ಕನ್ನಡಪ್ರಭ ವಾರ್ತೆ ನಂಜನಗೂಡು
ಮೊದಲಿಗೆ ಶ್ರೀಕಂಠೇಶ್ವರ ಸ್ವಾಮಿ ದರ್ಶನ ಪಡೆದುಕೊಂಡ ಅವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನಂತರ ದೇಗುಲದ ಒಳಾವರಣದಲ್ಲಿನ ಗಣಪತಿ, ಸುಬ್ರಹ್ಮಣ್ಯ, ಪಾರ್ವತಮ್ಮನವರ ಗುಡಿಗಳಿಗೂ ತೆರಳಿ ದೇವರ ದರ್ಶನ ಪಡೆದರು.
ಇದಕ್ಕೂ ಮುನ್ನ ದೇವಾಲಯದ ವತಿಯಿಂದ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಬರ ಮಾಡಿಕೊಳ್ಳಲಾಯಿತು. ಅನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ ಅವರು, ಈ ಹಿಂದೆ ಅವರಪ್ಪನಾಣೆ ಕುಮಾರಸ್ವಾಮಿ ಗೆಲ್ಲುವುದಿಲ್ಲ ಎಂದು ಡಿ.ಕೆ. ಶಿವಕುಮಾರ್ ಭವಿಷ್ಯ ನುಡಿದಿದ್ದರು. ಆದರೆ ನಾನು ಗೆದ್ದು ಕೇಂದ್ರ ಸಚಿವನಾಗಿಲ್ಲವೇ. ಹಾಗೆಯೇ ಅವರು ಹೇಳಿದ ಹೇಳಿಕೆಗಳಿಗೆ ತದ್ವಿರುದ್ಧವಾಗಿ ನನಗೆ ಒಳ್ಳೆಯದು ನಡೆಯುತ್ತದೆ. ಅದರಲ್ಲಿ ಯಾವುದೇ ಸಂಶಯ ಬೇಡ ಎಂದು ಹೇಳಿದರು.ಈ ವೇಳೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ವಿಧಾನಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ, ಮಾಜಿ ಸಚಿವ ಸಾ.ರಾ. ಮಹೇಶ್ ಮೊದಲಾದವರು ಇದ್ದರು.
ದೇವಸ್ಥಾನದ ದರ್ಶನದ ಬಳಿಕ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ವಿಶ್ರಾಂತಿಗೆಂದು ಪ್ರವಾಸಿ ಮಂದಿರಕ್ಕೆ ತೆರಳಿದ್ದರು. ಆದರೆ, ಆ ವೇಳೆ ಪ್ರವಾಸಿ ಮಂದಿರಕ್ಕೆ ಬೀಗ ಹಾಕಲಾಗಿತ್ತು. ಪ್ರವಾಸಿ ಮಂದಿರದ ಮುಂಭಾಗ ಸುಮಾರು 10 ನಿಮಿಷ ಕಾದರೂ ಯಾವೊಬ್ಬ ಅಧಿಕಾರಿಗಳೂ ಸ್ಥಳಕ್ಕೆ ಆಗಮಿಸದೆ ಕಿರಿಕಿರಿ ಅನುಭವಿಸಿದರು.
ಮೈಸೂರಿಗೆ ತೆರಳುವ ಮುನ್ನ ಕೆಲ ಸಮಯ ವಿಶ್ರಾಂತಿ ಪಡೆಯಲೆಂದು ಬೈಪಾಸ್ ರಸ್ತೆಯಲ್ಲಿನ ಪ್ರವಾಸಿ ಮಂದಿರಕ್ಕೆ ಆಗಮಿಸಿದರು. ಈ ವೇಳೆ ಸಚಿವರ ಭದ್ರತಾ ಸಿಬ್ಬಂದಿ ಸ್ಥಳೀಯ ಅಧಿಕಾರಿಗಳನ್ನು ಸಂಪರ್ಕಿಸುವ ಪ್ರಯತ್ನ ನಡೆಸಿದರು. ಹೀಗಾಗಿ ಸುಮಾರು 10 ನಿಮಿಷಗಳ ಕಾಲ ತಮ್ಮಕಾರಿನಲ್ಲಿಯೇ ಎಚ್.ಡಿ. ಕುಮಾರಸ್ವಾಮಿ ಕುಳಿತಿದ್ದರು.
ಈ ಕುರಿತು ಲೋಕೋಪಯೋಗಿ ಇಲಾಖೆ ಎಇಇ ಸತ್ಯ ನಾರಾಯಣ್ ಸುದ್ದಿಗಾರರೊಡನೆ ಮಾತನಾಡಿ, ಕಪಿಲಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಇದ್ದುದರಿಂದ ಪ್ರವಾಸಿ ಮಂದಿರದಲ್ಲಿನ ಪೀಠೋಪಕರಣಗಳನ್ನು ಕಟ್ಟಡದ ಮೇಲ್ಭಾಗಕ್ಕೆ ಸ್ಥಳಾಂತರಿಸಲಾಗಿತ್ತು. ಹೀಗಾಗಿ ಪ್ರವಾಸಿ ಮಂದಿರಕ್ಕೆ ಬೀಗ ಹಾಕಲಾಗಿತ್ತು. ಜೊತೆಗೆ ಕೇಂದ್ರ ಸಚಿವರ ಪ್ರವಾಸದ ಬಗ್ಗೆ ಮಾಹಿತಿ ಲಭ್ಯವಿಲ್ಲದ್ದರಿಂದಾಗಿ ಅಚಾತುರ್ಯವಾಗಿದೆ ಎಂದು ಹೇಳಿದರು.
ಕೋಟ್
- ಜಿ. ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾಧಿಕಾರಿ