ಸರ್ಕಾರಿ ಜಮೀನಿನ ಗಡಿ ಗುರುತು ಮಾಡಿದ ಅಧಿಕಾರಿಗಳು

KannadaprabhaNewsNetwork |  
Published : May 05, 2025, 12:53 AM IST
ಫೋಟೋ 4ಪಿವಿಡಿ1ತಾಲೂಕಿನ ವೈ.ಎನ್.ಹೊಸಕೋಟೆ ಗ್ರಾಮದ ಸರ್ಕಾರಿ ಸಂತೆ ಮೈದಾನದ ಜಮೀನು ಕಂದಾಯ ಇಲಾಖೆಯಿಂದ ಸರ್ವೆ ಕಾರ್ಯ ನಡೆಸಲಾಯಿತು.ಫೋಟೋ 4ಪಿವಿಡಿ2.ಪಿವಿಡಿ3ತಾಲೂಕಿನ ವೈ.ಎನ್.ಹೊಸಕೋಟೆಯಲ್ಲಿ ಕೋಟ್ಯಂತರ ಬೆಲೆಬಾಳುವ ಸಂತೆ ಮೈದಾನದ ಅಕ್ರಮ ಒತ್ತುವರಿಗೆ ಕಂದಾಯ ಇಲಾಖೆ ಅಧಿಕಾರಿಗಳು ಬ್ರೌಂಡ್ರಿ ಪಿಕ್ಸ್ ಮಾಡಿದರು. | Kannada Prabha

ಸಾರಾಂಶ

ಜಿಲ್ಲಾಧಿಕಾರಿಗೆ ದೂರು ಬಂದ ಹಿನ್ನಲೆಯಲ್ಲಿ ಕಂದಾಯ ಹಾಗೂ ಸರ್ವೆ ಇಲಾಖೆಯ ಅಧಿಕಾರಿಗಳು ತಾಲೂಕಿನ ವೈ.ಎನ್.ಹೊಸಕೋಟೆಗೆ ಭೇಟಿ ನೀಡಿ ಸಂತೆ ಮೈದಾನಕ್ಕೆ ಮೀಸಲಿರಿಸಿದ್ದ ಸರ್ಕಾರಿ ಜಮೀನಿನ ಪರಿಶೀಲನೆ ಕಾರ್ಯ ನಡೆಸಿದರು.

ಕನ್ನಡಪ್ರಭ ವಾರ್ತೆ ಪಾವಗಡ ಸರ್ಕಾರಿ ವ್ಯಾಪ್ತಿಗೆ ಒಳಪಟ್ಟಿದ್ದ ಕೋಟ್ಯಂತರ ರು ಬೆಲೆಬಾಳುವ ಎರಡು ಎಕರೆ ಜಮೀನು ಒತ್ತುವರಿ ವಿಚಾರಕ್ಕೆ ಸಂಬಂಧಪಟ್ಟಂತೆ ಜಿಪಂ,ಸಿಇಒ ಹಾಗೂ ಜಿಲ್ಲಾಧಿಕಾರಿಗೆ ದೂರು ಬಂದ ಹಿನ್ನಲೆಯಲ್ಲಿ ಕಂದಾಯ ಹಾಗೂ ಸರ್ವೆ ಇಲಾಖೆಯ ಅಧಿಕಾರಿಗಳು ತಾಲೂಕಿನ ವೈ.ಎನ್.ಹೊಸಕೋಟೆಗೆ ಭೇಟಿ ನೀಡಿ ಸಂತೆ ಮೈದಾನಕ್ಕೆ ಮೀಸಲಿರಿಸಿದ್ದ ಸರ್ಕಾರಿ ಜಮೀನಿನ ಪರಿಶೀಲನೆ ಕಾರ್ಯ ನಡೆಸಿದರು.ಪಾವಗಡ ತಾಲೂಕು ವೈ.ಎನ್.ಹೊಸಕೋಟೆ ಗ್ರಾಮದಲ್ಲಿ ಇದೇ ವೈ.ಎನ್.ಹೊಸಕೋಟೆ ಗ್ರಾಪಂ ವ್ಯಾಪ್ತಿಗೆ ಒಳಪಟ್ಟ ಮೂರು ಎಕರೆ ಜಮೀನಿದ್ದು ಈ ಜಮೀನನ್ನು ರೈತರು ಹಾಗೂ ಗ್ರಾಹಕರ ಉಪಯೋಗಕ್ಕಾಗಿ ಮೀಸಲಿರಿಸಲಾಗಿದೆ. ಪ್ರತಿ ಮಂಗಳವಾರ ಈ ಜಾಗದಲ್ಲಿ ತರಕಾರಿ ಹಾಗೂ ಹಣ್ಣು ಹೂವು ಇತರೆ ತರಕಾರಿ,ಇತರೆ ವ್ಯಾಪಾರ ವ್ಯವಹಾರಗಳ ಸಂತೆ ಮಾರುಕಟ್ಟೆ ನಡೆಸಲಾಗುತ್ತಿದೆ.ಗ್ರಾಪಂನಿಂದ ಸಂತೆ ಮೈದಾನಕ್ಕೆ ಮೀಸಲಿರಿಸಿದ್ದ ಮೂರು ಎಕರೆ ಸರ್ಕಾರಿ ಜಮೀನನ್ನು ವೈ.ಎನ್.ಹೊಸಕೋಟೆಯ ಪ್ರಭಾವಿ ಮುಖಂಡರೊಬ್ಬರು ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳುವ ಮೂಲಕ ನಿವೇಶನ ಹಂಚಿಕೆ ಮಾಡಿ ಸ್ಥಳೀಯರಿಗೆ ಮಾರಾಟ ಮಾಡಿದ್ದರು. ಸಾರ್ವಜನಿಕರು ಗಮನ ಸೆಳೆದ ಮೇರೆಗೆ ಸಂತೆ ಮಾರುಕಟ್ಟೆ ಮೈದಾನದ ಜಾಗಕ್ಕೆ ಸಂಬಂಧಪಟ್ಟ ಫಹಣಿ ಹಾಗೂ ಇತರೆ ಅಗತ್ಯ ದಾಖಲೆಯೊಂದಿಗೆ ಇಲ್ಲಿನ ಸಾಮಾಜಿಕ ಹೋರಾಟಗಾರರಾದ ಹಾಗೂ ಮುಖಂಡ ಎನ್.ರಾಮಾಂಜಿನಪ್ಪ ಹಾಗೂ ನಾಗೇಶ ಬಾಬು ದಾಖಲೆ ಸಮೇತ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ವಿವಾದಿತ ಸ್ಥಳಕ್ಕೆ ಭೇಟಿ ನೀಡಿದ ಕಂದಾಯ ತಾಪಂ ಗ್ರಾಪಂ ಹಾಗೂ ತಾಲೂಕು ಸರ್ವೆ ಇಲಾಖೆಯ ಅಧಿಕಾರಿಗಳು ಗ್ರಾಪಂನಿಂದ ಮೀಸಲಿರಿಸಿದ್ದ ಸಂತೆ ಮೈದಾನದ ಜಮೀನಿನ ಸರ್ವೆ ಕಾರ್ಯ ನಡೆಸಿ ಕಲ್ಲು ಹೂಳುವ ಮೂಲಕ ಜಮೀನಿನ ಗಡಿ ಗುರುತು ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