ಚಿಕ್ಕಮಗಳೂರು ವಕೀಲರ ಸಂಘ ಆಯೋಜಿಸಿದ್ಧ ಕಾನೂನು ಅರಿವು ಕಾರ್ಯಕ್ರಮ
ಹಿರಿಯ ನಾಗರಿಕರ ಮೂಲಭೂತ ಅಗತ್ಯಗಳನ್ನು ಪೂರೈಸಲು ನಿಯಮಿತ ಪಿಂಚಣಿ ಒದಗಿಸುವ ಮೂಲಕ ಅವರ ಜೀವನ ಮಟ್ಟವನ್ನು ಸುಧಾರಿಸುವುದು ಈ ಯೋಜನೆ ಗುರಿಯಾಗಿದೆ. ಈ ಯೋಜನೆಯಡಿ ಹಿರಿಯ ನಾಗರಿಕರಿಗೆ ಪ್ರತಿ ತಿಂಗಳು ₹600 ಹಾಗೂ 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ₹1200 ನೀಡಲಾಗುವುದು ಎಂದರು. ಸಹಾಯಕ ಕಾನೂನು ಅಭಿರಕ್ಷಕ ರಜತ್ ಅವರು, ಕಾನೂನು ಸೇವಾ ಪ್ರಾಧಿಕಾರದ ಸವಲತ್ತು ಕುರಿತು ಮಾತನಾಡಿ, ಬಡವರು ಅಥವಾ ಅನ್ಯಾಯಕ್ಕೆ ಒಳಗಾದವರು ನ್ಯಾಯಾಲಯದಲ್ಲಿ ಪ್ರಕರಣ ಎದುರಿಸಲಾಗದಿರುವವರಿಗೆ ಉಚಿತವಾಗಿ ವಕೀಲರ ನೇಮಿಸುವ ಮೂಲಕ ಪ್ರಕರಣ ಇತ್ಯರ್ಥಗೊಳ್ಳುವವರೆಗೆ ಆ ವ್ಯಕ್ತಿಗೆ ಸೌಲಭ್ಯ ಕಲ್ಪಿಸಿಕೊಡಲಿದೆ ಎಂದು ತಿಳಿಸಿದರು.ಉಪ ಪ್ರಧಾನ ಕಾನೂನು ಅಭಿರಕ್ಷಕ ಹಾಗೂ ವಕೀಲರ ಸಂಘದ ಖಜಾಂಚಿ ಡಿ.ಬಿ.ದೀಪಕ್ ಮಾತನಾಡಿ, ಸಾರ್ವಜನಿಕರ ಸಂಕಷ್ಟ, ಸಮಸ್ಯೆ ಹಾಗೂ ಶೋಷಣೆಗೆ ಒಳಗಾದವರಿಗೆ ನ್ಯಾಯಾಲಯ ಸಂಪೂರ್ಣವಾಗಿ ಸಹಕರಿಸಲಿದೆ. ಜೊತೆಗೆ ಕಾನೂನಿ ನ್ವಯ ದೊರೆಯುವ ಸವಲತ್ತು ಸೂಕ್ತ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರ್ಕಾರಿ ವಕೀಲ ಸಿ.ಸತೀಶ್ ವಹಿಸಿದ್ದರು. ಈ ವೇಳೆ ಜೀವನ್ ಸಂಧ್ಯಾ ವೃದ್ಧಾಶ್ರಮದ ಮುಖ್ಯಸ್ಥ ಹರಿಸಿಂಗ್ ಹಾಗೂ ವೃದ್ಧರು ಉಪಸ್ಥಿತರಿದ್ದರು. 17 ಕೆಸಿಕೆಎಂ 3ಚಿಕ್ಕಮಗಳೂರು ನಗರದ ರಾಂಪುರ ಸಮೀಪದ ಜೀವನ್ ಸಂಧ್ಯಾ ವೃದ್ಧಾಶ್ರಮದಲ್ಲಿ ಆಯೋಜಿಸಿದ್ಧ ಕಾನೂನು ಅರಿವು ಕಾರ್ಯಕ್ರಮದಲ್ಲಿ ಸಹಾಯಕ ಕಾನೂನು ಅಭಿರಕ್ಷಕ ರವೀಂದ್ರ ಮಾತನಾಡಿದರು.