ಡಂಬಳ: ಸಮೀಪದ ಪೇಠಾಆಲೂರು ಗ್ರಾಮದಲ್ಲಿ ಬಡತನದ ಕಾರಣದಿಂದ ಎಸ್ಎಸ್ಎಲ್ಸಿ ವಿಜ್ಞಾನ ಪರೀಕ್ಷೆಗೆ ಹಾಜರಾಗದೆ ಕೂಲಿ ಕೆಲಸಕ್ಕೆ ತೆರಳಿದ್ದ ವಿದ್ಯಾರ್ಥಿನಿಯನ್ನು ಅಧಿಕಾರಿಗಳು ಹುಡುಕಿ ಕರೆತಂದು ಪರೀಕ್ಷೆಗೆ ಹಾಜರುಪಡಿಸಿದ ಘಟನೆ ಸೋಮವಾರ ನಡೆದಿದೆ.
ಶಿಕ್ಷಕರು, ಪಾಲಕರ ಪಾತ್ರ: ತಾಲೂಕಿನ ಪ್ರತಿ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಬೇಕು. ಅವರು ಮುಂದಿನ ದಿನಮಾನಗಳಲ್ಲಿ ಉತ್ತಮ ಭವಿಷ್ಯವನ್ನು ಕಟ್ಟಿಕೊಂಡು ದೇಶದ ಭವಿಷ್ಯದ ಪ್ರಜೆಗಳಾಗಬೇಕು. ಪ್ರತಿಯೊಂದು ವಿದ್ಯಾರ್ಥಿ ಪರೀಕ್ಷೆ ಬರೆಯಲು ಶಿಕ್ಷಕರು, ಪಾಲಕರ ಪಾತ್ರ ಬಹಳ ಮುಖ್ಯವಾಗಿದೆ ಎಂದು ಕ್ಷೇತ್ರ ಶಿಕ್ಷಾಧಿಕಾರಿ ಗಂಗಾಧರ ಅಣ್ಣಿಗೇರಿ ತಿಳಿಸಿದರು.
ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿ ಮನೋಹರ ಎಸ್., ಶಿಕ್ಷಕ ಉಮೇಶ ಬೂದಿಹಾಳ ಇದ್ದರು.ಚರಂಡಿ ಸ್ವಚ್ಛ ಮಾಡಲು ಸಾರ್ವಜನಿಕರ ಆಗ್ರಹನರಗುಂದ: ಪಟ್ಟಣದ ಮಾರುತಿ ನಗರದ ಹತ್ತಿರ ವಿವಿಧ ಬಡಾವಣೆಯ ಮೂರು ಚರಂಡಿಗಳ ನೀರು ಬಂದು ಸೇರುತ್ತಿದ್ದು, ಈ ಚರಂಡಿಯನ್ನು ಬಹುದಿನಗಳಿಂದ ಪುರಸಭೆಯವರು ಸ್ವಚ್ಛ ಮಾಡಿಲ್ಲ. ಇದರಿಂದ ನಿವಾಸಿಗಳು ತೊಂದರೆ ಅನುಭವಿಸುತ್ತಿದ್ದಾರೆ.ಚರಂಡಿ ನೀರು ಸರಾಗವಾಗಿ ಹರಿದು ಹೋಗದೆ ನೀರು, ತ್ಯಾಜ್ಯಗಳಿಂದ ಗಬ್ಬು ನಾರುತ್ತಿದೆ. ಈ ಪ್ರದೇಶದಲ್ಲಿ ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿಯಿದೆ. ಈ ಬಗ್ಗೆ ಹಲವಾರು ಬಾರಿ ಸಾರ್ವಜನಿಕರು ಪುರಸಭೆ ಅಧಿಕಾರಿಗಳಿಗೆ ಮೌಖಿಕವಾಗಿ ತಿಳಿಸಿದರೂ ಪ್ರಯೋಜನವಾಗಿಲ್ಲ ಎಂದು ನಿವಾಸಿಗಳು ತಿಳಿಸಿದ್ದಾರೆ.