ಗುಡಿಗೇರಿ ಗ್ರಾಮಕ್ಕೆ ಅಧಿಕಾರಿಗಳ ದೌಡು, ಟ್ಯಾಂಕರ್ ಮೂಲಕ ನೀರು ಪೂರೈಕೆ

KannadaprabhaNewsNetwork |  
Published : May 24, 2026, 02:15 AM IST
23ಕೆಪಿಎಲ್21 ಗುಡಿಗೇರಿ ಗ್ರಾಮಕ್ಕೆ ಅಧಿಕಾರಿಗಳು ಭೇಟಿ ನೀಡಿರುವುದು 23ಕೆಪಿಎಲ್22 ಗುಡಿಗೇರಿ ಗ್ರಾಮದಲ್ಲಿ ಶನಿವಾರ ಟ್ಯಾಂಕರ್ ನೀರು ಪೂರೈಕೆ ಮಾಡಿರುವುದು. | Kannada Prabha

ಸಾರಾಂಶ

ಸಮಸ್ಯೆಯ ಮೇಲೆ ಬೆಳಕು ಚೆಲ್ಲಿದ್ದು ನಿಜ.ಗ್ರಾಮದವರು ಸಮಸ್ಯೆ ಎದುರಿಸುತ್ತಿರುವುದರಿಂದ ತುರ್ತಾಗಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗಿದೆ

ಕೊಪ್ಪಳ: ಗುಡಿಗೇರಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯ ಕುರಿತು ಕನ್ನಡಪ್ರಭ ವಿಶೇಷ ವರದಿ ಪ್ರಕಟಿಸುತ್ತಿದ್ದಂತೆ ಶನಿವಾರ ರಜೆಯ ದಿನವಾಗಿದ್ದರೂ ಅಧಿಕಾರಿಗಳು ದೌಡಾಯಿಸಿದ್ದಾರೆ. ಅಷ್ಟೇ ಅಲ್ಲ,ಗ್ರಾಮಸ್ಥರೊಂದಿಗೆ ಸಮಸ್ಯೆ ಅರಿತು ಕೂಡಲೇ ಟ್ಯಾಂಕರ್ ನೀರು ಪೂರೈಕೆ ಮಾಡಿಸಿದ್ದಾರೆ.

ಗುಡಿಗೇರಿ ಗ್ರಾಮಕ್ಕೆ ಯಾವುದೇ ನೀರಿನ ಮೂಲ ಸ್ಥಳೀಯವಾಗಿ ಇಲ್ಲ. ಕೆರೆಯೂ ಬತ್ತಿದೆ. ಈ ಗ್ರಾಮಕ್ಕೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಮೂಲಕ ನೀರು ಪೂರೈಕೆ ಮಾಡಲಾಗುತ್ತದೆ. ನೀರು ಪೂರೈಕೆಯಲ್ಲಿ ವ್ಯತ್ಯಯವಾಗಿದ್ದರಿಂದ ಆಗಾಗ ಸಮಸ್ಯೆಯಾಗುತ್ತಿದೆ. ತುಂಗಭದ್ರಾ ನದಿಯಲ್ಲಿ ನೀರು ಸಹ ಕೊರತೆಯಾಗಿರುವುದರಿದ ಪೂರೈಕೆಯಲ್ಲಿ ಸಮಸ್ಯೆಯಾಗಿದೆ. ಹೀಗಾಗಿ, ಸಮಸ್ಯೆ ಅರಿತು ತಕ್ಷಣ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ತಾಪಂ ಇಓ ದುಂಡಪ್ಪ ತುರಾದಿ ಹೇಳಿದ್ದಾರೆ.

ಗ್ರಾಮಕ್ಕೆ ಭೇಟಿ ನೀಡಿದ ಬಳಿಕ ಕನ್ನಡಪ್ರಭದೊಂದಿಗೆ ಮಾತನಾಡಿದ ಅವರು, ಸಮಸ್ಯೆಯ ಮೇಲೆ ಬೆಳಕು ಚೆಲ್ಲಿದ್ದು ನಿಜ.ಗ್ರಾಮದವರು ಸಮಸ್ಯೆ ಎದುರಿಸುತ್ತಿರುವುದರಿಂದ ತುರ್ತಾಗಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗಿದೆ ಎಂದರು.

