ಲೊಂಬಾರ್ಡ್ ಆಸ್ಪತ್ರೆಯಲ್ಲಿ ನರ್ಸಿಂಗ್ ದಿನಾಚರಣೆ

KannadaprabhaNewsNetwork |  
Published : Jun 04, 2026, 02:30 AM IST
03ಡೇ | Kannada Prabha

ಸಾರಾಂಶ

ಉಡುಪಿ: ಇಲ್ಲಿನ ಸಿಎಸ್‌ಐ ಲೊಂಬಾರ್ಡ್ ಮೆಮೋರಿಯಲ್ ಆಸ್ಪತ್ರೆಯಲ್ಲಿ ವಿಶ್ವ ದಾದಿಯರ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಯಿತು. ಅಧ್ಯಕ್ಷತೆ ವಹಿಸಿದ್ದ ಆಸ್ಪತ್ರೆ ನಿರ್ದೇಶಕ ಡಾ. ಸುಶೀಲ್ ಜತ್ತನ್ನ ಕಾರ್ಯಕ್ರಮ ಉದ್ಘಾಟಿಸಿ, ಶುಭ ಹಾರೈಸಿದರು.

ಉಡುಪಿ: ಇಲ್ಲಿನ ಸಿಎಸ್‌ಐ ಲೊಂಬಾರ್ಡ್ ಮೆಮೋರಿಯಲ್ ಆಸ್ಪತ್ರೆಯಲ್ಲಿ ವಿಶ್ವ ದಾದಿಯರ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಯಿತು. ಅಧ್ಯಕ್ಷತೆ ವಹಿಸಿದ್ದ ಆಸ್ಪತ್ರೆ ನಿರ್ದೇಶಕ ಡಾ. ಸುಶೀಲ್ ಜತ್ತನ್ನ ಕಾರ್ಯಕ್ರಮ ಉದ್ಘಾಟಿಸಿ, ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಬಡಗುಬೆಟ್ಟು ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ ಮಾತನಾಡಿ, ಸಮಾಜದಲ್ಲಿ ದಾದಿಯರ ಸೇವೆಯ ಮಹತ್ವವನ್ನು ಕೊಂಡಾಡಿದರು. ಜಯಂಟ್ಸ್ ಬ್ರಹ್ಮಾವರದ ಅಧ್ಯಕ್ಷ ಅಣ್ಣಯ್ಯ ದಾಸ್, ಮುಖ್ಯ ಅತಿಥಿಗಳಾದ ಉದ್ಯಮಿ ಮಧುಸೂಧನ್ ಹೇರೂರು, ಸಿಎಸ್ಐ ಆಡಳಿತಾಧಿಕಾರಿ ದಿನಾ ಪ್ರಭಾವತಿ, ಸಿಎಸ್‌ಐ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಚಾಪ್ಲಿನ್ ರೆ. ರೈಚಲ್ ಡಿಸಿಲ್ವಾ, ಉಪ ಪ್ರಾಂಶುಪಾಲ ಬಿಜು ಸೋಮನ್ ಉಪಸ್ಥಿತರಿದ್ದರು.

ಈ ಸಂದರ್ಭ ಹಿರಿಯ ದಾದಿಯರಾದ ವಸಂತಿ ಶೆಟ್ಟಿ, ದೊರ್ಕ ಪ್ರೇಮಲತಾ ಶೀಲಪ್ಪ, ಶಕುಂತಲಾ ಶೆಣೈ, ಚಂದ್ರಕಲಾ ಬೈಲೂರು, ಫ್ಲೋರ ಸಾಂತು, ಸುನೀತ ಅಮೀನ್ ಅವರನ್ನು ಗೌರವಿಸಲಾಯಿತು. ವಸಂತಿ ಶೆಟ್ಟಿ ತಮ್ಮ ಸೇವಾ ಅನುಭವಗಳನ್ನು ಹಂಚಿಕೊಂಡು ದಾದಿಯರ ಸೇವೆಯ ಮಹತ್ವವನ್ನು ವಿವರಿಸಿದರು.

ಜಯಂಟ್ಸ್ ಬ್ರಹ್ಮಾವರದ ಸದಸ್ಯರಾದ ಸುಧಾಕರ್ ನಾಯ್ಕ್, ವಿವೇಕಾನಂದ ಕಾಮತ್, ಮಿಲ್ಟನ್ ಒಲಿವೆರಾ, ಸುಂದರ್ ಪೂಜಾರಿ ಮೂಡುಕುಕ್ಕಡೆ, ಸುನಿತಾ ಮಧುಸೂಧನ್ ಹಾಗೂ ವೈದಕೀಯ ಪ್ರತಿನಿಧಿಗಳ ಸಂಘದ ಕಾರ್ಯದರ್ಶಿ ಪ್ರಸನ್ನ ಕಾರಂತ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಲಂಪಿಯಡ್ ಪರೀಕ್ಷೆ ರ್‍ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್
ಜಿಲ್ಲಾ ವೀರಶೈವ ಜಂಗಮ ಅರ್ಚಕ, ಪುರೋಹಿತರ ಸಂಘದ ವಾರ್ಷಿಕ ಮಹಾಸಭೆ