ಯುವಕರಲ್ಲಿ ದೇಶಾಭಿಮಾನ ಮೂಡಿಸುವಲ್ಲಿ ಎನ್ಎಸ್ಎಸ್ ಪಾತ್ರ‌ ಪ್ರಮುಖ: ಶಿವಾನಂದ

KannadaprabhaNewsNetwork |  
Published : Dec 18, 2025, 02:30 AM IST
ಹರಪನಹಳ್ಳಿ: ಹೊಂಬಳಗಟ್ಟಿ ಬಯಲು ರಂಗ ಮಂದಿರ ಆವರಣದಲ್ಲಿ ನಡೆದ ಎನ್ ಎಸ್ ಎಸ್ ವಿಶೇಷ ಶಿಬಿರದಲ್ಲಿ‌ ಉಪನ್ಯಾಸಕ ಶಿವಾನಂದ ಮಾತನಾಡಿದರು. | Kannada Prabha

ಸಾರಾಂಶ

ಸಮಾಜದ ಸಮಸ್ಯೆಗಳನ್ನು ಗುರುತಿಸಿ, ಅವುಗಳಿಗೆ ಪರಿಹಾರ ಹುಡುಕುವ ಸಾಮರ್ಥ್ಯ ಯುವಕರಲ್ಲಿದೆ

ಹರಪನಹಳ್ಳಿ: ಯುವಕರಲ್ಲಿ ಸೇವಾ ಮನೋಭಾವ, ದೇಶಾಭಿಮಾನ ಮೂಡಿಸುವಲ್ಲಿ ಎನ್ಎಸ್ಎಸ್ ಪ್ರಮುಖ ಪಾತ್ರ ವಹಿಸಿದೆ ಎಂದು ರಾಜ್ಯ ಬಸವ ಚೇತನ ಪ್ರಶಸ್ತಿ ಪುರಸ್ಕೃತ ಉಪನ್ಯಾಸಕ ಎಚ್.ಶಿವಾನಂದ ಹೇಳಿದರು.

ತಾಲೂಕಿನ ಹೊಂಬಳಗಟ್ಟಿ ಗ್ರಾಮದ ಬಯಲು ರಂಗ ಮಂದಿರ ಆವರಣದಲ್ಲಿ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಎಚ್‌ಪಿಎಸ್ ಪದವಿ ಮಹಾವಿದ್ಯಾಲಯದಿಂದ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರದಲ್ಲಿ ಪಾಲ್ಗೊಂಡು ಮಾತನಾಡಿದರು.ಯುವಕರು ಸಮಾಜದ ವರ್ತಮಾನ ಮಾತ್ರವಲ್ಲ, ಭವಿಷ್ಯದ ಶಿಲ್ಪಿಗಳೂ ಹೌದು. ಯುವಶಕ್ತಿ ಎಂದರೆ ಉತ್ಸಾಹ, ಸೃಜನಶೀಲತೆ ಮತ್ತು ಬದಲಾವಣೆಯ ಸಂಕೇತ, ಸಮಾಜದ ಸಮಸ್ಯೆಗಳನ್ನು ಗುರುತಿಸಿ, ಅವುಗಳಿಗೆ ಪರಿಹಾರ ಹುಡುಕುವ ಸಾಮರ್ಥ್ಯ ಯುವಕರಲ್ಲಿದೆ ಎಂದರು.

ಶಿಕ್ಷಣ, ವಿಜ್ಞಾನ, ತಂತ್ರಜ್ಞಾನ, ಕ್ರೀಡೆ, ಕೃಷಿ, ಕೈಗಾರಿಕೆ, ವೈದ್ಯಕೀಯ ಹಾಗೂ ಆಡಳಿತ ಕ್ಷೇತ್ರಗಳಲ್ಲಿ ಯುವಕರು ದೇಶದ ಪ್ರಗತಿಗೆ ದೊಡ್ಡ ಕೊಡುಗೆ ನೀಡಬೇಕು. ಪ್ರಸ್ತುತ ಸಮಾಜದಲ್ಲಿ ನಿರುದ್ಯೋಗ, ಪರಿಸರ ಮಾಲಿನ್ಯ, ಅಸಮಾನತೆ, ಮುಂತಾದ ಸವಾಲುಗಳು ನಮ್ಮ ಮುಂದೆ ಇವೆ. ಇವುಗಳಿಗೆ ಪರಿಹಾರ ಕಂಡುಕೊಳ್ಳಲು ಯುವಕರು ಜ್ಞಾನ, ಶಿಸ್ತು ಮತ್ತು ಸೇವಾಭಾವದಿಂದ ಮುಂದೆ ಬರಬೇಕು ಎಂದು ಹೇಳಿದರು.

