ಉಡುಪಿ: ಕ್ರಾಂತಿವೀರನಿಗೆ ನುಡಿ ಗೌರವ

KannadaprabhaNewsNetwork |  
Published : Jan 30, 2026, 02:45 AM IST
ಉಡಡುಪಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಸಲಾಯಿತು | Kannada Prabha

ಸಾರಾಂಶ

ನಾಡಿನ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನಗೈದ ಕಿತ್ತೂರಿನ ವೀರ ಸೇನಾನಿ, ಕನ್ನಡಾಂಬೆಯ ಹೆಮ್ಮೆಯ ಪುತ್ರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪುಣ್ಯತಿಥಿಯಂದು ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ದ.ಕ - ಉಡುಪಿ ಜಿಲ್ಲಾ ನೇತೃತ್ವದಲ್ಲಿ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನುಡಿಗೌರವ ಸಲ್ಲಿಸಲಾಯಿತು.

ಉಡುಪಿ: ನಾಡಿನ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನಗೈದ ಕಿತ್ತೂರಿನ ವೀರ ಸೇನಾನಿ, ಕನ್ನಡಾಂಬೆಯ ಹೆಮ್ಮೆಯ ಪುತ್ರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪುಣ್ಯತಿಥಿಯಂದು ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ದ.ಕ - ಉಡುಪಿ ಜಿಲ್ಲಾ ನೇತೃತ್ವದಲ್ಲಿ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನುಡಿಗೌರವ ಸಲ್ಲಿಸಲಾಯಿತು. ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಅಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ಅವರು ರಾಯಣ್ಣರ ಯಶೋಗಾಥೆ ಮತ್ತು ಅಭಿಮಾನಿ ಬಳಗದಿಂದ ನಡೆಯುವ ಹುತಾತ್ಮ ಮಾಲಾ ಅಭಿಯಾನದ ಕುರಿತು ಮಾತನಾಡಿದರು.

ಕಾರಂತ ಟ್ರಸ್ಟ್ ನ ಅಧ್ಯಕ್ಷ ಗಣನಾಥ ಎಕ್ಕಾರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪೂರ್ಣಿಮಾ ಅವರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಭಾವಚಿತ್ರಕ್ಕೆ ಪುಷ್ಪ ಗೌರವ ಸಲ್ಲಿಸಿದರು.ಅಭಿಮಾನಿ ಬಳಗದ ಗೌರವಾಧ್ಯಕ್ಷ ಜನಾರ್ದನ ಕೊಡವೂರು, ಡಯಟ್ ನ ಜಿಲ್ಲಾ ಪ್ರಾಂಶುಪಾಲ ಅಶೋಕ್ ಕಾಮತ್, ಜೇಸಿಐ ರಾಷ್ಟ್ರೀಯ ತರಬೇತಿದಾರ ರಾಜೇಂದ್ರ ಭಟ್ ಕೆ., ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ಅಧ್ಯಕ್ಷ ಉಡುಪಿ ವಿಶ್ವನಾಥ್ ಶೆಣೈ, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್ ಪಿ, ಪೂರ್ಣಿಮಾ ಜನಾರ್ದನ, ವಸಂತ್ ಆರ್, ರಾಜೇಶ್ ಭಟ್ ಪಣಿಯಾಡಿ, ರಾಘವೇಂದ್ರ ಪ್ರಭು ಕರ್ವಾಲು, ಶಿಲ್ಪಾ ಜೋಶಿ, ರಂಜನಿ ವಸಂತ್, ದೀಪಾ ಕರ್ಕಿ, ಪ್ರಶಾಂತ್ ಕಾಮತ್ ಮೊದಲಾದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸ್ತೆಗೆ ಕಾಲಿಟ್ಟಿರೋ ಹುಷಾರ್‌, ಕಚ್ಲಿಕ್ಕೆ ಕಾಯ್ತಿವೆ ಬೀದಿ ನಾಯಿ
ನಗರದಲ್ಲಿ ಡ್ರಗ್ಸ್ ಮಾರಾಟಕ್ಕೆಯತ್ನಿಸಿದ ಮೂವರ ಬಂಧನ