ಎನ್‌ಟಿಪಿಸಿ: 130 ಅಡಿಯಿಂದ ಬಿದ್ದು ಕಾರ್ಮಿಕ ಸಾವು

KannadaprabhaNewsNetwork |  
Published : May 16, 2024, 12:52 AM IST
ಮೃತ ಕಾರ್ಮಿಕ ಕಿಶನಕುಮಾರ ಭಾರದ್ವಾಜ | Kannada Prabha

ಸಾರಾಂಶ

ಕೂಡಗಿ ಎನ್.ಟಿ.ಪಿ.ಸಿ(ಕೂಡಗಿ ಉಷ್ಣ ವಿದ್ಯುತ್ ಸ್ಥಾವರ)ಯಲ್ಲಿ 130 ಅಡಿಯ ಚಿಮಣಿ (ಬೃಹತ್ ಸ್ಥಾವರ) ಮೇಲಿಂದ ಆಯತಪ್ಪಿ ಕೆಳಗೆ ಬಿದ್ದು ಉತ್ತರ ಪ್ರದೇಶ ಮೂಲದ ಕಾರ್ಮಿಕ ಮೃತಪಟ್ಟಿರುವ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ.

ಕನ್ನಡಪ್ರಭ ವಾರ್ತೆ ಕೊಲ್ಹಾರ

ಕೂಡಗಿ ಎನ್.ಟಿ.ಪಿ.ಸಿ(ಕೂಡಗಿ ಉಷ್ಣ ವಿದ್ಯುತ್ ಸ್ಥಾವರ)ಯಲ್ಲಿ 130 ಅಡಿಯ ಚಿಮಣಿ (ಬೃಹತ್ ಸ್ಥಾವರ) ಮೇಲಿಂದ ಆಯತಪ್ಪಿ ಕೆಳಗೆ ಬಿದ್ದು ಉತ್ತರ ಪ್ರದೇಶ ಮೂಲದ ಕಾರ್ಮಿಕ ಮೃತಪಟ್ಟಿರುವ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ.

ಉತ್ತರ ಪ್ರದೇಶದ ಗಾಜಿಪುರದ ಕಿಶನಕುಮಾರ ಭಾರದ್ವಾಜ್ (33) ಮೃತಪಟ್ಟ ಕಾರ್ಮಿಕ. ಇಂಡಿಯನ್ ಬ್ಯಾಗ್ ಪ್ರೈ.ಲಿ. ಮೂಲಕ ಕಿಶನಕುಮಾರ ತಾಲೂಕಿನ ಕೂಡಗಿ ಎನ್.ಟಿ.ಪಿ.ಸಿ ಘಟಕದಲ್ಲಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದ. ಮಂಗಳವಾರ ಸಂಜೆ 130 ಅಡಿ ಎತ್ತರದ ಚಿಮಣಿ ಮೇಲೆ ನಿಂತು ಕೇಬಲ್‌ ಅಳವಡಿಸುವ ಕಾರ್ಯದಲ್ಲಿ ತೊಡಗಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ.

ಕಾರ್ಮಿಕರ ಪ್ರತಿಭಟನೆ, ಪರಿಹಾರಕ್ಕೆ ಒತ್ತಾಯ:

ಘಟನೆ ಸಂಭವಿಸಿದ ಬಳಿಕ ಕೂಡಗಿ ಎನ್.ಟಿ.ಪಿ.ಸಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು, ಅಪಾಯಕಾರಿ ಕೆಲಸದಲ್ಲಿ ತೊಡಗುವ ಕಾರ್ಮಿಕರಿಗೆ ಯಾವುದೇ ಸೂಕ್ತ ರಕ್ಷಣೆ ಇಲ್ಲ. ರಕ್ಷಣಾತ್ಮಕ ಪರಿಕರಗಳು ಇಲ್ಲದೇ ಕೆಲಸ ಮಾಡುವ ಕಾರ್ಮಿಕರು ಈ ರೀತಿ ದುರಂತಕ್ಕೀಡಾಗಿ ಸಾವನ್ನಪ್ಪುತ್ತಿದ್ದಾರೆ. ಘಟಕದಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರಿಗೆ ಕೆಲಸ ಮಾಡುವ ಸಂದರ್ಭದಲ್ಲಿ ಸುಧಾರಿತ ರಕ್ಷಣಾತ್ಮಕ ಪರಿಕರಗಳನ್ನು ಒದಗಿಸಬೇಕು. ಮೃತ ಕಿಶನಕುಮಾರ ಕುಟುಂಬಕ್ಕೆ ತಕ್ಷಣ ಪರಿಹಾರ ನೀಡಬೇಕು ಎಂದು ಆಕ್ರೋಶಗೊಂಡು ಕಾರ್ಮಿಕರು ಕೂಡಗಿ ಉಷ್ಣ ವಿದ್ಯುತ್ ಸ್ಥಾವರದ ಎದುರು ಪ್ರತಿಭಟನೆ ನಡೆಸಿದರು. ಈ ಸಂಬಂಧ ಕೂಡಗಿ ಎನ್.ಟಿ.ಪಿ.ಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜವಾಬ್ದಾರಿ ವಹಿಸಿದ ಅಧಿಕಾರಿಗಳು:

