ಕನ್ನಡಪ್ರಭ ವಾರ್ತೆ ಮೈಸೂರು
ಜಿಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಯಿ ಮತ್ತು ಮಕ್ಕಳ ಮರಣ ಪ್ರಕರಣಗಳು ಹೆಚ್ಚಾಗಿ ಕೂಲಿಕಾರ್ಮಿಕರ ವರ್ಗದಲ್ಲಿ ಹೆಚ್ಚಿರುತ್ತದೆ. ತಾಯಿ ಮತ್ತು ಮಕ್ಕಳ ಮರಣ ಪ್ರಕರಣಗಳಲ್ಲಿ ಎಸ್ಸಿ, ಎಸ್ಟಿಯವರು ಎಷ್ಟು ಜನ ಇದ್ದರೆ ಎಂಬುದರ ಬಗ್ಗೆ ಆಯೋಗಕ್ಕೆ ವರದಿ ಕಳುಹಿಸಿಕೊಡುವಂತೆ ತಿಳಿಸಿದರು.
ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಕರದ ರೂಪದಲ್ಲಿ ಸಂಗ್ರಹಿಸುವ ಹಣದಲ್ಲಿ ಎಸ್.ಸಿ.ಪಿ/ ಟಿ.ಎಸ್.ಪಿ ಅನುದಾನದಲ್ಲಿ ಸಾಮಾನ್ಯವಾಗಿ ನೀಡಲಾಗುವ ಹಾಸ್ಟಲ್ ಗಳಿಗೆ ಹಾಸಿಗೆ ಆರ್.ಓ ಪ್ಲಾಂಟ್ ಇನ್ನಿತರೆ ವಸ್ತುಗಳ ಬದಲು ಹೊಸ ಕೌಶಲ್ಯಾಭಿವೃದ್ಧಿ ತರಬೇತಿ ಹಾಗೂ ಪರಿಕರಗಳನ್ನು ನೀಡಲು ಯೋಜನೆ ರೂಪಿಸಿ ಎಂದರು.ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿರುವ ಶಾಲೆ ಹಾಗೂ ವಿದ್ಯಾರ್ಥಿನಿಲಯಗಳಲ್ಲಿ ಜಿಲ್ಲಾಧಿಕಾರಿ ಸೇರಿದಂತೆ ಉನ್ನತ ಅಧಿಕಾರಿಗಳೊಂದಿಗೆ ಸಂವಾದ ಕಾರ್ಯಕ್ರಮಗಳನ್ನು ಆಯೋಜಿಸಿ, ಇದರಿಂದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಾಲ್ಗೊಳ್ಳುತ್ತಾರೆ ಎಂದು ಅವರು ಹೇಳಿದರು.
ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಸದಸ್ಯರಾದ ದಿವಾಕರ್, ಗೀತಾ ತಾಮೋಷಿ, ಎಂ. ಕುಂಬ್ಯಯ, ಕಾರ್ಯದರ್ಶಿ ಎಚ್.ಎನ್. ಶಿವರಾಮ್, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್, ಜಿಪಂ ಸಿಇಒ ಎಸ್. ಯುಕೇಶ್ ಕುಮಾರ್, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಮೊದಲಾದವರು ಇದ್ದರು.