ಕನ್ನಡಪ್ರಭ ವಾರ್ತೆ ಬೆಂಗಳೂರು
ಕಟ್ಟಡ ನಿರ್ಮಿಸಿದವರಿಗೆ ಸ್ವಾಧೀನಾನುಭವ ಪ್ರಮಾಣಪತ್ರ ಇಲ್ಲದೇ ಅಧಿಕೃತ ವಿದ್ಯುತ್ ಸಂಪರ್ಕ ಪಡೆದುಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಆದೇಶ ಹೊರಡಿಸಿದೆ. ವಸತಿ ಕಟ್ಟಡಗಳ ನಿರ್ಮಾಣ ಪೂರ್ಣಗೊಂಡು ವಿದ್ಯುತ್ ಸಂಪರ್ಕಕ್ಕಾಗಿ 2026ರ ಮೇ 31ರ ಒಳಗೆ ಅರ್ಜಿ ಸಲ್ಲಿಸಿದ್ದಲ್ಲಿ ಒಂದು ಬಾರಿ ಸ್ವಾಧೀನಾನುಭವ ಪ್ರಮಾಣಪತ್ರ ಪಡೆಯುವುದರಿಂದ ವಿನಾಯಿತಿ ನೀಡಲಾಗಿದೆ. ಖಚಿತಪಡಿಸಿಕೊಳ್ಳಲು ವಿದ್ಯುತ್ ಸರಬರಾಜು ಕಂಪನಿಗಳು ಸ್ಥಳ ಪರಿಶೀಲನೆ ನಡೆಸಿ ಕಟ್ಟಡದ ಭಾವಚಿತ್ರ ತೆಗೆದುಕೊಂಡು ವಿದ್ಯುತ್ ಸಂಪರ್ಕ ನೀಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ನಗರದಲ್ಲಿ ರಿಯಲ್ ಎಸ್ಟೇಟ್ ದುಬಾರಿಯಾಗಿದೆ. ವಸತಿ ಕಟ್ಟಡಗಳಿಗೆ ಬೇಡಿಕೆ ಹೆಚ್ಚಳವಾಗಿರುವುದರಿಂದ ಕಡಿಮೆ ಜಾಗದಲ್ಲಿ ಹೆಚ್ಚು ಮಹಡಿಗಳನ್ನು ನಿರ್ಮಿಸುತ್ತಿರುವುದರಿಂದ ಜನರ ಅನುಕೂಲಕ್ಕಾಗಿ ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದೆ.