ಅಧಿಕಾರಿಗಳು ಸಾರ್ವಜನಿಕರ ಅಹವಾಲುಗಳಿಗೆ ತಕ್ಷಣ ಸ್ಪಂದಿಸಿ: ಡಿಸಿ ಶಿಲ್ಪಾ ಶರ್ಮಾ

KannadaprabhaNewsNetwork |  
Published : Dec 24, 2025, 01:45 AM IST
ಚಿತ್ರ 23ಬಿಡಿಆರ್50 | Kannada Prabha

ಸಾರಾಂಶ

ಗ್ರಾಮ, ತಾಲೂಕು ಹಾಗೂ ಜಿಲ್ಲಾಮಟ್ಟದಲ್ಲಿ ಸಾರ್ವಜನಿಕರ ಅಹವಾಲುಗಳಿಗೆ ಅಧಿಕಾರಿಗಳು ತಕ್ಷಣವೇ ಸ್ಪಂದಿಸಿ ಪರಿಹರಿಸಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದರು.

ಬೀದರ್: ಗ್ರಾಮ, ತಾಲೂಕು ಹಾಗೂ ಜಿಲ್ಲಾಮಟ್ಟದಲ್ಲಿ ಸಾರ್ವಜನಿಕರ ಅಹವಾಲುಗಳಿಗೆ ಅಧಿಕಾರಿಗಳು ತಕ್ಷಣವೇ ಸ್ಪಂದಿಸಿ ಪರಿಹರಿಸಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದರು.

ಅವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ “ಪ್ರಶಾಸನ ಗಾಂವ್‌ ಕೀ ಓರ " (ಗ್ರಾಮದತ್ತ ಆಡಳಿತ) ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಆಡಳಿತ ಸುಧಾರಣೆ ಇಲಾಖೆಯ ಡಿ.25 ವರೆಗಿನ ಉತ್ತಮ ಆಡಳಿತ ವಾರ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಸಾರ್ವಜನಿಕರ ಅಹವಾಲುಗಳನ್ನು ಪರಿಹರಿಸಲು ಸರ್ಕಾರದಿಂದ ಗ್ರಾಮ, ತಾಲೂಕು ಹಾಗೂ ಜಿಲ್ಲಾಮಟ್ಟದಲ್ಲಿ ವಿವಿಧ ವ್ಯವಸ್ಥೆಗಳನ್ನು ನಿರ್ಮಿಸಲಾಗಿದೆ. ಐಪಿಜಿಆರ್‌ಎಸ್, ಸಕಾಲ ಹಾಗೂ ಇನ್ನಿತರ ಪೋರ್ಟಲ್‍ಗಳಲ್ಲಿ ಬಾಕಿ ಇರುವ ಅಹವಾಲುಗಳನ್ನು ಅಧಿಕಾರಿಗಳು ಪರಿಹರಿಸಬೇಕೆಂದು ತಿಳಿಸಿದರು.

ಎಲ್ಲ ಅಧಿಕಾರಿಗಳು ಡಿ.25 ರೊಳಗಾಗಿ ಬಾಕಿ ಇರುವ ಎಲ್ಲ ಅಹವಾಲುಗಳನ್ನು ಪರಿಹರಿಸಬೇಕೆಂದರು.

ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಮಾತನಾಡಿ, ವಿವಿಧ ಪೋರ್ಟಲ್‍ಗಳಲ್ಲಿ 80 ಅಹವಾಲುಗಳು ಬಾಕಿ ಇವೆ. ಮಹಿಳಾ ಮಕ್ಕಳ ಇಲಾಖೆಯ 40, ಕಂದಾಯ ಇಲಾಖೆಯ 17, ಪಂಚಾಯತ್‍ರಾಜ್ ಇಲಾಖೆಯ 12, ಕೃಷಿ ಇಲಾಖೆಯ 7, ಕೈಗಾರಿಕಾ ಇಲಾಖೆಯ 12 ಸೇರಿದಂತೆ ಉಳಿದೆಲ್ಲ ಇಲಾಖೆಗಳು ಬಾಕಿ ಇರುವ ಅಹವಾಲುಗಳನ್ನು ಬಗೆಹರಿಸಬೇಕೆಂದು ತಿಳಿಸಿದರು.

ಅಧಿಕಾರಿಗಳು ಗ್ರಾಮ, ತಾಲೂಕುಗಳಲ್ಲಿ ಜನಸ್ಪಂದನೆಯ ಉತ್ತಮ ಆಡಳಿತದ ಕಾರ್ಯಾಗಾರಗಳನ್ನು ಹಮ್ಮಿಕೊಂಡು ಛಾಯಾಚಿತ್ರ ಹಾಗೂ ವಿಡಿಯೋಗಳನ್ನು ಕೇಂದ್ರ ಸರ್ಕಾರದ ಆಡಳಿತ ಸುಧಾರಣೆಯ ಇಲಾಖೆ ಪೋರ್ಟಲ್‍ನಲ್ಲಿ ದಾಖಲಿಸಬೇಕೆಂದರು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಶ್ರೀಧರ್, ಅಬಕಾರಿ ಇಲಾಖೆ ಆಯುಕ್ತ ರವಿಶಂಕರ್‌, ಜಿಲ್ಲಾ ಅಂಕಿ ಸಂಖ್ಯೆ ಯೋಜನಾಧಿಕಾರಿ ಸುವರ್ಣ, ಪಂಚಾಯತ್‌ರಾಜ್ ಇಲಾಖೆ ಇಂಜಿನಿಯರ್‌ ಶಿವಾಜಿ ಸೇರಿದಂತೆ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಲವಿನ ಊಟ ಬಡಿಸಲು ಸಿದ್ಧವಾದ ಅಕ್ಕ ಕೆಫೆ
ಚನ್ನಮ್ಮ ಮೂರ್ತಿ ಉದ್ಘಾಟನಾ ಸಮಾರಂಭಕ್ಕೆ ಬಹಿಷ್ಕಾರ