ಹೊಸಕೋಟೆ: ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸಮರ್ಪಕವಾಗಿ ಪಾರದರ್ಶಕವಾಗಿ ಪರಿಹಾರ ಒದಗಿಸಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ಬಹುತೇಕ ಕಂದಾಯ ಇಲಾಖೆಗೆ ಸಂಬಂಧಪಟ್ಟ ಸಮಸ್ಯೆಗಳು ವ್ಯಾಪಕವಾಗಿ ಇರುತ್ತವೆ. ಅಧಿಕಾರಿಗಳು ನಾಗರಿಕರಿಗೆ ಸರ್ಕಾರಿ ರೀತಿನೀತಿಗಳನ್ನು ತಿಳಿಸಬೇಕು. ಅದನ್ನು ಬಿಟ್ಟು ನಿರ್ಲಕ್ಷ್ಯ ಹಾಗೂ ಬೇಜಬ್ದಾರಿತನದ ಉತ್ತರ ಹೇಳಬಾರದು ಎಂದು ಸೂಚಿಸಿದರು.
ಜನಸ್ಪಂದನ ಸಭೆಯಲ್ಲಿ ಒಟ್ಟು 73 ಅಹವಾಲುಗಳನ್ನು ಶಾಸಕ ಶರತ್ ಬಚ್ಚೇಗೌಡರಿಗೆ ಸಲ್ಲಿಸಿದರು. ಮುಂದಿನ ಸೋಮವಾರ ಮತ್ತೆ ಸಭೆ ನಡೆಸಲಿದ್ದು ಅಧಿಕಾರಿಗಳು ಸಮಸ್ಯೆಗಳಿಗೆ ಪರಿಹಾರ ಒದಗಿಸಿರಬೇಕು. ಇಲ್ಲವಾದರೆ ಸೂಕ್ತ ಕಾರಣ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.ಸಭೆಯಲ್ಲಿ ತಹಸೀಲ್ದಾರ್ ಶೀತಲ್, ತಾಪಂ ಇಒ ಮುನಿಯಪ್ಪ, ನಗರಸಭೆ ಪೌರಾಯುಕ್ತ ನೀಲಲೋಚನ ಪ್ರಭು, ಕಂದಾಯ ಇಲಾಖೆ ಅಧಿಕಾರಿಗಳು ಹಾಜರಿದ್ದರು.
ಹೊಸಕೋಟೆ ತಾಲೂಕು ಕಚೇರಿಯಲ್ಲಿ ಶಾಸಕ ಶರತ್ ಬಚ್ಚೇಗೌಡರ ನೇತೃತ್ವದಲ್ಲಿ ನಡೆದ ಜನಸ್ಪಂದನ ಸಭೆಯಲ್ಲಿ ಸಾರ್ವಜನಿಕರು ಕುಂದುಕೊರತೆಗಳ ಅಹವಾಲು ಸಲ್ಲಿಸಿದರು.