ಯಕ್ಷಗಾನದ ಪೋಷಣೆ ಎಲ್ಲರ ಹೊಣೆ: ಶ್ರೀ ವೇದವರ್ಧನ ತೀರ್ಥರು

KannadaprabhaNewsNetwork |  
Published : Jul 15, 2026, 02:45 AM IST
ಶ್ರೀ ಮಿತ್ರ ಯಕ್ಷಗಾನ ಮಂಡಳಿಯ ಪ್ರಶಸ್ತಿ ಪ್ರದಾನ ರಾಜಾಂಗಣದಲ್ಲಿ ನಡೆಯಿತು | Kannada Prabha

ಸಾರಾಂಶ

ಯಕ್ಷಗಾನ ಕಲೆ ಕೇವಲ ಮನೋರಂಜನೆಗೆ ಮಾತ್ರವಲ್ಲ, ಅದರಲ್ಲಿ ಜೀವನ ಪಾಠವಿದೆ. ಹೀಗಾಗಿ ಕಲೆಯ ಪೋಷಣೆ ನಮ್ಮೆಲ್ಲರ ಕರ್ತವ್ಯವಾಗಬೇಕು ಎಂದು ಪರ್ಯಾಯ ಶಿರೂರು ಮಠಾಧೀಶ ಶ್ರೀ ವೇದವರ್ಧನ ತೀರ್ಥರು ಹೇಳಿದರು.

ಉಡುಪಿ: ಯಕ್ಷಗಾನ ಕಲೆ ಕೇವಲ ಮನೋರಂಜನೆಗೆ ಮಾತ್ರವಲ್ಲ, ಅದರಲ್ಲಿ ಜೀವನ ಪಾಠವಿದೆ. ಹೀಗಾಗಿ ಕಲೆಯ ಪೋಷಣೆ ನಮ್ಮೆಲ್ಲರ ಕರ್ತವ್ಯವಾಗಬೇಕು ಎಂದು ಪರ್ಯಾಯ ಶಿರೂರು ಮಠಾಧೀಶ ಶ್ರೀ ವೇದವರ್ಧನ ತೀರ್ಥರು ಹೇಳಿದರು.ಅವರು ಮಂಗಳವಾರ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶಿರೂರು ಮಠದ ಆಶ್ರಯದಲ್ಲಿ ತಲ್ಲೂರು ಫ್ಯಾಮಿಲಿ ಟ್ರಸ್ಟ್ ಹಾಗೂ ರಸಿಕರತ್ನ ವಿಟ್ಲ ಜೋಶಿ ಪ್ರತಿಷ್ಠಾನಗಳ ಸಹಕಾರದಲ್ಲಿ ಮಣಿಪಾಲ ಸರಳೆಬೆಟ್ಟು ಪರ್ಕಳ ಶ್ರೀ ಮಿತ್ರ ಯಕ್ಷಗಾನ ಮಂಡಳಿ 44ನೇ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ಕಲೆಯ ಸಾಧಕರನ್ನು ಗುರುತಿಸಿ ಸನ್ಮಾನ ಮಾಡಬೇಕು. ಇದು ಅನ್ಯರಿಗೆ ಕಲೆಯಲ್ಲಿ ತೊಡಗಲು ಪ್ರೇರಣೆಯಾಗುತ್ತದೆ. ಕಲೆಯ ರಕ್ಷಣೆಯ ಜೊತೆಗೆ ಕಲಾವಿದರ ಬೆಳವಣಿಗೆಗೂ ಕೊಡುಗೆ ನೀಡುತ್ತಿರುವ ಶ್ರೀ ಮಿತ್ರ ಯಕ್ಷಗಾನ ಮಂಡಳಿ ಅಭಿನಂದನಾರ್ಹ ಎಂದು ಶ್ರೀಗಳು ತಿಳಿಸಿದರು. ಅಧ್ಯಕ್ಷತೆಯನ್ನು ವಹಿಸಿದ್ದ ರಾಜ್ಯ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ, ಯಕ್ಷಗಾನ ಕಲೆ ಇಂದು ವಿಶ್ವ ವ್ಯಾಪಿಯಾಗಲು ನಿಸ್ವಾರ್ಥ ಯಕ್ಷಗಾನ ಕಲಾ ಪ್ರೇಮಿಗಳ ಸಹಕಾರವೇ ಕಾರಣವಾಗಿದೆ. ವೈದ್ಯರು, ಶಿಕ್ಷಕರು, ಇಂಜಿನಿಯರ್ ಗಳು ಸೇರಿದಂತೆ ಸುಶಿಕ್ಷಿತ ಮಂದಿ ಯಕ್ಷಗಾನ ಕಲಿತು ಈ ಕಲೆಯ ಗೌರವವನ್ನು ಹೆಚ್ಚಿಸಿದ್ದಾರೆ ಎಂದರು. ಇದೇ ಸಂದರ್ಭದಲ್ಲಿ ಯಕ್ಷಗಾನ ಮತ್ತು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ 13 ಮಂದಿ ಸಾಧಕರಿಗೆ ವಿವಿಧ ಸ್ಮಾರಕ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.

ಶಿರೂರು ಮಠದ ವ್ಯವಸ್ಥಾಪಕ ವಾಸುದೇವ ಆಚಾರ್ಯ, ಹೆರ್ಗ ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷ ಹೆರ್ಗ ದಿನಕರ ಶೆಟ್ಟಿ, ನಿವೃತ್ತ ಎಜಿಎಂ ಎಸ್. ಅನಂತ ನಾಯ್ಕ್, ಸಂಸ್ಥೆಯ ಅಧ್ಯಕ್ಷ ಎಚ್. ಪ್ರಕಾಶ್ ಶಾನುಭಾಗ್, ಪ್ರಮುಖರಾದ ಸದಾನಂದ ಪ್ರಭು ಪೆರ್ಣಂಕಿಲ, ಶ್ರುತಿ ಶೆಣೈ, ನಾರಾಯಣ ಬಿ.ಕೆ., ಪಾಡಿಗಾರು ಲಕ್ಷ್ಮೀನಾರಾಯಣ ಉಪಾಧ್ಯಾಯ ಮೊದಲಾದವರು ಉಪಸ್ಥಿತರಿದ್ದರು. ಪ್ರೊ.ಎಸ್.ವಿ. ಉದಯ ಕುಮಾರ್ ಶೆಟ್ಟಿ ಅಭಿನಂದನಾ ನುಡಿಗಳನ್ನಾಡಿದರು. ಬಾಲಕೃಷ್ಣ ಪ್ರಭು ಕಾರ್ಯಕ್ರಮ ನಿರೂಪಿಸಿದರು. ಭುವನಪ್ರಸಾದ್ ಹೆಗ್ಡೆ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಶೈಲೇಂದ್ರ ಶೆಟ್ಟಿ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ಸಂಸ್ಥೆಯ ಬಾಲ ಕಲಾವಿದರಿಂದ ಯಕ್ಷಗಾನ ಪ್ರದರ್ಶನ ಕಂಸ ದಿಗ್ವಂಜಯ ಜಯ ಕೃಷ್ಣ ಲೀಲೆ, ಕಂಸವಧೆ ಪ್ರದರ್ಶನಗೊಂಡಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಿರಿಯ ಅರ್ಥಧಾರಿಗಳಿಗೆ ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ
ಯಕ್ಷಗಾನ ಕಲಾರಂಗದ 51ನೇ ವಾರ್ಷಿಕ ಮಹಾಸಭೆ