ನಬಾರ್ಡ್ನ ಉಪಮಹಾಪ್ರಬಂಧಕಿ ಮಾಲಿನಿ ಸುವರ್ಣ ಮತ್ತು ಅಧಿಕಾರಿ ಎಸ್.ಪಿ. ಮಹಾಪಾತ್ರ ಅವರ ನೇತೃತ್ವದಲ್ಲಿ ಓಡಿಸ್ಸಾ ರಾಜ್ಯದ ವಿವಿಧ ಕೃಷಿಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಸೇರಿದಂತೆ ಸುಮಾರು ೨೦ ಸಹಕಾರಿ ಮುಖಂಡರು ಕೋಟ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಅಧ್ಯಯನ ಭೇಟಿ ನೀಡಿದರು.
ಕನ್ನಡಪ್ರಭ ವಾರ್ತೆ ಕೋಟ
ನಬಾರ್ಡ್ನ ಉಪಮಹಾಪ್ರಬಂಧಕಿ ಮಾಲಿನಿ ಸುವರ್ಣ ಮತ್ತು ಅಧಿಕಾರಿ ಎಸ್.ಪಿ. ಮಹಾಪಾತ್ರ ಅವರ ನೇತೃತ್ವದಲ್ಲಿ ಓಡಿಸ್ಸಾ ರಾಜ್ಯದ ವಿವಿಧ ಕೃಷಿಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಸೇರಿದಂತೆ ಸುಮಾರು ೨೦ ಸಹಕಾರಿ ಮುಖಂಡರು ಕೋಟ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಅಧ್ಯಯನ ಭೇಟಿ ನೀಡಿದರು.ಈ ಸಂದರ್ಭ ಕೋಟ ಸಹಕಾರಿ ವ್ಯವಸಾಯಕ ಸಂಘ ಅಧ್ಯಕ್ಷ ಡಾ. ಕೃಷ್ಣ ಕಾಂಚನ್, ಸಂಘವು ನಡೆದು ಬಂದ ದಾರಿ, ಸದಸ್ಯತ್ವ, ಸದಸ್ಯರಿಗೆ ಸಂಘದಿಂದ ದೊರಕುವ ವಿವಿಧ ಸಾಲಗಳು, ಸ್ವ ಸಹಾಯ ಸಂಘ ರಚನೆ, ಉಳಿತಾಯ ಕ್ರೋಢೀಕರಣ, ಸಾಲ ವಿತರಣೆ ಮತ್ತು ವಸೂಲಾತಿ, ಸಂಘದ ಸ್ವಂತ ಕಟ್ಟಡಗಳು ಮತ್ತು ಗೋದಾಮುಗಳು, ಸಂಘದ ವ್ಯವಹಾರ ಅಭಿವೃದ್ಧಿ, ಸದಸ್ಯರಿಗೆ ನೀಡಲಾಗುತ್ತಿರುವ ಸೇವೆಗಳು ಮತ್ತು ಸವಲತ್ತುಗಳ ಬಗ್ಗೆ ಅವರಿಗೆ ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಸಂಘದ ನೂತನ ವಿಶಿಷ್ಟ ಯೋಜನೆಗಳಲ್ಲಿ ಒಂದಾದ ‘ಸಕಲ’ ಕೃಷಿ ಉಪಕರಣಗಳ ಮಾರಾಟ ಮಳಿಗೆ ಮತ್ತು ಮಣೂರು ಶಾಖೆಯ ನೂತನ ಶಾಖಾ ಕಟ್ಟಡ, ಗೋದಾಮು, ವಾಣಿಜ್ಯ ಮತ್ತು ವಸತಿ ಸಂಕೀರ್ಣಕ್ಕೆ ಅವರು ಭೇಟಿ ನೀಡಿದರು. ಮಣೂರು ಸಂಘದ ಕಾರ್ಯವೈಖರಿಯ ಬಗ್ಗೆ ಅಧ್ಯಯನ ತಂಡದ ಹಿರಿಯರು ಮೆಚ್ಚುಗೆ ವ್ಯಕ್ತಪಡಿಸಿದರು.
ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ, ಭೇಟಿ ನೀಡಿದ ಅಧಿಕಾರಿಗಳನ್ನು ಸ್ವಾಗತಿಸಿ, ವಂದಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.