ನಾಯಕತ್ವ ಗುಣ ಬೆಳೆಸುವ ಎನ್ನೆಸ್ಸೆಸ್‌

KannadaprabhaNewsNetwork |  
Published : Apr 15, 2026, 03:00 AM IST
ಮುಚಖಂಡಿ ಗ್ರಾಮದಲ್ಲಿ ಎನ್.ಎಸ್.ಎಸ್.ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬಾಗಲಕೋಟೆ ರಾಷ್ಟ್ರೀಯ ಸೇವಾ ಯೋಜನೆ ಘಟಕದಿಂದ ನಡೆಯುವ ಶಿಬಿರಗಳು ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುವುದರೊಂದಿಗೆ ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಸನ ನಿರ್ಮಾಣವಾಗುತ್ತದೆ ಎಂದು ಪ್ರಾಂಶುಪಾಲ ಡಾ.ಅರುಣಕುಮಾರ ಗಾಳಿ ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ರಾಷ್ಟ್ರೀಯ ಸೇವಾ ಯೋಜನೆ ಘಟಕದಿಂದ ನಡೆಯುವ ಶಿಬಿರಗಳು ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುವುದರೊಂದಿಗೆ ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಸನ ನಿರ್ಮಾಣವಾಗುತ್ತದೆ ಎಂದು ಪ್ರಾಂಶುಪಾಲ ಡಾ.ಅರುಣಕುಮಾರ ಗಾಳಿ ಹೇಳಿದರು.

ಬಾಗಲಕೋಟೆ ಸಮೀಪದ ಮುಚಖಂಡಿ ಗ್ರಾಮದ ಶ್ರೀ ವೀರಭದ್ರೇಶ್ವರ ಸಭಾ ಮಂಟಪದಲ್ಲಿ ಪ್ರಾರಂಭವಾದ ನವನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ 2025-26ನೇ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎನ್‌ಎಸ್‌ಎಸ್ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಬೆಳೆಸುವ ಮೂಲಕ ಅವರಲ್ಲಿ ಸಮಯ ಪಾಲನೆ, ಶಿಸ್ತು, ಪ್ರಾಮಾಣಿಕತೆ ಮತ್ತು ಸಾಮಾಜಿಕ ಮೌಲ್ಯಗಳನ್ನು ಬೆಳೆಸುತ್ತವೆ ಎಂದು ಹೇಳಿದರು.

ಜಿಲ್ಲಾ ಪಿಡಿಒ ಸಂಘದ ಅಧ್ಯಕ್ಷ ಸಿದ್ಧಾರ್ಥ ಗೋಠೆ ಅವರು ಸಸಿಗೆ ನೀರುಣಿಸಿ ಶಿಬಿರ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಗ್ರಾಮೀಣ ಪರಿಸರದ ದೇಶಿಯ ಸಂಸ್ಕೃತಿಯನ್ನು ತಿಳಿದುಕೊಳ್ಳಬೇಕು. ಏಳು ದಿನಗಳ ನಡೆಯುವ ಶಿಬಿರವು ಶಿಬಿರಾರ್ಥಿಗಳಲ್ಲಿರುವ ಪ್ರತಿಭಾ ಸಾಮರ್ಥ್ಯದ ಗುಣಮಟ್ಟ ಹೆಚ್ಚಿಸುತ್ತದೆ. ಶಿಬಿರದಿಂದ ತಮ್ಮ ಬದುಕಿನಲ್ಲಿ ಸೇವಾ ಭಾವನೆಯ ಮೌಲ್ಯಗಳನ್ನು ಬೆಳೆಸಿಕೊಳ್ಳಲು ಸಾಧ್ಯವಿದೆ ಎಂದು ಹೇಳಿದರು.

ಜಿಲ್ಲಾ ಪಿಡಿಒ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ ನಾಯಕ ಮಾತನಾಡಿ, ಗ್ರಾಮೀಣ ಪರಿಸರದಲ್ಲಿ ಸೇವೆ ಮಾಡುವ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬಹುದು ಎಂದರು. ಎನ್‌ಎಸ್‌ಎಸ್ ಘಟಕದ ಕ್ರಾರ್ಯಕ್ರಮಾಧಿಕಾರಿ ಪ್ರೊ.ಸಂಪತ್ತ ಲಮಾಣಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಐಕ್ಯೂಎಸಿ ಸಂಚಾಲಕ ಡಾ.ಬಸವರಾಜ ಬೀಳಗಿ, ಡಾ.ಚಂದ್ರಶೇಖರ ಕಾಳನ್ನವರ, ನೀಲಪ್ಪ ಕುರಿ, ಲೇಪಾಕ್ಷಯ್ಯ, ಪರಸಪ್ಪ ತಳವಾರ, ಶಿವಶಂಕರ ಪ್ರಸಾದ, ಸುನಂದಾ ಬೂದಿಹಾಳ, ಶ್ರೀಶೈಲ ಶಿರೋಳ, ಚಂದ್ರಶೇಖರ ಕಾಳೆ, ಹುರಕಡ್ಲಿ, ಪ್ರೇಮಾ ಗೆಜ್ಜಿ ಅತಿಥಿಗಳಾಗಿ ವೇದಿಕೆ ಮೇಲೆ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಶಿಬಿರಾರ್ಥಿಗಳು ಎನ್‌ಎಸ್‌ಎಸ್ ಗೀತೆ ಹಾಡಿದರು, ಡಾ.ಬಸವರಾಜ ಬೀಳಗಿ ಸ್ವಾಗತಿಸಿದರು, ಡಾ.ಚಂದ್ರಶೇಖರ ಕಾಳನ್ನವರ ನಿರೂಪಿಸಿದರು. ಪ್ರೊ.ಪರಸಪ್ಪ ತಳವಾರ ವಂದಿಸಿದರು. ಶಿಬಿರದಲ್ಲಿ ಐವತ್ತು ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ಯಾರಂಟಿ ನಿಭಾಯಿಸಲಾಗದೇ ಕಾಂಗ್ರೆಸ್ ಹೆಣಗಾಟ
ಎಲ್ಲರೂ ಮಹಾತ್ಮರ ಜಯಂತಿ ಆಚರಣೆ ಉದ್ದೇಶ ತಿಳಿಯಿರಿ