ರಸ್ತೆ ಸುರಕ್ಷತೆ ನಿಮಯಗಳನ್ನು ಕಡ್ಡಾಯವಾಗಿ ಪಾಲಿಸಿ: ನ್ಯಾ.ಆರ್.ಮಹೇಶ್

KannadaprabhaNewsNetwork |  
Published : Jan 14, 2026, 03:15 AM IST
12ಕೆಎಂಎನ್ ಡಿ20 | Kannada Prabha

ಸಾರಾಂಶ

ಪ್ರತಿಯೊಬ್ಬ ಸವಾರರು ವಾಹನ ಚಾಲನೆ ವೇಳೆ ನಿಯಮ ಪಾಲನೆ ಮಾಡಬೇಕು. ಸಂಚಾರಿ ನಿಯಮ ಉಲ್ಲಂಘನೆ ಮಾಡಬಾರದು, ವಿಮೆ, ಎಫ್‌ಸಿ, ವಾಹನ ಚಲಾವಣೆಯ ಪರವಾನಗಿ ಹೊಂದಬೇಕು.

ಪಾಂಡವಪುರ: ವಾಹನ ಚಲಾಯಿಸುವ ಪ್ರತಿಯೊಬ್ಬ ನಾಗರಿಕರೂ ರಸ್ತೆ ಸುರಕ್ಷತೆ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಪಟ್ಟಣದ ಜೆಎಂಎಫ್‌ಸಿ ಹಿರಿಯ ಶ್ರೇಣಿ ನ್ಯಾಯಾಧೀಶ ಆರ್.ಮಹೇಶ್ ತಿಳಿಸಿದರು.

ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಪೊಲೀಸ್ ಇಲಾಖೆ, ಪ್ರಾದೇಶಿಕ ರಸ್ತೆ ಸಾರಿಗೆ ಇಲಾಖೆ ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಸಹಯೋಗದಲ್ಲಿ ನಡೆದ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.

ಪ್ರತಿಯೊಬ್ಬ ಸವಾರರು ವಾಹನ ಚಾಲನೆ ವೇಳೆ ನಿಯಮ ಪಾಲನೆ ಮಾಡಬೇಕು. ಸಂಚಾರಿ ನಿಯಮ ಉಲ್ಲಂಘನೆ ಮಾಡಬಾರದು, ವಿಮೆ, ಎಫ್‌ಸಿ, ವಾಹನ ಚಲಾವಣೆಯ ಪರವಾನಗಿ ಹೊಂದಬೇಕು. ರಸ್ತೆಯ ತಿರುವುಗಳಲ್ಲಿ ಸೂಚನಾ ಫಲಕ ನೋಡಿ ಪಾಲಿಸಬೇಕು. ವಾಹನಗಳ ಸಮಯಕ್ಕೆ ತಕ್ಕಂತೆ ಪರಿಶೀಲನೆ, ಸರ್ವೀಸ್ ಮಾಡಿಸಿಕೊಂಡು ಕ್ರಮಬದ್ಧವಾಗಿ ಇಟ್ಟುಕೊಳ್ಳಬೇಕು ಎಂದು ಸಲಹೆ ನೀಡಿದರು.

ಯುವ ಸಮುದಾಯ ಬೈಕ್‌ನಲ್ಲಿ ತ್ರಿಬಲ್ ರೈಡಿಂಗ್, ಕುಡಿದು, ಡ್ರಗ್ಸ್ ಸೇವನೆ ಮಾಡಿ ವಾಹನ ಚಲಾವಣೆ, ಹೆಲ್ಮೆಟ್ ಹಾಕದೆ ವಾಹನ ಸವಾರಿ ಮಾಡುವರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ, ಪೊಲೀಸ್ ಇಲಾಖೆ ಯಾವುದೇ ಪ್ರಕರಣವನ್ನು ದಾಖಲಿಸಿ ಕೋರ್ಟ್ ಮುಂದೆ ಹಾಜರು ಪಡಿಸಿಲ್ಲ. ಕೂಡಲೇ ಸಂಚಾರಿ ನಿಯಮ ಪಾಲಿಸದವರ ವಿರುದ್ಧ ಕ್ರಮತೆಗೆದುಕೊಳ್ಳುವ ಕೆಲಸ ಮಾಡಬೇಕು ಎಂದು ಸೂಚಿಸಿದರು.

ಈ ವೇಳೆ ನಾಯಾಧೀಶರಾದ ಎನ್.ಬಾಬು, ಬಿ.ಪಾರ್ವತಮ್ಮ, ವಕೀಲ ಸಂಘದ ಅಧ್ಯಕ್ಷ ಗಂಗರಾಜು, ಕಾರ್ಯದರ್ಶಿ ಮೋಹನ್‌ಕುಮಾರ್ ಸೇರಿ ಹಲವು ವಕೀಲರು, ವಿವಿಧ ಇಲಾಖೆ ಅಧಿಕಾರಿಗಳು, ಸಾರ್ವಜನಿಕರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ ರಾಮ್‌ ಜಿ ಕುರಿತು ಇಂದು ರಾಜ್ಯ ವಿಶೇಷ ಸಂಪುಟ ಸಭೆ
ಫೆ.13ಕ್ಕೆ ಕಾಂಗ್ರೆಸ್‌ ಸರ್ಕಾರಕ್ಕೆ 1000 ದಿನ