ಉತ್ತಮ ಆರೋಗ್ಯ ವೃದ್ಧಿಗೆ ಪರಿಸರವನ್ನು ಪೋಷಿಸಿ: ಬಿ.ಪಿ.ಗೀತಾ

KannadaprabhaNewsNetwork | Published : Jun 6, 2025 1:03 AM
ಪ್ಲಾಸ್ಟಿಕ್ ಮಾಲಿನ್ಯ ತಡೆಗಟ್ಟುವ ಸಂಕಲ್ಪದೊಂದಿಗೆ ವಿಶ್ವ ಪರಿಸರ ದಿನದ ಅಂಗವಾಗಿ ವಿಶ್ವ ಸಂಸ್ಥೆಯ ಪ್ಲಾಸ್ಟಿಕ್ ಮಾಲಿನ್ಯ ತಡೆಗಟ್ಟಿ ಎಂಬ ಘೋಷವಾಕ್ಯದಡಿ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ ಆಯೋಜಿಸಿದ್ದು, ಪರಿಸರಕ್ಕೆ ಪೂರಕ ವಸ್ತುಗಳು ಹಾಗೂ ಜಲಮೂಲಗಳನ್ನು ಸಂರಕ್ಷಣೆ ಜೊತೆಗೆ ಪ್ಲಾಸ್ಟಿಕ್ ನಿಂದ ಮನುಷ್ಯನಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ಪ್ಲಾಸ್ಟಿಕ್ ನಿರ್ಮೂಲನೆ ಮಾಡಲು ಪಣ ತೊಡಬೇಕಾಗಿದೆ ಎಂದು ಹೇಳಿದರು.

ಕನ್ನಡಪ್ರಭವ ವಾರ್ತೆ ಮಂಡ್ಯ

ಪ್ರತಿಯೊಬ್ಬರೂ ಉತ್ತಮ ಆರೋಗ್ಯಕ್ಕಾಗಿ ಪರಿಸರವನ್ನು ಉಳಿಸಿ ಪೋಷಿಸಬೇಕು ಎಂದು ಜಿಲ್ಲಾ ಪರಿಸರ ಅಧಿಕಾರಿ ಬಿ.ಪಿ.ಗೀತಾ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದ ಕಾವೇರಿ ವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರಾದೇಶಿಕ ಕಚೇರಿ, ಪರಿಸರ ರೂರಲ್ ಡೆವಲಪ್‌ಮೆಂಟ್ ಸೊಸೈಟಿ ಮಂಗಲ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಡೆದ ಚಿತ್ರಕಲಾ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದರು.

ಪ್ಲಾಸ್ಟಿಕ್ ಮಾಲಿನ್ಯ ತಡೆಗಟ್ಟುವ ಸಂಕಲ್ಪದೊಂದಿಗೆ ವಿಶ್ವ ಪರಿಸರ ದಿನದ ಅಂಗವಾಗಿ ವಿಶ್ವ ಸಂಸ್ಥೆಯ ಪ್ಲಾಸ್ಟಿಕ್ ಮಾಲಿನ್ಯ ತಡೆಗಟ್ಟಿ ಎಂಬ ಘೋಷವಾಕ್ಯದಡಿ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ ಆಯೋಜಿಸಿದ್ದು, ಪರಿಸರಕ್ಕೆ ಪೂರಕ ವಸ್ತುಗಳು ಹಾಗೂ ಜಲಮೂಲಗಳನ್ನು ಸಂರಕ್ಷಣೆ ಜೊತೆಗೆ ಪ್ಲಾಸ್ಟಿಕ್ ನಿಂದ ಮನುಷ್ಯನಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ಪ್ಲಾಸ್ಟಿಕ್ ನಿರ್ಮೂಲನೆ ಮಾಡಲು ಪಣ ತೊಡಬೇಕಾಗಿದೆ ಎಂದು ಹೇಳಿದರು.

ಪರಿಸರ ರೂರಲ್ ಡೆವಲಪ್ ಮೆಂಟ್ ಸೊಸೈಟಿ ಅಧ್ಯಕ್ಷ ಮಂಗಲ ಎಂ.ಯೋಗೀಶ್ ಮಾತನಾಡಿ, ಪರಿಸರದ ರಕ್ಷಣೆ ಉದ್ದೇಶದಿಂದ ಏಕ ಬಳಕೆಯ ಪ್ಲಾಸ್ಟಿಕ್ ಅನ್ನು ಸಾರ್ವಜನಿಕರು ನಿಲ್ಲಿಸಿ ಪರಿಸರ ಸಂರಕ್ಷಣೆಗೆ ಸಹಕಾರ ನೀಡಬೇಕು ಎಂದು ಹೇಳಿದರು.

ಪ್ರತಿವರ್ಷ ವಿಶ್ವದಾದ್ಯಂತ 400 ಮಿಲಿಯನ್ ಟನ್ ನಷ್ಟು ಪ್ಲಾಸ್ಟಿಕ್ ಉತ್ಪಾದನೆಯಾಗುತ್ತಿದೆ. ಪ್ಲಾಸ್ಟಿಕ್ ವಸ್ತುಗಳು ಭೂಮಿಯಲ್ಲಿ ಕರಗದೆ ಸಾವಿರಾರು ವರ್ಷ ಹಾಗೇ ಉಳಿಯುತ್ತವೆ. ಇದು ಮಣ್ಣಿನ ಆರೋಗ್ಯ ಮತ್ತು ಪರಿಸರವನ್ನು ಹಾಳು ಮಾಡುತ್ತದೆ. ಜಲ ಮೂಲವನ್ನು ಮಾಲಿನ್ಯಗೊಳಿಸುತ್ತದೆ. ಇದನ್ನು ಅರಿತು ಜನರು ಪಾಸ್ಟಿಕ್ ಬಳಕೆ ತ್ಯಜಿಸಬೇಕು ಎಂದು ತಿಳಿಸಿದರು.

ಇದೇ ವೇಳೆ ವಿದ್ಯಾರ್ಥಿಗಳಿಗೆ ಪ್ಲಾಸ್ಟಿಕ್ ಮಾಲಿನ್ಯ ತಡೆಗಟ್ಟುವ ಕುರಿತು ಚಿಕ್ಕ ಮಂಡ್ಯ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ದೇವರಾಜು ಪ್ರತಿಜ್ಞಾವಿಧಿ ಭೋದಿಸಿದರು.