ಓಡಾಡುವ ರಸ್ತೆಯಲ್ಲಿ ಗುಟ್ಕಾ ಉಗಿಯುವುದು ಮತ್ತು ಕಸ ಎಸೆದಿದ್ದಕ್ಕೆ ಬೈದ ವೃದ್ಧನ ಬರ್ಬರ ಹತ್ಯೆ

KannadaprabhaNewsNetwork |  
Published : Aug 10, 2024, 01:37 AM ISTUpdated : Aug 10, 2024, 07:10 AM IST
ಹತ್ಯೆಯಾದ ಸಿದ್ದಪ್ಪ | Kannada Prabha

ಸಾರಾಂಶ

ಓಡಾಡುವ ರಸ್ತೆಯಲ್ಲಿ ಗುಟ್ಕಾ ಉಗಿಯುವುದು ಮತ್ತು ಕಸ ಎಸೆಯುವ ಕ್ಲುಲ್ಲಕ ವಿಷಯಕ್ಕೆ ವೃದ್ದನನ್ನೇ ಯುವಕನೊಬ್ಬ ಕೊಂದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿಯಲ್ಲಿ ನಡೆದಿದೆ.

 ದಾಸರಹಳ್ಳಿ :  ಓಡಾಡುವ ರಸ್ತೆಯಲ್ಲಿ ಗುಟ್ಕಾ ಉಗಿಯುವುದು ಮತ್ತು ಕಸ ಎಸೆಯುವ ಕ್ಲುಲ್ಲಕ ವಿಷಯಕ್ಕೆ ವೃದ್ದನನ್ನೇ ಯುವಕನೊಬ್ಬ ಕೊಂದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿಯಲ್ಲಿ ನಡೆದಿದೆ.

ಸಿದ್ದಪ್ಪ(70) ಹತ್ಯೆಯಾದ ವೃದ್ದ. ತುಮಕೂರು ಜಿಲ್ಲೆ ಶಿರಾ ಮೂಲದ ಪುನೀತ್‌ (24) ಬಂಧಿತ ಆರೋಪಿ. ಶುಕ್ರವಾರ ಬೆಳಗ್ಗೆ 9ಕ್ಕೆ ಆರೋಪಿ ಪುನೀತ್, ಕಸ ತುಂಬಿದ ಕವರ್ ಎಸೆದು, ರಸ್ತೆಯಲ್ಲೇ ಗುಟ್ಕಾ ಉಗಿದು ಹೋಗುತ್ತಿದ್ದ. ಈ ವೇಳೆ ಹಿಂದೆ ಬರುತ್ತಿದ್ದ ಸಿದ್ದಪ್ಪ ಯುವಕನಿಗೆ ಬೈದಿದ್ದಾನೆ.

ಇಷ್ಟಕ್ಕೆ ಕುಪಿತಗೊಂಡ ಯುವಕ, ಸಮೀಪದ ಮನೆಯಿಂದ ಮಚ್ಚು ತಂದು ವೃದ್ದನ ಕುತ್ತಿಗೆಯನ್ನು ಕಡಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಕೊಲೆ ಬಳಿಕ ಮನೆಗೆ ತೆರಳಿ ತನ್ನ ತಾಯಿಯ ಜೊತೆ ಚಿಕ್ಕಬಿದರಕಲ್ಲಿನಲ್ಲಿ ಇರುವ ತನ್ನ ಅಣ್ಣನ ಮನೆಯಲ್ಲಿ ತಲೆಮರೆಸಿಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಕಳೆದ 10 ವರ್ಷಗಳ ಹಿಂದೆ ಪ್ರತಿಷ್ಠಿತ ಹಿಮಾಲಯ ಡ್ರಗ್ಸ್ ಕಂಪನಿ ಕೆಲಸಕ್ಕಿದ್ದು ನಿವೃತ್ತಿ ಹೊಂದಿದ್ದರು. ಬಳಿಕ ತಮ್ಮ ಬಳಿಯಿದ್ದ ಸುಮಾರು 10ರಿಂದ 15 ಮನೆಯನ್ನು ಬಾಡಿಗೆ ಕೊಟ್ಟು, ನಿವೃತ್ತಿ ಜೀವನ ಸಾಗಿಸುತ್ತಿದ್ದರು. ಸ್ವಚ್ಚತೆ ವಿಷಯದಲ್ಲಿ ಬಾಡಿಗೆ ಮನೆಯವರ ಜೊತೆ ಸಣ್ಣಪುಟ್ಟ ಗಲಾಟೆ ಬಿಟ್ಟರೆ ಬೇರೆ ಯಾವುದೇ ತಕರಾರು ಇರಲಿಲ್ಲ. ಹೀಗಿರುವಾಗ ಇಂತಹದೊಂದು ದುರ್ಘಟನೆ ನಡೆದು ಹೋಗಿದೆ. ಇನ್ನು ಸ್ಥಳಕ್ಕೆ ಬಂದ ಸೀನ್ ಅಫ್ ಕ್ರೈಂ ಟೀಮ್​ನಿಂದ ತನಿಖಾ ಕಾರ್ಯ ನಡೆಯುತ್ತಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿಜೃಂಭಣೆಯ ಚಂದ್ರಮೌಳೇಶ್ವರ ಸ್ವಾಮಿ ರಥೋತ್ಸವ
ಸನಾತನ ಪರೀಕ್ಷೆಗೊಳಗಾದ್ರೂ ಅಳಿಸಲಸಾಧ್ಯ: ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್