ಹೊಲದಲ್ಲಿ ವೃದ್ದೆ ಸಂಶಯಾಸ್ಪದ ಸಾವು

KannadaprabhaNewsNetwork |  
Published : Nov 12, 2023, 01:00 AM IST

ಸಾರಾಂಶ

ದೊಡ್ಡಬಳ್ಳಾಪುರ: ರಾಗಿ ಹೊಲವನ್ನು ನೋಡಿಕೊಂಡು ಬರಲು ಹೋದ ವೃದ್ಧೆ ಹೊಲದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಗುಂಜೂರು ಗ್ರಾಮದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.

ದೊಡ್ಡಬಳ್ಳಾಪುರ: ರಾಗಿ ಹೊಲವನ್ನು ನೋಡಿಕೊಂಡು ಬರಲು ಹೋದ ವೃದ್ಧೆ ಹೊಲದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಗುಂಜೂರು ಗ್ರಾಮದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಮೃತರನ್ನು ಚೌಡಮ್ಮ(70) ಎಂದು ಗುರುತಿಸಲಾಗಿದೆ. ಮೃತ ಚೌಡಮ್ಮ ಬೆಳಗ್ಗೆ ರಾಗಿ ಹೊಲವನ್ನ ನೋಡಿಕೊಂಡು ಬರಲು ಹೋದಾಗ ಘಟನೆ ನಡೆದಿದೆ ಎನ್ನಲಾಗಿದ್ದು, ಹೊಲದಲ್ಲಿ ಬಿದ್ದಿದ್ದ ವೃದ್ಧೆಯನ್ನ ಗ್ರಾಮಸ್ಥರು ನೋಡಿದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವದ ಮೇಲೆ ಗಾಯದ ಗುರುತುಗಳು ಕಂಡು ಬಂದಿದ್ದು, ಕೊಲೆ ಸಂಶಯ ವ್ಯಕ್ತವಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಮಲಾಕರ ಭಟ್‌ಗೆ ಸುಚಿತ್ರಾಳಿಂದ ಹನಿಟ್ರ್ಯಾಪ್‌! - ಖಾಸಗಿ ಕ್ಷಣಗಳ ವಿಡಿಯೋ ಮಾಡಿ ಬ್ಲ್ಯಾಕ್‌ ಮೇಲ್‌
ರಾಜಧಾನಿಯಲ್ಲಿ ಡ್ರಗ್ಸ್ ಬೇಟೆ : ಸಾವಿರ ವ್ಯಸನಿಗಳ ಸೆರೆ