ಗ್ರಾಮೀಣ ಬದುಕು ಅರಿಯಲು ಎನ್ನೆಸ್ಸೆಸ್‌ ಶಿಬಿರ ಸಹಕಾರಿ

KannadaprabhaNewsNetwork |  
Published : May 25, 2026, 01:30 AM IST
ಪೋಟೋ 3 : ಸೋಂಪುರ ಹೋಬಳಿಯ ವನಕಲ್ಲು ಮಠದಲ್ಲಿ ಬೆಂಗಳೂರಿನ ಹೈದರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀ ವೀರೇಂದ್ರ ಪಾಟೀಲ ವಿಜ್ಞಾನ, ಕಲಾ ಹಾಗೂ ವಾಣಿಜ್ಯ ಪದವಿ ಮಹಾವಿದ್ಯಾಲಯವೂ ಹಮ್ಮಿಕೊಂಡಿದ್ದ ವಿಶೇಷ ಎನ್‍ಎಸ್‍ಎಸ್ ಶಿಬಿರದ ಸಮಾರೋಪ ಸಮಾರಂಭದಲ್ಲಿ ವನಕಲ್ಲು ಮಠದ ಡಾ.ಶ್ರೀ ಬಸವರಮಾನಂದ ಸ್ವಾಮೀಜಿರವರು ಭಾಗವಹಿಸಿರುವುದು | Kannada Prabha

ಸಾರಾಂಶ

ದಾಬಸ್‍ಪೇಟೆ: ವಿದ್ಯಾರ್ಥಿಗಳಿಗೆ ಗ್ರಾಮೀಣರ ಬದುಕನ್ನು ಅರ್ಥ ಮಾಡಿಕೊಳ್ಳಲು ಎನ್ನೆಸ್ಸೆಸ್‌ ಶಿಬಿರಗಳು ಸಹಕಾರಿ ಎಂದು ವನಕಲ್ಲು ಮಠದ ಡಾ.ಶ್ರೀ ಬಸವರಮಾನಂದ ಸ್ವಾಮೀಜಿ ಹೇಳಿದರು

ದಾಬಸ್‍ಪೇಟೆ: ವಿದ್ಯಾರ್ಥಿಗಳಿಗೆ ಗ್ರಾಮೀಣರ ಬದುಕನ್ನು ಅರ್ಥ ಮಾಡಿಕೊಳ್ಳಲು ಎನ್ನೆಸ್ಸೆಸ್‌ ಶಿಬಿರಗಳು ಸಹಕಾರಿ ಎಂದು ವನಕಲ್ಲು ಮಠದ ಡಾ.ಶ್ರೀ ಬಸವರಮಾನಂದ ಸ್ವಾಮೀಜಿ ಹೇಳಿದರು.

ಸೋಂಪುರ ಹೋಬಳಿಯ ವನಕಲ್ಲು ಮಠದಲ್ಲಿ ಬೆಂಗಳೂರಿನ ಹೈದರಾಬಾದ್‌ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀ ವೀರೇಂದ್ರ ಪಾಟೀಲ ವಿಜ್ಞಾನ, ಕಲಾ ಹಾಗೂ ವಾಣಿಜ್ಯ ಪದವಿ ಮಹಾವಿದ್ಯಾಲಯ ಹಮ್ಮಿಕೊಂಡಿದ್ದ ವಿಶೇಷ ಶ್ರಮದಾನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಗ್ರಾಮಗಳು ಪ್ರಗತಿ ಹೊಂದದ ಹೊರತು ದೇಶ ಅಭಿವೃದ್ಧಿಯಾಗುವುದಿಲ್ಲ. ಗಾಂಧೀಜಿ ಅವರ ಕನಸು ನನಸು ಮಾಡಲು ಯುವಕರು ಶ್ರಮಿಸಬೇಕು. ‘ರಾಷ್ಟ್ರೀಯ ಸೇವಾ ಯೋಜನೆ ಶಿಬಿರಗಳು ವಿದ್ಯಾರ್ಥಿಗಳಿಗೆ ಸಮಾಜಮುಖಿ ಚಿಂತನೆಗಳನ್ನು ಬೆಳೆಸಿಕೊಳ್ಳಲು ಸಹಕಾರಿಯಾಗಲಿದೆ ಎಂದರು.

ಬೆಂಗಳೂರು ವಿಶ್ವವಿದ್ಯಾಲಯದ ಎನ್ನೆಸ್ಸೆಸ್‌ ಯೋಜನಾ ಸಂಯೋಜಕ ಡಾ.ಗೋವಿಂದಗೌಡ ಮಾತನಾಡಿ, ಬ್ರಾತೃತ್ವ ಮತ್ತು ಸ್ನೇಹ ಸಮಾಜದ ದೊಡ್ಡ ಆಸ್ತಿ. ಈ ಶಿಬಿರವು ಅನುಭವ ಆಧಾರಿತ ಶಿಕ್ಷಣ ನೀಡುತ್ತದೆ. ಗ್ರಾಮೀಣ ಬದುಕು, ಸಂಸ್ಕೃತಿಯ ಪರಿಚಯ ಆಗಲಿದೆ. ಶಿಬಿರಾರ್ಥಿಗಳ ವ್ಯಕ್ತಿತ್ವ ಬೆಳವಣಿಗೆ ಹೊಂದಲಿದೆ. ಎನ್ನೆಸ್ಸೆಸ್‌ ಶಿಬಿರಾರ್ಥಿಯು ಮುಂದಿನ ದಿನಗಳಲ್ಲಿ ಸಮಾಜ ಮುಖಿಯಾಗಿ ಕೆಲಸ ಮಾಡಲು ಪ್ರೇರಣೆ ಆಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಕಾಲೇಜಿನ ವ್ಯವಸ್ಥಾಪಕ ಡಾ. ಚಂದ್ರಶೇಖರ ಗಂದಿಗುಡಿ ಎನ್ನೆಸ್ಸೆಸ್‌ ಕಾರ್ಯಕ್ರಮ ಅಧಿಕಾರಿ ಮಂಜೇಗೌಡ ಸೇರಿದಂತೆ ಉಪನ್ಯಾಸಕ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪೋಟೋ 3 : ಸೋಂಪುರ ಹೋಬಳಿಯ ವನಕಲ್ಲು ಮಠದಲ್ಲಿ ಬೆಂಗಳೂರಿನ ಹೈದರಾಬಾದ್‌ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀ ವೀರೇಂದ್ರ ಪಾಟೀಲ ವಿಜ್ಞಾನ, ಕಲಾ ಹಾಗೂ ವಾಣಿಜ್ಯ ಪದವಿ ಮಹಾವಿದ್ಯಾಲಯ ಹಮ್ಮಿಕೊಂಡಿದ್ದ ವಿಶೇಷ ಶ್ರಮದಾನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಡಾ.ಶ್ರೀ ಬಸವರಮಾನಂದ ಸ್ವಾಮೀಜಿ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವನ್ಯಜೀವಿ ಕಾರಿಡಾರ್ ಸಂರಕ್ಷಣೆ ನೀತಿಗೆ ಶೀಘ್ರ ಅನುಮತಿ ?
ಬಿಪಿಎಲ್‌ಗೆ ಆದಾಯ ಮಿತಿ ಹೆಚ್ಚಳಕ್ಕೆ ಶೀಘ್ರ ಕ್ರಮ : ಕೆಎಚ್‌ಎಂ