ಧಾರವಾಡ:
ಪೋಷಣ ಅಭಿಯಾನವು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗದೇ, ಶೇ.100ರಷ್ಟು ಮಕ್ಕಳಿಗೂ ತಾಯಿ ಹಾಲು. ಶೇ.100 ಗರ್ಭಿಣಿಯರಿಗೂ ಪೌಷ್ಟಿಕಾಹಾರ ದೊರಕಬೇಕು ಮತ್ತು ಎಲ್ಲರಲ್ಲಿಯೂ ಇದರ ಮಹತ್ಮದ ಅರಿವು ಮೂಡಿಸಬೇಕು ಎಂದ ಅವರು, ಸಹಜ, ಪ್ರಕೃತಿಯ ಆಹಾರ ಸೇವನೆ ಮಾಡುವುದು ಆರೋಗ್ಯಕ್ಕೆ ಆಧಾರ. ಇಂದಿನ ಮಕ್ಕಳಿಗೆ ಸಿರಿಧಾನ್ಯಗಳ ಮಹತ್ವವೇ ತಿಳಿದಿಲ್ಲ. ಸಿರಿಧಾನ್ಯಗಳಲ್ಲಿ ಇರುವ ಪೌಷ್ಟಿಕಾಂಶ, ಶಕ್ತಿಯುತ ಗುಣಗಳನ್ನು ಅವರಿಗೆ ತಿಳಿಸಿಕೊಡುವುದು ನಮ್ಮ ಜವಾಬ್ದಾರಿ ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ ಎಫ್. ದೊಡ್ಡಮನಿ ಮಾತನಾಡಿ, ಪೋಷಣೆಯ ಕೊರತೆಯಿಂದ ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಕುಂಠಿತವಾಗುತ್ತದೆ. ವಿಶೇಷವಾಗಿ ಗರ್ಭಿಣಿಯರು, ಶಿಶುಗಳು ಹಾಗೂ ಕುಮಾರಾಸ್ಥೆಯಲ್ಲಿರುವ ಮಕ್ಕಳಿಗೆ ಸಮತೋಲನ ಆಹಾರ, ಪೋಷಕಾಂಶಯುತ ಆಹಾರವು ಅವಶ್ಯವಾಗಿದೆ ಎಂದು ಹೇಳಿದರು. ಪ್ರತಿ ಕುಟುಂಬದಲ್ಲಿ ದಿನನಿತ್ಯವೂ ಪೋಷಣದ ಪ್ರಗತಿ ನಡೆಯಬೇಕು. ಹಿರಿಯರೆಲ್ಲರೂ ಆರೋಗ್ಯದಿಂದ ಇದ್ದದ್ದು, ಅವರು ಸೇವಿಸಿದ ಆಹಾರದಿಂದ ಮತ್ತು ಆಹಾರ ಸೇವನೆ ಕ್ರಮ ಸರಳವಾಗಿದ್ದು, ಕಾಲಮಾನಕ್ಕೆ ತಕ್ಕಂತೆ ಆಹಾರ ಸೇವಿಸುತ್ತಿದ್ದರು. ಆದ್ದರಿಂದ ಮಕ್ಕಳಿಗೂ ಸಮಯೋಚಿತ, ಸರಿಯಾದ ಆಹಾರ ಪದ್ಧತಿ ಬೆಳೆಸುವುದು ಅತ್ಯಂತ ಅವಶ್ಯಕ ಎಂದರು.ಇದೇ ವೇಳೆ ಗರ್ಭಿಣಿಯರಿಗೆ ಸೀಮಂತ ಮಾಡಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಡಾ. ಎಚ್.ಎಚ್. ಕುಕನೂರ ಸ್ವಾಗತಿಸಿದರು. ಸುನಿತಾ ನಾಡಿಗೇರ ನಿರೂಪಿಸಿದರು. ಡಾ. ಕಮಲಾ ಬೈಲೂರ, ವಿಜಯಲಕ್ಷ್ಮೀ ಪಾಟೀಲ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಮೇಲ್ವಿಚಾರಕರು, ಸಿಬ್ಬಂದಿ ಹಾಗೂ ಗರ್ಭಿಣಿ ಮಹಿಳೆಯರಿದ್ದರು.