ಮಕ್ಕಳ ಆರೈಕೆಗಾಗಿ ಕೂಸಿನ ಮನೆ

KannadaprabhaNewsNetwork |  
Published : Jan 29, 2024, 01:33 AM IST
ಚಿತ್ರದುರ್ಗ ಎರಡನೇ ಪುಟದ ಟಿಂಟ್  ಬಾಟಂ  | Kannada Prabha

ಸಾರಾಂಶ

ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸುವ ಗ್ರಾಮೀಣ ಪ್ರದೇಶದ ಮಹಿಳೆಯರ 3 ವರ್ಷದೊಳಗಿನ ಮಕ್ಕಳ ಆರೈಕೆಗಾಗಿ ತಾಲೂಕಿನ ಗೊಡಬನಹಾಳ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಪಂಡರಹಳ್ಳಿ ಗ್ರಾಮದಲ್ಲಿ ಸಿದ್ಧಗೊಳಿಸಲಾದ ಕೂಸಿನ ಮನೆ ಉದ್ಘಾಟನೆ ಮಾಡಲಾಯಿತು.

ಚಿತ್ರದುರ್ಗ: ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸುವ ಗ್ರಾಮೀಣ ಪ್ರದೇಶದ ಮಹಿಳೆಯರ 3 ವರ್ಷದೊಳಗಿನ ಮಕ್ಕಳ ಆರೈಕೆಗಾಗಿ ತಾಲೂಕಿನ ಗೊಡಬನಹಾಳ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಪಂಡರಹಳ್ಳಿ ಗ್ರಾಮದಲ್ಲಿ ಸಿದ್ಧಗೊಳಿಸಲಾದ ಕೂಸಿನ ಮನೆಗೆ ಶಾಸಕ ವೀರೇಂದ್ರ ಪಪ್ಪಿ 2 ವರ್ಷದ ಮಗುವಿಗೆ ಪೌಷ್ಟಿಕ ಹಾಲು ನೀಡುವ ಮೂಲಕ ಚಾಲನೆ ನೀಡಿದರು.

ಸರ್ಕಾರವು ಬಹುತೇಕ ಮಹಿಳೆಯರ ಅದರಲ್ಲೂ ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ಒತ್ತುಕೊಟ್ಟು ಯೋಜನೆಗಳನ್ನು ರೂಪಿಸುತ್ತಿದೆ. 6 ವರ್ಷದೊಳಗಿನ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಿ ಆರೈಕೆ ಮಾಡಿದಲ್ಲಿ, ಸದೃಢ ಸಮಾಜ ನಿರ್ಮಾಣ ಮಾಡಬಹುದು ಎನ್ನುವುದೆ ಸರ್ಕಾರದ ಆಶಯವಾಗಿದೆ. ಗ್ರಾಮೀಣ ಭಾಗದ ಮಹಿಳೆಯರಿಗೆ ನರೇಗಾದಡಿ ಕೆಲಸ ಕೊಟ್ಟು ಕುಟುಂಬದ ಆರ್ಥಿಕತೆ ಸರಿದೂಗಿಸುವ ಮತ್ತು ಕೆಲಸದ ಸಮಯದಲ್ಲಿ ಅವರ 3 ವರ್ಷದ ಒಳಗಿನ ಮಕ್ಕಳ ಆರೈಕೆಗೂ ಸನ್ನದ್ಧವಾಗಿದೆ. ಸಂಬಂಧಿಸಿದ ಆರೈಕೆದಾರರು ಮತ್ತು ಅಧಿಕಾರಿಗಳಿಗೆ ಸಣ್ಣ ಮಕ್ಕಳ ಆರೈಕೆ ದೊಡ್ಡ ಜವಾಬ್ದಾರಿ ಆಗಿದ್ದು, ಎಚ್ಚರ ವಹಿಸುವಂತೆ ಸೂಚಿಸಿದರು.

ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಹನುಮಂತಪ್ಪ ಮಾಹಿತಿ ನೀಡಿ, ರಾಜ್ಯ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಒತ್ತುಕೊಡುವ ಹಲವು ಯೋಜನೆಗಳಲ್ಲಿ ಕೂಸಿನ ಮನೆಯೂ ಒಂದಾಗಿದೆ. ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸುವ ಗ್ರಾಮೀಣ ಭಾಗದ ಮಹಿಳೆಯರ 3 ವರ್ಷದೊಳಗಿನ ಮಕ್ಕಳ ಆರೈಕೆಗಾಗಿ ಗ್ರಾಮ ಪಂಚಾಯತಿ ವ್ಯಾಪ್ತಿಗಳಲ್ಲಿ ಕೂಸಿನ ಮನೆ ಅನುಷ್ಠಾನಗೊಳಿಸಲಾಗುತ್ತಿದೆ. ಸದ್ಯ ತಾಲೂಕಿನಲ್ಲಿ 26 ಕೂಸಿನ ಮನೆಗಳ ನಿರ್ಮಾಣದ ಗುರಿ ಇದ್ದು, ಭರದಿಂದ ಸಿದ್ಧಗೊಳ್ಳುತ್ತಿವೆ. ಇಂತಹ ಕೂಸಿನ ಮನೆಗಳ ನಿರ್ವಹಿಸಲು ರೊಟೇಷನ್ ಆಧಾರದ ಮೇಲೆ 8 ಆರೈಕೆದಾರರನ್ನು ಗುರುತಿಸಿ ಸದ್ಯ 5 ಜನರಿಗೆ 7 ದಿನ ಮಕ್ಕಳ ನಿರ್ವಹಣೆ ಬಗ್ಗೆ ಪಂಚಾಯತ್ ರಾಜ್ ಮತ್ತು ಎಸ್ಐಆರ್‌ಡಿ ಸಂಸ್ಥೆಯ ನುರಿತವರಿಂದ ವೈಜ್ಞಾನಿಕವಾಗಿ ತರಬೇತಿ ನೀಡಲಾಗಿದೆ ಎಂದರು.

ಗ್ರಾಮ ಪಂಚಾಯತಿ ಅಧ್ಯಕ್ಷೆ ಮಧು ರಮೇಶ್, ಸಹಾಯಕ ನಿರ್ದೇಶಕ ಎರ್ರಿಸ್ವಾಮಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಂಜುಳ, ಐಇಸಿ ಸತ್ಯನಾರಾಯಣ, ಪಿಡಿಒ ಭವಾನಿ, ಗ್ರಾಪಂ ಸಿಬ್ಬಂದಿ, ಅಂಗವಾಡಿ ಕಾರ್ಯಕರ್ತರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಕನಿಷ್ಠ ಆದಾಯ ಮಿತಿ 3 ಲಕ್ಷ ರು.ಗೆ ಏರಿಕೆ: ಮುನಿಯಪ್ಪ
ಏ.1ರಿಂದ ರಾಜ್ಯದ ರಾಷ್ಟ್ರೀಯ ಹೆದ್ದಾರಿ ಟೋಲ್‌ ಶುಲ್ಕ ಹೆಚ್ಚಳ