ಕನ್ನಡಪ್ರಭ ವಾರ್ತೆ ಮಂಡ್ಯ
ತಾಲೂಕಿನ ವಿ.ಸಿ.ಫಾರಂನ ಕೃಷಿ ವಿಜ್ಞಾನ ಕೇಂದ್ರದಲ್ಲಿ ಏರ್ಪಡಿಸಿದ್ದ ಸಿರಿಧಾನ್ಯಗಳ ಉತ್ಪಾದನೆ ತಾಂತ್ರಿಕತೆ, ಸಂಸ್ಕರಣೆ ಮತ್ತು ಮೌಲ್ಯ ವರ್ಧನೆ ಕುರಿತ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಸಿರಿಧಾನ್ಯಗಳು ಸಾಂಪ್ರದಾಯಿಕ ಬೆಳೆಗಳಾಗಿದ್ದು ಕಡಿಮೆ ನೀರು, ಕಡಿಮೆ ಖರ್ಚಿನೊಂದಿಗೆ ಖುಷ್ಕಿ ಭೂಮಿಯಲ್ಲಿ ಹೆಚ್ಚಾಗಿ ಬೆಳೆಯಬಹುದು. ಸಿರಿಧಾನ್ಯಗಳು ಆರೋಗ್ಯವರ್ಧಕ, ಹಲವು ಬಗೆಯ ರೋಗ ನಿವಾರಣೆಗೆ ಉಪಯುಕ್ತವಾಗಿವೆ ಎಂದರು. ಕೃಷಿ ವಿವಿಯ ವಿಸ್ತರಣಾ ನಿರ್ದೇಶಕ ಡಾ.ಸಿ.ರಾಮಚಂದ್ರ ಮಾತನಾಡಿ, ಸಿರಿಧಾನ್ಯಗಳನ್ನು ವೈಜ್ಞಾನಿಕವಾಗಿ ಬೆಳೆದು ಉತ್ತಮ ಇಳುವರಿ ಪಡೆದುಕೊಳ್ಳಬೇಕು. ಸಂಸ್ಕರಣೆ ಮತ್ತು ಮೌಲ್ಯವರ್ಧನೆ ಮಾಡಿದರೆ ರೈತರು ಉದ್ದಿಮೆದಾರರಾಗಿ ಉತ್ತಮ ಆರ್ಥಿಕ ಬದುಕನ್ನು ಕಟ್ಟಿಕೊಳ್ಳಬಹುದು ಎಂದರು.ಹೈದರಾಬಾದ್ನ ಭಾರತೀಯ ಸಿರಿಧಾನ್ಯಗಳ ಸಂಶೋಧನೆ ಸಂಸ್ಥೆಯ ಹಿರಿಯ ವಿಜ್ಞಾನಿ ಡಾ.ಸಂಗಪ್ಪ ಮಾತನಾಡಿ, ನಮ್ಮ ಸಂಸ್ಥೆ ಸಿರಿಧಾನ್ಯಗಳಿಗೆ ಸಂಬಂಧಪಟ್ಟಂತೆ ದೇಶಾದ್ಯಂತ ಉತ್ತಮ ಕೆಲಸ ಮಾಡುತ್ತಿದೆ. ನವೀನ ತಂತ್ರಜ್ಞಾನಗಳನ್ನು ರೈತರಿಗೆ ತಲುಪಿಸುತ್ತಾ, ಸಿರಿಧಾನ್ಯಗಳ ಉದ್ದಿಮೆದಾರರನ್ನು ಸೃಷ್ಟಿಸಿ ಆರ್ಥಿಕ ಬದುಕನ್ನು ಉತ್ತಮಗೊಳಿಸುವ ಜೊತೆಗೆ ಸಾವಿರಾರು ಜನರಿಗೆ ಉದ್ಯೋಗವನ್ನು ಕಲ್ಪಿಸಿಕೊಡುವಲ್ಲಿ ಯಶಸ್ವಿಯಾಗಿದೆ ಎಂದರು.
ಈ ವೇಳೆ ಹಿರಿಯ ವಿಜ್ಞಾನಿ ಡಾ.ಕಮಲಬಾಯಿ ಕೂಡಗಿ, ಸಹವಿಸ್ತರಣಾ ನಿರ್ದೇಶಕ ಡಾ.ಎ.ಡಿ.ರಂಗನಾಥ್, ಕಿರಿಯ ಬೇಸಾಯ ಶಾಸ್ತ್ರಜ್ಞ ಡಾ. ಸುನಿಲ್, ಪ್ರಾಧ್ಯಾಪಕರಾದ ಡಾ.ಚಂದ್ರಕಲಾ ಅಣಗಿ, ಡಾ.ಅರುಣ್ ಕುಮಾರ್, ಸ.ಪ್ರಾಧ್ಯಾಪಕರಾದ ಡಾ.ಲಕ್ಷ್ಮಿ ಬಳಗನೂರ ಮಠ, ಡಾ.ಸುರೇಶ್, ಡಾ.ಬಸವಲಿಂಗಯ್ಯ ಮತ್ತಿತರರಿದ್ದರು.