ಗುಡಿಗೇರಿ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ನಿಗಿಸಲು ಶತಾಯಗತಾಯ ಶ್ರಮಿಸಲಾಗುತ್ತಿದೆ.ಗ್ರಾಮದಲ್ಲಿಯೇ ಸಂಪ್ ನಿರ್ಮಾಣ ಮಾಡಿ ಅದಕ್ಕೆ ತುಂಗಭದ್ರಾ ನದಿಯಿಂದ ನೀರು ಪೂರೈಕೆ ಮಾಡಲಾಗುತ್ತದೆ. ಸ್ಥಳೀಯವಾಗಿಯೂ ತುರ್ತು ಸಂದರ್ಭದಲ್ಲಿ ಬೇಕಾಗುತ್ತದೆ ಎಂದು ಬೋರವೆಲ್ ಹಾಕಲಾಗಿದೆ.ಆದರೆ, ಬೋರವೆಲ್ ನಲ್ಲಿ ನೀರು ಬರುತ್ತಿಲ್ಲ. ವಾರದ ಹಿಂದೆಯೇ ಮತ್ತೊಂದು ಬೋರವೆಲ್ ಕೊರೆಯಿಸಲಾಗಿದೆ. ಈಗ ಪುನಃ ಸುತ್ತಮುತ್ತಲ ಪ್ರದೇಶದಲ್ಲಿ ಎಲ್ಲಿಯಾದರೂ ನೀರು ಇದೆಯೂ ಎಂದು ಚೆಕ್ ಮಾಡಿಕೊಂಡು ಬೋರವೆಲ್ ಕೊರೆಸಲಾಗುವುದು. ಹಾಗೆಯೇ ತುಂಗಭದ್ರಾ ನದಿಯಿಂದ ಬಹುಗ್ರಾಮಗಳ ಯೋಜನೆಯ ಮೂಲಕ ನೀರು ಪೂರೈಕೆ ತೊಂದರೆಯಾಗದಂತೆ ಕ್ರವಹಿಸಲು ಸೂಚಿಸಲಾಗಿದೆ. ಹಾಗೊಂದು ವೇಳೆ ಸಮಸ್ಯೆಯಾದ ತಕ್ಷಣ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಗ್ರಾಪಂ ಅಧಿಕಾರಿಗಳು ಸೇರಿದಂತೆ ಅನೇಕರು ಗ್ರಾಮಕ್ಕೆ ಭೇಟಿ ನೀಡಿ ಗ್ರಾಮದಲ್ಲಿನ ಕುಡಿಯುವ ನೀರಿನ ಸಮಸ್ಯೆಯನ್ನು ತಾತ್ಕಾಲಿಕವಾಗಿ ಇತ್ಯರ್ಥ ಮಾಡಲಾಗಿದೆ. ಇದರಿಂದ ಗುಡಿಗೇರಿ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ಕನ್ನಡಪ್ರಭ ವರದಿಯಿಂದ ದೊಡ್ಡ ಉಪಕಾರವಾಯಿತು.ಕಳೆದ ಕೆಲ ದಿನಗಳಿಂದ ಉಂಟಾಗಿದ್ದ ನೀರಿನ ಸಮಸ್ಯೆಗೆ ಪರಿಹಾರವಾಗಿ ಟ್ಯಾಂಕರ್ ನೀರು ಪೂರೈಕೆ ಮಾಡಿದ್ದಾರೆ.ಹಾಗೆಯೇ ಸಂಪಿಗೂ ನೀರು ಪೂರೈಕೆ ಮಾಡುವ ಭರವಸೆ ನೀಡಿದ್ದಾರೆ ಎಂದು ಗ್ರಾಮಸ್ಥ ಜಗದೀಶಗೌಡ ತೆಗ್ಗಿನಮನಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉರಿ ಬಿಸಿಲು ಲೆಕ್ಕಿಸದೆ ಅಂಜನಾದ್ರಿಗೆ ಅಪಾರ ಭಕ್ತಗಣ
ತುಂಗಭದ್ರಾ ನದಿ ಒಡಲಲ್ಲಿ ಮರ್ರಂ ಅಕ್ರಮ