ಕನ್ನಡಪ್ರಭ ವಾರ್ತೆ ಕೋಲಾರ
ದೇಶಾದ್ಯಂತ ಎಸ್ಐಆರ್ ಬಹಳ ಮಹತ್ವವಾಗಿದ್ದು, ಈ ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಹೊರಗೂಳಿಯಬಾರದು ಸುಮಾರು ೧೧ ದಾಖಲೆಗಳಲ್ಲಿ ಯಾವುದಾದರೂ ಒಂದನ್ನು ಪರಿಗಣಿಸಬಹುದಾಗಿದೆ ರಾಜಕೀಯ ಪಕ್ಷಗಳ ನಾಯಕರು ಬಿಎಲ್ಎ ಗಳು ಬಿಎಲ್ಒಗಳಿಗೆ ಸಂಪೂರ್ಣ ಸಹಕಾರ ನೀಡಬೇಕು ಬಿಎಲ್ಒಗಳ ನೇಮಕ ರಾಜಕೀಯ ಪಕ್ಷಗಳ ಜವಾಬ್ದಾರಿ ಎಂದು ಇದೇ ಸಂದರ್ಭದಲ್ಲಿ ಎಸಿ ತಿಳಿಸಿದರು.
ಓಂಶಕ್ತಿ ಚಲಪತಿ ಮಾತನಾಡಿ, ನಮ್ಮ ಪಕ್ಷದಿಂದ ಎರಡು ಮೂರು ಬಾರಿ ಕಾರ್ಯಾಗಾರ ಮಾಡಲಾಗಿದೆ ಯಾರ ಒತ್ತಡಕ್ಕೂ ಮಣಿಯದೆ ಕೆಲಸ ನಿರ್ವಹಿಸಬೇಕು ಜೊತೆಗೆ ಅಲ್ಪಸಂಖ್ಯಾತ ವಾರ್ಡ್ಗಳಲ್ಲಿ ನಿಷ್ಪಕ್ಷಪಾತವಾಗಿ ಅರ್ಜಿ ಭರ್ತಿ ಮಾಡಬೇಕು ಎಂದು ತಿಳಿಸಿದರು.ಕಂದಾಯ ನಿರೀಕ್ಷಕ ರಾಜೇಂದ್ರ ಪ್ರಸಾದ್, ಕಾಂಗ್ರೆಸ್ ಮುಖಂಡ ಕುರಿಗಳ ರಮೇಶ್, ಬಿಜೆಪಿ ನಗರ ಅಧ್ಯಕ್ಷ ಸಾ.ಮಾ. ಬಾಬು, ಕಚೇರಿ ಕಾರ್ಯದರ್ಶಿ ರಾಜೇಶ್ ಸಿಂಗ್, ಮುಖಂಡರಾದ ಶಿವಕುಮಾರ್, ಶ್ರೀನಿವಾಸ್, ನಾಮಾಲ್ ಮಂಜು, ಶ್ರೀನಾಥ್ ಇದ್ದರು.