ನರೇಗಾ ಕಾರ್ಮಿಕರು ಗುಣಮಟ್ಟದ ಕೆಲಸ ನಿರ್ವಹಿಸಲಿ: ಚಂದ್ರಶೇಖರ ಕಂದಕೂರ

KannadaprabhaNewsNetwork |  
Published : May 13, 2026, 01:30 AM IST
ರೋಣ ತಾಲೂಕಿನ ಸವಡಿ ಗ್ರಾಪಂ ವ್ಯಾಪ್ತಿಯ ಹೊನ್ನಾಪುರ ಗ್ರಾಮದಲ್ಲಿ ಸಾಮೂಹಿಕ ಬದು ನಿರ್ಮಾಣ ಕಾಮಗಾರಿ ಸ್ಥಳಕ್ಕೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ. ಕಂದಕೂರ ಭೇಟಿ ನೀಡಿ ಪರಿಶೀಲಿಸಿದರು. | Kannada Prabha

ಸಾರಾಂಶ

ಈ ವೇಳೆ ಕೂಲಿಕಾರರು ಗ್ರಾಮದಲ್ಲಿ ನಿರಂತರವಾಗಿ ನರೇಗಾ ಕಾಮಗಾರಿಗಳನ್ನು ಆರಂಭಿಸಿ ಉದ್ಯೋಗಾವಕಾಶ ಕಲ್ಪಿಸಬೇಕೆಂದು ಮನವಿ ಮಾಡಿದರು.

ರೋಣ: ಬಿಸಿಲಿನ ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆ ಆರೋಗ್ಯದ ದೃಷ್ಟಿಯಿಂದ ಎಲ್ಲರೂ ಮುಂಜಾನೆ ಬೇಗ ಕೆಲಸಕ್ಕೆ ಹಾಜರಾಗಿ ಮಧ್ಯಾಹ್ನದೊಳಗೆ ಕೆಲಸ ಮುಗಿಸಿಕೊಳ್ಳುವಂತೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ. ಕಂದಕೂರ ತಿಳಿಸಿದರು.

ತಾಲೂಕಿನ ಸವಡಿ ಗ್ರಾಪಂ ವ್ಯಾಪ್ತಿಯ ಹೊನ್ನಾಪುರ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ನಡೆಯುತ್ತಿರುವ ಸಾಮೂಹಿಕ ಬದು ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಮಾತನಾಡಿ, ಸರ್ಕಾರದ ಮಾರ್ಗಸೂಚಿ ಅನುಸಾರ ಕೂಲಿಕಾರರು ಕಡ್ಡಾಯವಾಗಿ ಅಳತೆಗೆ ತಕ್ಕಂತೆ ಕೆಲಸ ನಿರ್ವಹಿಸಬೇಕು ಎಂದು ಸೂಚಿಸಿದರು.ಈ ವೇಳೆ ಕೂಲಿಕಾರರು ಗ್ರಾಮದಲ್ಲಿ ನಿರಂತರವಾಗಿ ನರೇಗಾ ಕಾಮಗಾರಿಗಳನ್ನು ಆರಂಭಿಸಿ ಉದ್ಯೋಗಾವಕಾಶ ಕಲ್ಪಿಸಬೇಕೆಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಕಾರ್ಯನಿರ್ವಾಹಕ ಅಧಿಕಾರಿಗಳು, ಗುಣಮಟ್ಟದ ಹಾಗೂ ನಿಯಮಾನುಸಾರ ಕೆಲಸ ಮಾಡಿದಲ್ಲಿ ನಿರಂತರವಾಗಿ ಕೆಲಸ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಪರಿಶೀಲನೆ ಸಂದರ್ಭದಲ್ಲಿ ಕೂಲಿಕಾರರು ಹಾಗೂ ಸಿಬ್ಬಂದಿಗೆ ಹಲವು ಪ್ರಮುಖ ಸೂಚನೆಗಳನ್ನು ನೀಡಲಾಯಿತು. ಪ್ರತಿದಿನ ಕಡ್ಡಾಯವಾಗಿ ಎರಡು ಬಾರಿ ಎನ್‌ಎಂಎಂಎಸ್‌ ಆ್ಯಪ್ ಮೂಲಕ ಹಾಜರಾತಿ ದಾಖಲಿಸಬೇಕು. ಕಾಯಕ ಬಂಧುಗಳು ತಮ್ಮ ವ್ಯಾಪ್ತಿಯ ಕೂಲಿಕಾರರಿಗೆ ಪ್ರತಿದಿನ ಕೆಲಸದ ಅಳತೆಯ ಕುರಿತು ಮಾಹಿತಿ ನೀಡಿ, ಸರಿಯಾದ ರೀತಿಯಲ್ಲಿ ಕೆಲಸ ನಿರ್ವಹಿಸಲು ಮಾರ್ಗದರ್ಶನ ನೀಡುವಂತೆ ಸೂಚಿಸಲಾಯಿತು. ಎನ್‌ಎಂಆರ್ ತೆಗೆದುಕೊಂಡ ಕೂಲಿಕಾರರು ಕಡ್ಡಾಯವಾಗಿ ಕಾಮಗಾರಿ ಸ್ಥಳಕ್ಕೆ ಹಾಜರಾಗಿ ಕೆಲಸ ನಿರ್ವಹಿಸಬೇಕು ಎಂದು ಅಧಿಕಾರಿಗಳು ಸೂಚಿಸಿದರು.ನರೇಗಾ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಬದು ನಿರ್ಮಾಣ ಕಾಮಗಾರಿಗಳು ಗ್ರಾಮೀಣ ಭಾಗದಲ್ಲಿ ನೀರು ಸಂರಕ್ಷಣೆ, ಮಣ್ಣಿನ ಸದ್ಬಳಕೆ ಹಾಗೂ ರೈತರ ಭೂಮಿಯ ಅಭಿವೃದ್ಧಿಗೆ ಸಹಕಾರಿಯಾಗುತ್ತಿದ್ದು, ಗ್ರಾಮಾಭಿವೃದ್ಧಿಗೆ ಮಹತ್ವದ ಪಾತ್ರ ವಹಿಸುತ್ತಿವೆ ಎಂದು ತಿಳಿಸಿದರು. ಈ ವೇಳೆ ಪಿಡಿಒ, ಟಿಐಇಸಿ, ಡಿಇಒ, ಜಿಕೆಎಂ, ಗ್ರಾಪಂ ಸಿಬ್ಬಂದಿ ಹಾಗೂ ಗ್ರಾಮಸ್ಥರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಾಡಿಗೆ ಕಟ್ಟಡದಲ್ಲಿ 203 ಅಂಗನವಾಡಿಗಳು
ವಾಟ್ಸಾಪ್ ಮೂಲಕ ಮಾವಿನ ಹಣ್ಣು ವ್ಯಾಪಾರ