ಕನ್ನಡಪ್ರಭ ವಾರ್ತೆ ವಿಜಯಪುರ:ಮಾತೃ ಸಮಾನರಾದ ನರ್ಸ್ಗಳ ಸೇವೆ ನಿಜಕ್ಕೂ ಅನನ್ಯವಾದದ್ದು. ನರ್ಸ್ಗಳು ಎಂದರೆ ಎರಡನೇ ತಾಯಿ ಇದ್ದಂತೆ ಎಂದು ಆಕ್ಸಫರ್ಡ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.
ಕನ್ನಡಪ್ರಭ ವಾರ್ತೆ ವಿಜಯಪುರ:ಮಾತೃ ಸಮಾನರಾದ ನರ್ಸ್ಗಳ ಸೇವೆ ನಿಜಕ್ಕೂ ಅನನ್ಯವಾದದ್ದು. ನರ್ಸ್ಗಳು ಎಂದರೆ ಎರಡನೇ ತಾಯಿ ಇದ್ದಂತೆ ಎಂದು ಆಕ್ಸಫರ್ಡ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.
ನಗರದ ಮಾತೋಶ್ರೀ ಗೌರಮ್ಮ ಅಪ್ಪಾಸಾಹೇಬ ಬಬಲೇಶ್ವರ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಎಕ್ಸಲೆಂಟ್ ಕಾಲೇಜ್ ಆಫ್ ನರ್ಸಿಂಗ್ ಮಹಾವಿದ್ಯಾಲಯದಲ್ಲಿ ನಡೆದ ಅಂತಾರಾಷ್ಟ್ರೀಯ ಶೂಶ್ರುಷ ದಿನಾಚರಣೆ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ವಿಶ್ವದ ಶ್ರೇಷ್ಠ ನರ್ಸ್ ಆಗಿ ಸೇವೆ ಸಲ್ಲಿಸಿದ್ದ ಫ್ಲೋರೆನ್ಸ್ ನೈಟಿಂಗೆಲ್ ಹುಟ್ಟಿದ ದಿನವನ್ನು ಅಂತಾರಾಷ್ಟ್ರೀಯ ಶೂಶ್ರುಷ ದಿನವನ್ನಾಗಿ ಆಚರಿಸಲಾಗುತ್ತಿದೆ. ಶ್ರೀಮಂತ ಮನೆತನದಲ್ಲಿ ಹುಟ್ಟಿದರು ಈ ವೃತ್ತಿಯನ್ನು ಆಯ್ಕೆ ಮಾಡಿಕೊಂಡ ನೈಟಿಂಗೇಲ್ ಳ ತ್ಯಾಗ, ಸೇವೆ ಜಗತ್ತಿನಾದ್ಯಂತ ಇವತ್ತಿಗೂ ಸ್ಮರಣೀಯವಾಗಿದೆ. ಎಕ್ಸಲೆಂಟ್ ಕಾಲೇಜ್ ಆಫ್ ನರ್ಸಿಂಗ್ ಮಹಾವಿದ್ಯಾಲಯದಲ್ಲಿ ಓದುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಅವರ ಬದುಕು ಒಂದು ಪ್ರೇರಣೆಯಾಗಲಿ ಎಂದು ಕಿವಿಮಾತು ಹೇಳಿದರು.
ಅತಿಥಿಗಳಾಗಿ ಅಖಿಲಾ ಬಿರಾದಾರ, ಅಂಜುಮ್ ಹತ್ತಿರಕಿಹಾಳ, ಆಕಾಶ ಮಲನೂರ, ರಾಜು ತಿಡುಗುಂದಿ ಆಗಮಿಸಿದ್ದರು. ಅಶ್ವಿನಿ ಸಾಲ್ಗಾರ, ಸಮತಾ ಸಿಂಗಾಡಿ, ಪಂಕಜ ಪವಾರ, ಮಲ್ಲಿಕಾರ್ಜುನ್.ಎಸ್.ಕೆ ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಸಂಸ್ಥೆಯ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.