಿ, ಸಿಬ್ಬಂದಿ, ಗ್ರಾಮಸ್ಥರು, ನರೇಗಾ ಕಾಯಕ ಬಂಧುಗಳು, ಕೃಷಿಕರು, ಕೂಲಿಕಾರರು ಇದ್ದರು.

PREV

Recommended Stories

ಶಿವಯೋಗಿ ಸೊಸೈಟಿಗೆ 20.97 ಲಕ್ಷ ಲಾಭ
ಯುವಜನತೆಗೆ ರಕ್ತದಾನದ ಮಹತ್ವ ತಿಳಿಸಿಕೊಡಿ