ಕಾಡಾನೆಗಳನ್ನು ಮತ್ತೆ ಕಾಡಿಗಟ್ಟುವಲ್ಲಿ ಅಧಿಕಾರಿಗಳು ಯಶಸ್ವಿ

KannadaprabhaNewsNetwork |  
Published : Mar 06, 2024, 02:16 AM IST
5ಕೆಎಂಎನ್ ಡಿ16,17 | Kannada Prabha

ಸಾರಾಂಶ

ಆನೆಗಳ ಹಿಂಡನ್ನು ಕಂಡ ದಾರಿಹೋಕರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ನಂತರ ಸ್ಥಳಕ್ಕೆ ಧಾವಿಸಿದ ಮದ್ದೂರು ವಲಯ ಅರಣ್ಯ ಅಧಿಕಾರಿಗಳು ಆನೆಗಳು ಆಸು ಪಾಸಿನ ಗ್ರಾಮಗಳಿಗೆ ಮೇಲೆ ದಾಳಿ ಮಾಡದಂತೆ ತೀವ್ರ ಕಟ್ಟೆಚರ ವಹಿಸಿದ್ದರು.

ಕನ್ನಡಪ್ರಭ ವಾರ್ತೆ ಮದ್ದೂರು

ತಾಲೂಕಿನ ಮಾದನಾಯಕನಹಳ್ಳಿಯ ಗಡಿಭಾಗದಲ್ಲಿ ಬೀಡು ಬಿಟ್ಟಿದ್ದ ಕಾಡಾನೆಗಳ ಹಿಂಡನ್ನು ಮತ್ತೆ ಕಾಡಿಗಟ್ಟುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಆನೆಗಳ ದಾಳಿಯಿಂದಾಗಿ ರೈತರು ಬೆಳೆದಿದ್ದ ಲಕ್ಷಾಂತರ ರು. ಬೆಳೆ ನಾಶವಾಗಿದೆ. ತಾಲೂಕು ಬಸವನ ಬೆಟ್ಟದ ಅರಣ್ಯ ಪ್ರದೇಶದಿಂದ ಆಹಾರ ಅರಸಿ ವಲಸೆ ಬಂದಿದ್ದ ಎರಡು ಸಲಗ ಹಾಗೂ ಒಂದು ಹೆಣ್ಣಾನೆ ಭಾನುವಾರ ರಾತ್ರಿ ತೈಲೂರು ಕೆರೆ ಮತ್ತು ಮಾದನಾಯಕನಹಳ್ಳಿ ಗಡಿಭಾಗದಲ್ಲಿ ಪೊದೆಯೊಂದರಲ್ಲಿ ಬಿಡು ಬಿಟ್ಟಿದ್ದವು.

ಆನೆಗಳ ಹಿಂಡನ್ನು ಕಂಡ ದಾರಿಹೋಕರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ನಂತರ ಸ್ಥಳಕ್ಕೆ ಧಾವಿಸಿದ ಮದ್ದೂರು ವಲಯ ಅರಣ್ಯ ಅಧಿಕಾರಿಗಳು ಆನೆಗಳು ಆಸು ಪಾಸಿನ ಗ್ರಾಮಗಳಿಗೆ ಮೇಲೆ ದಾಳಿ ಮಾಡದಂತೆ ತೀವ್ರ ಕಟ್ಟೆಚರ ವಹಿಸಿದ್ದರು.

ರಾತ್ರಿ 11ರ ಸುಮಾರಿಗೆ ಮಂಡ್ಯ ಎಸಿಎಫ್ ಮಹದೇವಸ್ವಾಮಿ ಹಾಗೂ ಮದ್ದೂರು ವಲಯ ಅರಣ್ಯ ಅಧಿಕಾರಿ ಗವಿಯಪ್ಪ ಮತ್ತು ಸಿಬ್ಬಂದಿ ಜಂಟಿ ಕಾರ್ಯಚರಣೆ ನಡೆಸುವ ಮೂಲಕ ಆನೆಗಳ ಹಿಂಡನ್ನು ಮತ್ತೆ ಕಾಡಿಗಟ್ಟಲು ಕ್ರಮ ಕೈಗೊಂಡಿದ್ದರು.

ಆನೆಗಳ ಹಿಂಡು ಆಗಮನ ಮತ್ತು ನಿರ್ಗಮಿಸುವ ಮುನ್ನ ತೈಲೂರು ಕೆರೆ ಹಾಗೂ ಮಾದನಾಯಕನಹಳ್ಳಿ ಗ್ರಾಮಗಳ ಆಸುಪಾಸಿನಲ್ಲಿ ರೈತರ ಬೆಳೆದಿದ್ದ ಅಡಿಕೆ, ಬಾಳೆ, ಜೋಳದ ಫಸಲನ್ನು ನಾಶಪಡಿಸಿದೆ, ಅಲ್ಲದೆ ತೋಟದ ಮನೆ ಮನೆಯೊಂದರ ಕಾಂಪೌಂಡನ್ನು ಧ್ವಂಸಗೊಳಿಸಿದೆ. ಇದರಿಂದ ಒಟ್ಟಾರೆ 10 ಲಕ್ಷಕ್ಕೂ ಮೀರಿ ಹಾನಿ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಆನೆಗಳ ಹಿಂಡು ಈಗ ಚನ್ನಪಟ್ಟಣ ತಾಲೂಕಿನ ಕೂಡ್ಲೂರು ಕೆರೆಯಲ್ಲಿ ಬಿಡು ಬಿಟ್ಟಿದ್ದು. ಅಲ್ಲಿಂದ ಕಾಡಾನೆಗಳನ್ನು ಮತ್ತೆ ಕಾಡಿಗಟ್ಟಲು ಸಂಜೆ ವೇಳೆಗೆ ಕಾರ್ಯಾಚರಣೆ ಕೈಗೊಳ್ಳಲಾಗುವುದು ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