ಯುವಕರು ಕೇವಲ ಉದ್ಯೋಗ ಹುಡುಕುವವರಾಗದೆ, ಉದ್ಯೋಗ ಸೃಷ್ಟಿಸುವವರಾಗಬೇಕು. ಸ್ವ-ಉದ್ಯಮ, ಹೊಸ ಆಲೋಚನೆಗಳು ಮತ್ತು ಆತ್ಮವಿಶ್ವಾಸದ ಮೂಲಕ ರಾಷ್ಟ್ರದ ಬೆಳವಣಿಗೆಗೆ ಸಹಕಾರ ನೀಡಬೇಕು. ಜ್ಞಾನದ ಜೊತೆಗೆ ಮೌಲ್ಯಗಳನ್ನೂ ಹೊಂದಬೇಕೆಂದು ಯುವಕರಿಗೆ ಸಲಹೆ ನೀಡಿದರು.

ಹೂವಿನಹಡಗಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಭೀಮಪ್ಪ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲೇ ಉಳಿತಾಯದ ಮಹತ್ವವನ್ನು ಕಲಿಯಬೇಕು. ಚಿಕ್ಕ ಮೊತ್ತವಾದರೂ ನಿಯಮಿತವಾಗಿ ಉಳಿಸುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಯುವಕರು ದುಂದುವೆಚ್ಚ ತಪ್ಪಿಸಿ, ಶ್ರಮದ ಮೌಲ್ಯವನ್ನು ಅರಿತು ಉಳಿತಾಯ ಮಾಡಿದರೆ ಭವಿಷ್ಯದಲ್ಲಿ ಸ್ಥಿರ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದರು.

ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಬಸವೇಶ್ವರ ಯುವಕ ಸಂಘದ ಅಧ್ಯಕ್ಷ ಎಚ್.ಎಂ.ಬಸವರಾಜಯ್ಯ ವಹಿಸಿಕೊಂಡಿದ್ದರು.

ಪ್ರಾಚಾರ್ಯ ಡಾ.ಮುತ್ತೇಶ. ಎನ್ಎನ್ ಎಸ್ ಅಧಿಕಾರಿ ಮಂಜುನಾಥ ಮಾಳ್ಗಿ, ಉಪನ್ಯಾಸಕ ಕೊಟ್ರಗೌಡ ಕೆ, ಸಹಾಯಕ ಪ್ರಾಧ್ಯಾಪಕ ಡಾ.ಹರಾಳು ಬುಳ್ಳಪ್ಪ, ಹೆಚ್.ಗುರುಬಸವರಾಜ, ಎ.ಗೀತಾ, ಭವಾನಿ, ನವೀನ್ ಕುಮಾರ್ ಮುಖಂಡರಾದ ನವೀನ, ವಾಸಿಮ, ವೀರಣ್ಣ ಸೇರಿದಂತೆ ಶಿಬಿರರ‍್ಥಿಗಳು ಉಪಸ್ಥಿತರಿದ್ದರು.

ಹೊಂಬಳಗಟ್ಟಿ ಬಯಲು ರಂಗ ಮಂದಿರ ಆವರಣದಲ್ಲಿ ನಡೆದ ಎನ್ ಎಸ್ ಎಸ್ ವಿಶೇಷ ಶಿಬಿರದಲ್ಲಿ‌ ಉಪನ್ಯಾಸಕ ಶಿವಾನಂದ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