ಹಳೇಹುಬ್ಬಳ್ಳಿ: ಅದ್ಧೂರಿ ಬಣ್ಣದೋಕುಳಿ

KannadaprabhaNewsNetwork |  
Published : Mar 05, 2026, 02:00 AM IST
ಹಳೇ ಹುಬ್ಬಳ್ಳಿಯಲ್ಲಿ ಬುಧವಾರ ಹಿಂದೂ-ಮುಸಲ್ಮಾನ್‌ ಬಾಂಧವರು ಪರಸ್ಪರ ಚಕ್ಕಡಿ ಬಂಡಿ ಎಳೆದು, ಪರಸ್ಪರ ಬಣ್ಣ ಹಚ್ಚಿ ಸಂಭ್ರಮಿಸಿದರು. | Kannada Prabha

ಸಾರಾಂಶ

ಹಳೇ ಹುಬ್ಬಳ್ಳಿ ಹಾಗೂ ಆನಂದ ನಗರದಲ್ಲಿ ಬುಧವಾರ ನಡೆದ ರತಿ-ಕಾಮಣ್ಣ ಮೂರ್ತಿಗಳ ಮೆರವಣಿಗೆಯಲ್ಲಿ ಮುಸಲ್ಮಾನ ಬಾಂಧವರು ಪಾಲ್ಗೊಂಡು ಪರಸ್ಪರ ಬಣ್ಣ ಹಚ್ಚಿ ಸಂಭ್ರಮಿಸಿದರು.

ಹುಬ್ಬಳ್ಳಿ:

ಹಳೇಹುಬ್ಬಳ್ಳಿ, ವಿದ್ಯಾನಗರ, ಕೇಶ್ವಾಪುರ, ಹಿರೇಪೇಟೆ ಸೇರಿದಂತೆ ತಾಲೂಕಿನ ಗ್ರಾಮೀಣ ಭಾಗದ ಹಲವೆಡೆ ಬುಧವಾರ ಕಾಮದಹನ ಮಾಡುವ ಮೂಲಕ ಹೋಳಿ ಹಬ್ಬ ಆಚರಿಸಲಾಯಿತು. ಜತೆಗೆ ಹಳೇ ಹುಬ್ಬಳ್ಳಿಯ ಹಲವು ಭಾಗಗಳಲ್ಲಿ ಹಿಂದೂ-ಮುಸಲ್ಮಾನ್‌ ಬಾಂಧವರು ತಂಪು ಪಾನೀಯ ಹಂಚುವ ಮೂಲಕ ಪರಸ್ಪರ ಬಣ್ಣದಾಟವಾಡಿ ಭಾವೈಕ್ಯತೆಗೆ ಸಾಕ್ಷಿಯಾದರು.

ಮಂಗಳವಾರ ಸಂಜೆ ಇಲ್ಲಿನ ಹಳೇಹುಬ್ಬಳ್ಳಿಯ ಚೆನ್ನಪೇಟ, ಹಿರೇಪೇಟ, ನೇಕಾರ ನಗರ, ಕೃಷ್ಣಾಪುರ ಓಣಿ, ಹಿರೇಪೇಟೆ ಓಣಿ, ಇಂಡಿ ಪಂಪ್‌, ಅಂಬೇಡ್ಕರ್‌ ನಗರ, ಘೋಡ್ಕೆ ಓಣಿ, ಕೇಶ್ವಾಪುರದ ಕೆಲವು ಭಾಗ, ಗೋಪನಕೊಪ್ಪದ ಕೆಲವು ಭಾಗ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಪ್ರತಿಷ್ಠಾಪಿಸಲಾಗಿದ್ದ ರತಿ-ಕಾಮಣ್ಣರ ಮೂರ್ತಿಗಳನ್ನು ಬುಧವಾರ ಬೆಳಗ್ಗೆ ಅದ್ಧೂರಿಯಾಗಿ ಮೆರವಣಿಗೆ ನಡೆಸಿ ಬಳಿಕ ದಹನ ಮಾಡಿ ಓಕುಳಿ ಆಡಿದರು. ಹಲವೆಡೆ ಕರಿಬಂಡಿ ಹಾಗೂ ಚಕ್ಕಡಿಗಳಲ್ಲಿ ರತಿ- ಕಾಮಣ್ಣರ ಮೂರ್ತಿಗಳನ್ನಿರಿಸಿ ಯುವಕರೇ ಚಕ್ಕಡಿ ಹಾಗೂ ಕರಿಬಂಡಿ ಎಳೆಯುವ ಮೂಲಕ ಮೆರವಣಿಗೆಗೆ ಮೆರುಗು ತಂದರು. ಹಲವೆಡೆ ಆಯೋಜಿಸಲಾಗಿದ್ದ ರೇನ್‌ ಡ್ಯಾನ್ಸ್‌ನಲ್ಲಿ ಯುವಕ-ಯುವತಿಯರು, ಮಕ್ಕಳು ಕುಣಿದು ಕುಪ್ಪಳಿಸಿದರು.

ಭಾವೈಕ್ಯತೆಯ ಬಣ್ಣದೋಕುಳಿ:

ಹಳೇ ಹುಬ್ಬಳ್ಳಿ ಹಾಗೂ ಆನಂದ ನಗರದಲ್ಲಿ ಬುಧವಾರ ನಡೆದ ರತಿ-ಕಾಮಣ್ಣ ಮೂರ್ತಿಗಳ ಮೆರವಣಿಗೆಯಲ್ಲಿ ಮುಸಲ್ಮಾನ ಬಾಂಧವರು ಪಾಲ್ಗೊಂಡು ಪರಸ್ಪರ ಬಣ್ಣ ಹಚ್ಚಿ ಸಂಭ್ರಮಿಸಿದರು. ರಂಜಾನ್‌ ತಿಂಗಳ ಉಪವಾಸ ವ್ರತಾಚರಣೆ ಆರಂಭವಾಗಿದ್ದರೂ ರಂಗಪಂಚಮಿಯಲ್ಲಿ ಮುಸಲ್ಮಾನರು ಪಾಲ್ಗೊಂಡು ಹಿಂದು ಬಾಂಧವರಿಗೆ ಬಣ್ಣ ಹಚ್ಚಿ ಸಂಭ್ರಮಿಸುವ ಮೂಲಕ ಭಾವೈಕ್ಯತೆಗೆ ಸಾಕ್ಷಿಯಾದರು. ಹಲವೆಡೆ ಮುಸಲ್ಮಾನ್‌ ಬಾಂಧವರಿಂದ ಮಸೀದಿಗಳ ಬಳಿ, ಹಲವೆಡೆ ತಂಪು ಪಾನೀಯ ವ್ಯವಸ್ಥೆ ಮಾಡಿರುವುದು ಕಂಡುಬಂದಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಣ್ಣದೋಕುಳಿಯಲ್ಲಿ ಮಿಂದೆದ್ದ ಧಾರವಾಡಿಗರು!
ಸಮಾನತೆ ತರಲು ಶ್ರಮಿಸಿದವರು ಕೈವಾರ ತಾತಯ್ಯ: ಅರವಿಂದ