ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ತಾಲೂಕಿನ ಬೀರುವಳ್ಳಿಯಲ್ಲಿ ನಡೆಯುತ್ತಿರುವ ಕೆ.ಆರ್.ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶ್ರಮದಾನ ಶಿಬಿರದಲ್ಲಿ ಮಾತನಾಡಿ, ಎನ್ಎಸ್ಎಸ್ ಶಿಬಿರ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುತ್ತದೆ. ದೈನಂದಿನದ ಬದುಕಿನಲ್ಲಿ ಎದುರಾಗುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮಸ್ಯೆಗಳನ್ನು ಸುಲಭವಾಗಿ ಎದುರಿಸಲು ಧೈರ್ಯ ಬರುತ್ತದೆ ಎಂದರು.
ಶಿಬಿರಗಳು ವ್ಯಾವಹಾರಿಕವಾಗಿ ಹಾಗೂ ಶ್ರದ್ಧೆ, ವಿನಯ, ಶಿಸ್ತು ಮುಂತಾದುವುಗಳನ್ನು ಕಲಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ವಿದ್ಯಾರ್ಥಿ ಜೀವನ ಚಿನ್ನದಂಥಹ ಜೀವನ. ಎನ್ಎಸ್ಎಸ್ ಶಿಬಿರದಲ್ಲಿನ ಘಟನೆಗಳನ್ನು ನೀವು ಎಂದಿಗೂ ಮರೆಯಲಾಗದು ಎಂದರು.ಪಾಂಡವಪುರ ಉಪವಿಭಾಗಾಧಿಕಾರಿ ಡಾ.ಕೆ.ಆರ್.ಶ್ರೀನಿವಾಸ್ ಮಾತನಾಡಿ, ಯಾವುದೇ ರಾಜಕೀಯ ಹಿನ್ನೆಲೆಯಿಲ್ಲದೇ ಗ್ರಾಮೀಣ ಪ್ರದೇಶದ ರೈತನ ಮಗನಾಗಿ ಶಾಸಕರಾಗಿರುವ ಮಂಜಣ್ಣನವರು ಸಜ್ಜನ ರಾಜಕಾರಣಿಯಾಗಿದ್ದಾರೆ. ಸರ್ಕಾರಿ ಶಾಲೆಯಲ್ಲಿ ಓದಿ ಸಮಾಜಸೇವೆ ಮಾಡುತ್ತಿದ್ದಾರೆ. ಎನ್ಎಸ್ಎಸ್ ಶಿಬಿರಗಳು ಇಂತಹ ನಾಯಕತ್ವದ ಗುಣಕ್ಕೆ ಸಾಕ್ಷಿಯಾಗಿದೆ ಎಂದರು.
ಇಂದು ಕೊಡಲ್ಲ ಅಂದ್ರೆ ಕೊಡಲ್ಲ ನಾಟಕ ಪ್ರದರ್ಶನ
ನಾಗಮಂಗಲ: ಪಟ್ಟಣದ ಕನ್ನಡ ಸಂಘ ವಿಶ್ವಸ್ಥ ಸಮಿತಿಯಿಂದ ಸರ್ಕಾರಿ ಪದವಿ ಪೂರ್ವಕಾಲೇಜು ಆವರಣದಲ್ಲಿ ನಿರ್ಮಿಸಿರುವ ಡಾ.ಎಸ್.ಎಲ್.ಭೈರಪ್ಪ ನೆನಪಿನ ವೇದಿಯಲ್ಲಿ ಆಯೋಜಿಸಿರುವ 17ನೇ ವರ್ಷದ ರಾಜ್ಯಮಟ್ಟದ ನಾಗರಂಗ ನಾಟಕೋತ್ಸವದ ಎರಡನೇ ದಿನವಾದ ನ.24ರ ಸಂಜೆ 7.15ಕ್ಕೆ ಶ್ರೀರಂಗಪಟ್ಟಣದ ನಿರ್ದಿಗಂತ ಪ್ರಸ್ತುತ ಪಡಿಸುವ ಶಕೀಲ್ ಅಹ್ಮದ್ ನಿರ್ದೇಶನದ ಕೊಡಲ್ಲ ಅಂದ್ರೆ ಕೊಡಲ್ಲ ನಾಟಕ ಪ್ರದರ್ಶನಗೊಳ್ಳಲಿದೆ. ನಾಟಕದ ಸಾರಾಂಶ: ಬೆಲೆ ಏರಿಕೆ, ಆರ್ಥಿಕ ಸಂಕಷ್ಟ ಮತ್ತು ಹೆಚ್ಚುತ್ತಿರುವ ತೆರಿಗೆಯನ್ನು ವಿರೋಧಿಸಿ ನಿಲ್ಲುವ ಒಂದು ರಾಜಕೀಯ ಪ್ರಹಸನ. ದಬ್ಬಾಳಿಕೆ ವ್ಯವಸ್ಥೆಯ ವಿರುದ್ಧ ಸಾಮಾನ್ಯ ಜನರು ಒಂದಾಗುವುದರೊಂದಿಗೆ ಒಗ್ಗಟ್ಟಿನ ಕರೆಯಲ್ಲಿ ಈ ನಾಟಕ ಕೊನೆಗೊಳ್ಳಲಿದೆ.