ವಿದ್ಯುತ್ ಸ್ಥಾವರದಲ್ಲಿ ಕಾರ್ಮಿಕ ಮೃತಪಟ್ಟಿದ್ದರೂ ಎನ್‌ಟಿಪಿಸಿ ಅಧಿಕಾರಿಗಳು ಮಾತ್ರ ಒಬ್ಬಮೇಲೋಬ್ಬರು ಹಾಕುತ್ತ ಕಾಲ ದೂಡಿದ್ದಾರೆ. ಅಲ್ಲದೇ ಮೃತ ಕಾರ್ಮಿಕನ ಕುಟುಂಬಕ್ಕೆ ನಮ್ಮಿಂದ ಪರಿಹಾರ ಕೊಡಲು ಅವಕಾಶವಿಲ್ಲ. ಆತನನ್ನು ತಂದು ಗುತ್ತಿಗೆ ಆಧಾರದ ಮೇಲೆ ಕೆಲಸಕ್ಕೆ ನೇಮಿಸಿದ್ದ ಇಂಡಿಯನ್ ಬ್ಯಾಗ್ ಪ್ರೈವೇಟ್ ಲಿಮಿಟೆಡ್ ಎಂಬ ಏಜನ್ಸಿಯೇ ಪರಿಹಾರ ಒದಗಿಸಲಿದೆ ಎಂದು ಹೇಳಿಕೆ ನೀಡಿದ್ದಾರೆ.

ಕಾರ್ಮಿಕ ಮೃತಪಟ್ಟ ಬಳಿಕ ಎನ್‌ಟಿಪಿಸಿ ಹಾಗೂ ಏಜನ್ಸಿ ವಿರುದ್ಧ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿರುವ ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಕೂಡಗಿ ಎನ್‌ಟಿಪಿಸಿ ಠಾಣೆಯ ಪಿಎಸ್‌ಐ ಯತೀಶ ಕೆ.ಎನ್. ಹಾಗೂ ನಿಡಗುಂದಿ ಸಿಪಿಐ ಶರಣಗೌಡ ಗೌಡರ, ಪೊಲೀಸ್ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು. ಪ್ರತಿಭಟನಾ ನಿರತ ಕಾರ್ಮಿಕರ ಮನವೊಲಿಸಿ ಪ್ರಕರಣ ಮುಚ್ಚಿಹಾಕದಂತೆ ನೋಡಿಕೊಳ್ಳುವ ಭರವಸೆ ನೀಡಿದ ಬಳಿಕ ಕಾರ್ಮಿಕರು ಪ್ರತಿಭಟನೆ ಕೈಬಿಟ್ಟರು.

---

ಕೋಟ್....

ಸುರಕ್ಷತೆಯ ಬಗ್ಗೆ ಭಾಷಣ ಮಾಡುವ ಎನ್‌ಟಿಪಿಸಿ ಅಧಿಕಾರಿಗಳು ಹಾಗೂ ಗುತ್ತಿಗೆ ಏಜನ್ಸಿಗಳು ಕಾರ್ಮಿಕರ ಹಿತ ಕಾಯುವಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ. ಕಾರ್ಮಿಕರ ಜೀವಕ್ಕೆ ಇಲ್ಲಿ ಬೆಲೆಯೇ ಇಲ್ಲದಂತಾಗಿದೆ. ಆಗಾಗ ಇಂತಹ ಘಟನೆಗಳು ನಡೆಯುತ್ತಲೇ ಇವೆ. ಕಾರ್ಮಿಕರು ಸತ್ತಾಗಲೊಮ್ಮೆ ಹೋರಾಟ ಮಾಡಿದಾಗ ಮಾತ್ರ ಪರಿಹಾರ ಸಿಗುತ್ತದೆ. ಈಗಲೂ ಈ ಕಾರ್ಮಿಕನಿಗೆ ಸಮಪರ್ಕ ಒದಗಿಸಬೇಕಿದೆ, ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು.

-ಆರಿಫ್ ತಾಳಿಕೋಟಿ, ಸಂಘಟನಾ ಕಾರ್ಯದರ್ಶಿ, ಎನ್‌ಟಿಪಿಸಿ ಗುತ್ತಿಗೆ ಕಾರ್ಮಿಕರ ಸಂಘ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರ ಕ್ಷೇತ್ರಕ್ಕೆ ಆರ್ಥಿಕ ಶಿಸ್ತು ಅಗತ್ಯ
ಅಧಿಕಾರಿಗಳು ಜಾತ್ಯತೀತವಾಗಿ ಕೆಲಸ ಮಾಡಿ : ಸಿಎಂ ಸಿದ್ದರಾಮಯ್ಯ